ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಂಬ್ಲಿಗೊಳ್ಳ ಜಲಾಶಯ ಭರ್ತಿ; ಸಂಸದ ಬಿ.ವೈ.ರಾಘವೇಂದ್ರ ಬಾಗಿನ ಅರ್ಪಣೆ‌

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಆಗಸ್ಟ್‌ 13: ಶಿಕಾರಿಪುರ/ ಸಾಗರ ತಾಲೂಕಿನ ಜೀವನಾಡಿ, ಅಂಜನಾಪುರ ಜಲಾಶಯ ಭರ್ತಿಯಾದ ಬೆನ್ನಲ್ಲೇ ಅಂಬ್ಲಿಗೊಳ್ಳ ಜಲಾಶಯ ಕೂಡ ಭರ್ತಿಯಾಗಿದೆ. ಹೀಗಾಗಿ ಇಂದು ಸಂಸದ ಬಿ.ವೈ.ರಾಘವೇಂದ್ರ ಪತ್ನಿ ಪುತ್ರರೊಂದಿಗೆ ಇಂದು ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

ಇದೇ ವೇಳೆ, ಜಲಾಶಯದ ಸುತ್ತಮುತ್ತ ಪ್ರದೇಶಗಳನ್ನು ಅಭಿವೃದ್ಧಿಪಡಿಸಿ ಪ್ರವಾಸಿತಾಣವಾಗಿ ಮಾರ್ಪಾಡು ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಅಂಬ್ಲಿಗೊಳ್ಳ ಜಲಾಶಯ ತಾಲೂಕಿನ ಅತ್ಯಂತ ದೊಡ್ಡ ಜಲಾಶಯವಾಗಿದೆ. ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಸ್ವಲ್ಪ ತಡವಾಗಿ ಭರ್ತಿಯಾಗಿದೆ. ರೈತರಿಗೆ ಅನುಕೂಲವಾಗುವಂತೆ ತಾಲೂಕಿನ ಎಲ್ಲಾ ಹೋಬಳಿಗೂ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಶೀಘ್ರ ಪೂರ್ಣಗೊಳ್ಳಲಿದೆ"‌ ಎಂದು ಹೇಳಿದರು.

Shivamogga: Ambligolla Reservoir Filled And BY Raghavendra Offer Bagina

 ತುಂಬಿದ ಅಂಜನಾಪುರ ಜಲಾಶಯ; ಬಾಗಿನ ಅರ್ಪಿಸಿದ ಬಿ.ವೈ.ರಾಘವೇಂದ್ರ ತುಂಬಿದ ಅಂಜನಾಪುರ ಜಲಾಶಯ; ಬಾಗಿನ ಅರ್ಪಿಸಿದ ಬಿ.ವೈ.ರಾಘವೇಂದ್ರ

ಈ ಸಂದರ್ಭದಲ್ಲಿ ಎಂಐಡಿಪಿ ಅಧ್ಯಕ್ಷರಾದ ಕೆ.ಎಸ್ ಗುರುಮೂರ್ತಿ, ಅರಣ್ಯ ಅಭಿವೃದ್ಧಿ ಉಪಾಧ್ಯಕ್ಷ ಕೆ.ರೇವಣ್ಣಪ್ಪ, ತಾ.ಪಂ ಅಧ್ಯಕ್ಷ ಪ್ರಕಾಶ್, ಜಿ.ಪಂ ಸದಸ್ಯೆ ಅರುಂಧತಿ ರಾಜೇಶ್, ನೀರಾವರಿ ಅಧಿಕಾರಿಗಳು ಇದ್ದರು.

English summary
MP BY Raghavendra offer bagina to ambligolla reservoir in shivamogga district with his family
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X