ಅಂಬ್ಲಿಗೊಳ್ಳ ಜಲಾಶಯ ಭರ್ತಿ; ಸಂಸದ ಬಿ.ವೈ.ರಾಘವೇಂದ್ರ ಬಾಗಿನ ಅರ್ಪಣೆ
ಶಿವಮೊಗ್ಗ, ಆಗಸ್ಟ್ 13: ಶಿಕಾರಿಪುರ/ ಸಾಗರ ತಾಲೂಕಿನ ಜೀವನಾಡಿ, ಅಂಜನಾಪುರ ಜಲಾಶಯ ಭರ್ತಿಯಾದ ಬೆನ್ನಲ್ಲೇ ಅಂಬ್ಲಿಗೊಳ್ಳ ಜಲಾಶಯ ಕೂಡ ಭರ್ತಿಯಾಗಿದೆ. ಹೀಗಾಗಿ ಇಂದು ಸಂಸದ ಬಿ.ವೈ.ರಾಘವೇಂದ್ರ ಪತ್ನಿ ಪುತ್ರರೊಂದಿಗೆ ಇಂದು ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಇದೇ ವೇಳೆ, ಜಲಾಶಯದ ಸುತ್ತಮುತ್ತ ಪ್ರದೇಶಗಳನ್ನು ಅಭಿವೃದ್ಧಿಪಡಿಸಿ ಪ್ರವಾಸಿತಾಣವಾಗಿ ಮಾರ್ಪಾಡು ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಅಂಬ್ಲಿಗೊಳ್ಳ ಜಲಾಶಯ ತಾಲೂಕಿನ ಅತ್ಯಂತ ದೊಡ್ಡ ಜಲಾಶಯವಾಗಿದೆ. ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಸ್ವಲ್ಪ ತಡವಾಗಿ ಭರ್ತಿಯಾಗಿದೆ. ರೈತರಿಗೆ ಅನುಕೂಲವಾಗುವಂತೆ ತಾಲೂಕಿನ ಎಲ್ಲಾ ಹೋಬಳಿಗೂ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಶೀಘ್ರ ಪೂರ್ಣಗೊಳ್ಳಲಿದೆ" ಎಂದು ಹೇಳಿದರು.
ತುಂಬಿದ ಅಂಜನಾಪುರ ಜಲಾಶಯ; ಬಾಗಿನ ಅರ್ಪಿಸಿದ ಬಿ.ವೈ.ರಾಘವೇಂದ್ರ
ಈ ಸಂದರ್ಭದಲ್ಲಿ ಎಂಐಡಿಪಿ ಅಧ್ಯಕ್ಷರಾದ ಕೆ.ಎಸ್ ಗುರುಮೂರ್ತಿ, ಅರಣ್ಯ ಅಭಿವೃದ್ಧಿ ಉಪಾಧ್ಯಕ್ಷ ಕೆ.ರೇವಣ್ಣಪ್ಪ, ತಾ.ಪಂ ಅಧ್ಯಕ್ಷ ಪ್ರಕಾಶ್, ಜಿ.ಪಂ ಸದಸ್ಯೆ ಅರುಂಧತಿ ರಾಜೇಶ್, ನೀರಾವರಿ ಅಧಿಕಾರಿಗಳು ಇದ್ದರು.