ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಕ್ರೀಡಾಕೂಟದಲ್ಲಿ ಗಲಾಟೆ, ಶಿರಾಳಕೊಪ್ಪದಲ್ಲಿ ಅಂಗಡಿಗಳು ಬಂದ್

|
Google Oneindia Kannada News

ಶಿವಮೊಗ್ಗ, ಆಗಸ್ಟ್ 22: ಶಾಲಾ ಮಟ್ಟದ ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರವಾಗಿ ಶುರುವಾದ ಗಲಾಟೆಯಿಂದಾಗಿ ಶಿರಾಳಕೊಪ್ಪ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ದಿಢೀರ್ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ.

ಶಿರಾಳಕೊಪ್ಪದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ವಲಯ ಮಟ್ಟದ ಶಾಲಾ ಕ್ರೀಡಾಕೂಟದ ವೇಳೆ ಕ್ಷುಲ್ಲಕ ವಿಚಾರವಾಗಿ ಗಲಾಟೆಯಾಗಿದೆ. ಮಕ್ಕಳೊಂದಿಗೆ ಬಂದಿದ್ದ ಪೋಷಕರು ಕೂಡ ಮಾತಿಗೆ ಮಾತು ಬೆಳೆಸಿದ್ದಾರೆ. ಬಳಿಕ ಕ್ರೀಡಾಂಗಣದಿಂದ ಹೊರ ಬಂದ ವೇಳೆ ಗಲಾಟೆ ಹೆಚ್ಚಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಂಗಳೂರು ಹಿಜಾಬ್ ವಿವಾದ: ಟಿಸಿ ಪಡೆದ 145 ವಿದ್ಯಾರ್ಥಿನಿಯರುಮಂಗಳೂರು ಹಿಜಾಬ್ ವಿವಾದ: ಟಿಸಿ ಪಡೆದ 145 ವಿದ್ಯಾರ್ಥಿನಿಯರು

ಯುವಕನ ಮೇಲೆ ಹಲ್ಲೆ

ಕ್ರೀಡಾಂಗಣದಿಂದ ಹೊರ ಬಂದ ಒಂದು ಕೋಮಿನ ಯುವಕರ ಗುಂಪು ಮತ್ತೊಂದು ಕೋಮಿನ ಗುಂಪಿನ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಶಿರಾಳಕೊಪ್ಪ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ. ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದು, ಗಸ್ತು ಆರಂಭಿಸಿದ್ದಾರೆ. ಗಲಾಟೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

All Shops Closed in Shiralakoppa after Clash between 2 Groups in Sports Event

ಶಿವಮೊಗ್ಗ ನಗರದಲ್ಲಿ ಇಂತಹ ಘಟನೆಗಳು ಹಾಗಿಂದಾಗೆ ನಡೆಯುತ್ತಿವೆ, ಕಳೆದ ವಾರ ಶಿವಮೊಗ್ಗದಲ್ಲಿ ಸಾವರ್ಕರ್‌ ಫೋಸ್ಟರ್ ಹಾಕುವ ವಿಚಾರಕ್ಕೆ ಜಗಳ ನಡೆದಿದ್ದುಎರಡು ದಿನಗಳವರೆಗೆ ನಗರದ ಕೆಲೆವೆ ನಿಷೇಧಾಜ್ಞೆ ಏರಲಾಗಿತ್ತು. ಇದರಿಂದ ವರ್ತಕರಿಗೆ ಕೋಟ್ಯಂತರ ರೂಪಾಯಿ ನಷ್ಟವನ್ನುಂಟು ಮಾಡಿತ್ತು. ಆ ಘಟನೆ ಮುಗಿಯುವ ಮುನ್ನ ಜಿಲ್ಲೆಯಲ್ಲಿ ಮತ್ತೊಂದು ಘಟನೆ ನಡೆದಿದ್ದು, ಜನತೆಯಲ್ಲಿ ಆತಂಕ ಮನೆ ಮಾಡಿದೆ.

English summary
Following the clash between two communities on monday local administration directed to close of all shopsMonday in shiralakoppa, Shivamogga district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X