ವ್ಯಾಪಾರ ವಹಿವಾಟಿಗೆ ಅವಕಾಶ ನೀಡಿ: ಜಿಲ್ಲಾಧಿಕಾರಿಗೆ ಮನವಿ
ಶಿವಮೊಗ್ಗ, ಡಿಸೆಂಬರ್ 9: ಶಿವಮೊಗ್ಗ ನಗರದಲ್ಲಿ ಜಾರಿ ಮಾಡಲಾಗಿರುವ ಸೆಕ್ಷನ್ 144 ನಿಂದಾಗಿ ವ್ಯಾಪಾರ ವಹಿವಾಟಿಗೆ ತೊಂದರೆಯಾಗುತ್ತಿದ್ದು, ಬೆಳಗ್ಗೆ 7 ರಿಂದ ಸಂಜೆ 5ರ ವರೆಗೂ ಅವಕಾಶ ನೀಡುವಂತೆ ನಗರದ ವಾಣಿಜ್ಯೋದ್ಯಮಿಗಳು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತಂತೆ ಶಿವಮೊಗ್ಗ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘಟನೆಯ ಸದಸ್ಯರು, ಕಳೆದೊಂದು ವಾರದಿಂದ ನಗರದಲ್ಲಿ ಹೇರಲಾಗಿರುವ ಕರ್ಫ್ಯೂನಿಂದಾಗಿ ವ್ಯಾಪಾರ ವಹಿವಾಟಿಗೆ ತೊಂದರೆಯಾಗಿದ್ದು, ಇದು ಆರ್ಥಿಕವಾಗಿ ನಷ್ಟವುಂಟು ಮಾಡುತ್ತಿದೆ ಎಂದು ಹೇಳಿದರು.
ಈಗಾಗಲೇ ಕೋವಿಡ್-19 ಲಾಕ್ ಡೌನ್'ನಿಂದಾಗಿ ನಮಗೆ ಬಹಳಷ್ಟು ನಷ್ಟವುಂಟಾಗಿದೆ. ಇಂತಹ ಸಂದರ್ಭದಲ್ಲಿ ಈ ರೀತಿ ಸೆಕ್ಷನ್ ಹಾಕಿರುವುದು ವ್ಯಾಪಾರ ಮಾಡಲು ತೊಂದರೆಯುಂಟಾಗಿದೆ ಎಂದು ಜಿಲ್ಲಾಧಿಕಾರಿಗೆ ತಿಳಿಸಿದರು.

ಶಿವಮೊಗ್ಗ ನಗರದ ವ್ಯಾಪಾರ ವಹಿವಾಟಿಗೆ ಉಂಟಾಗಿರುವ ತೊಂದರೆಯಿಂದಾಗಿ ಆರ್ಥಿಕ ನಷ್ಟವಾಗುತ್ತಿದೆ. ದಯವಿಟ್ಟು ಇದನ್ನು ನಿವಾರಿಸಿ, ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ವ್ಯವಹಾರಕ್ಕೆ ಅವಕಾಶ ಕಲ್ಪಿಸಿ ಎಂದು ಕೋರಿದ್ದಾರೆ.
ಮನವಿ ಆಲಿಸಿರುವ ಶಿವಮೊಗ್ಗ ಜಿಲ್ಲಾಧಿಕಾರಿಗಳು ಐಜಿ ಅವರ ಜೊತೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿರುವುದಾಗಿ ವರದಿಯಾಗಿದೆ.












Click it and Unblock the Notifications