ಮೇ 16ರಿಂದ ಆಗುಂಬೆ ಘಾಟ್ ರಸ್ತೆ ವಾಹನ ಸಂಚಾರಕ್ಕೆ ಮುಕ್ತ
ಶಿವಮೊಗ್ಗ, ಮೇ 14 : ಆಗುಂಬೆ ಘಾಟ್ ರಸ್ತೆಯಲ್ಲಿ ಮೇ 16 ರಿಂದ ವಾಹನ ಸಂಚಾರ ಆರಂಭವಾಗಲಿದೆ. ಏಪ್ರಿಲ್ 1ರಿಂದ ರಸ್ತೆ ದುರಸ್ತಿಗಾಗಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ. ಮೇ 16ರಿಂದ ದ್ವಿಚಕ್ರ ವಾಹನ, ಕಾರು ಮತ್ತು ಮಿನಿ ಬಸ್ಗಳು ಘಾಟ್ ರಸ್ತೆಯಲ್ಲಿ ಸಂಚಾರ ನಡೆಸಬಹುದಾಗಿದೆ.
ಭಾರಿ ಸರಕು ಸಾಗಣೆ ವಾಹನಗಳಿಗೆ ಮಾತ್ರ ಪ್ರವೇಶವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕಾಂಕ್ರಿಟ್ ಕಾಮಗಾರಿ ಕ್ಯೂರಿಂಗ್ ಹಂತದಲ್ಲಿರುವುದರಿಂದ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಜೂನ್ 1ರ ತನಕ ಭಾರಿ ವಾಹನಗಳು ಸಂಚಾರ ನಡೆಸುವಂತಿಲ್ಲ.

ಕಾಮಗಾರಿ ಪೂರ್ಣಗೊಂಡಿಲ್ಲ : ಆಗುಂಬೆ ಘಾಟ್ನ 7ನೇ ತಿರುವಿನಲ್ಲಿ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಕೆಲವು ಮರಗಳನ್ನು ಕಡಿದು ಕಾಮಗಾರಿ ನಡೆಸಬೇಕಿತ್ತು. ಆದರೆ, ವನ್ಯಜೀವಿ ಮಂಡಳಿ ಅನುಮತಿ ನೀಡದ ಪರಿಣಾಮ ಕಾಮಗಾರಿ ಇನ್ನೂ ಅಂತಿಮಗೊಂಡಿಲ್ಲ.
ತಾತ್ಕಾಲಿಕವಾಗಿ ವಾಹನಗಳಿಗೆ ತೊಂದರೆ ಆಗದಂತೆ ರಸ್ತೆಯ ಸುತ್ತಲೂ ಬ್ಯಾರಿಕೇಡ್ಗಳನ್ನು ಹಾಕಲಾಗಿದೆ. 7ನೇ ತಿರುವಿನಲ್ಲಿ ಸೇರಿದಂತೆ ಹಲವು ಕಡೆ ತುರ್ತು ಕಾಮಗಾರಿಗೆ ಅವಕಾಶ ನೀಡುವಂತೆ ಕೋರಿ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಪತ್ರ ಬರೆಯಲಾಗಿದೆ.
2018ರ ಜುಲೈ 10 ಮತ್ತು 13ರಂದು ಸುರಿದ ಮಳೆಯಿಂದಾಗಿ ಆಗುಂಬೆ ಘಾಟ್ ರಸ್ತೆಯ 7 ಮತ್ತು 14ನೇ ತಿರುವಿನಲ್ಲಿ ಹಾಗೂ ಆನೆ ಬಂಡೆ ಬಳಿ ಗುಡ್ಡ ಕುಸಿತ ಉಂಟಾಗಿತ್ತು. ಈ ಭಾಗದಲ್ಲಿ ಶಾಶ್ವತ ದುರಸ್ತಿ ಕಾಮಗಾರಿಯನ್ನು ನಡೆಸಲು ಘಾಟ್ ರಸ್ತೆ ಬಂದ್ ಮಾಡಲಾಗಿತ್ತು.
ಏಪ್ರಿಲ್ 1 ರಿಂದ 30ರ ತನಕ ಆಗುಂಬೆ ಘಾಟ್ನಲ್ಲಿ ವಾಹನ ಸಂಚಾರ ಬಂದ್ ಆಗಿತ್ತು. ಬಳಿಕ ವಾಹನ ಸಂಚಾರ ನಿಷೇಧವನ್ನು ಮೇ 15ರ ತನಕ ವಿಸ್ತರಣೆ ಮಾಡಲಾಗಿತ್ತು.
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ












Click it and Unblock the Notifications