ಚಿತ್ರಗಳು : ಕವಿಶೈಲಕ್ಕೆ ಅಮಿತ್ ಶಾ ಭೇಟಿ
ಶಿವಮೊಗ್ಗ, ಮಾರ್ಚ್ 26 : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಷ್ಟ್ರಕವಿ ಕುವೆಂಪು ಅವರ ನಿವಾಸ ಕವಿಶೈಲಕ್ಕೆ ಸೋಮವಾರ ಭೇಟಿ ನೀಡಿದರು.
ಸೋಮವಾರ ಮಧ್ಯಾಹ್ನ ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿ ಸಮೀಪದ ಗಡಿಕಲ್ಲು ಎಂಬಲ್ಲಿನ ಹೆಲಿಪ್ಯಾಡ್ಗೆ ಅಮಿತ್ ಶಾ ಆಗಮಿಸಿದರು. ಮೊದಲು ರಾಷ್ಟ್ರಕವಿ ಕುವೆಂಪು ಅವರ ಸಮಾಧಿಗೆ ನಮಿಸಿ ನಂತರ ಕುವೆಂಪು ಅವರ ಮನೆಗೆ ತೆರಳಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡ್ಡಿಯೂರಪ್ಪ, ಸಚಿವ ಅನಂತ ಕುಮಾರ್, ಆರಗ ಜ್ಞಾನೇಂದ್ರ, ಶಾಸಕ ಜೀವರಾಜ್, ಎಂಎಲ್ಸಿ ಕೋಟಾ ಶ್ರೀನಿವಾಸ್ ಪೂಜಾರಿ, ಕರ್ನಾಟಕ ಮುರಳೀಧರ ರಾವ್ ಮೊದಲಾದ ನಾಯಕರು ಈ ಸಂದರ್ಭದಲ್ಲಿ ಜೊತೆಗಿದ್ದರು.

ಮಾಧ್ಯಮಗಳ ಜೊತೆ ಮಾತನಾಡಿದ ಅಮಿತ್ ಶಾ, 'ಕುವೆಂಪು ಸ್ಮಾರಕಕ್ಕೆ ಭೇಟಿ ನೀಡಿ ಆನಂದವಾಗಿದೆ. ಕನ್ನಡ ಸಾಹಿತ್ಯಕ್ಕೆ ಕುವೆಂಪು ಕೊಟ್ಟ ಕೊಡಿಗೆ ಅಪಾರ. ಕನ್ನಡ ಸಾಹಿತ್ಯಕ್ಕೆ ಮಾತ್ರವಲ್ಲ ಅವರ ದೇಶದ ಸಾಹಿತ್ಯಕ್ಕೂ ಅಮೂಲ್ಯ ವಾದ ಕೊಡುಗೆ ನೀಡಿದ್ದಾರೆ' ಎಂದು ಹೇಳಿದರು.
'ಕುವೆಂಪು ಅವರ ಸಾಹಿತ್ಯ ಕೃಷಿಗಾಗಿ ಅವರಿಗೆ ಜ್ಞಾನಪೀಠ ಪ್ರಶಸ್ತಿ ದೊರೆತಿದೆ. ಕುವೆಂಪು ಅವರ ರಾಮಾಯಣ ದರ್ಶನಂ ಮತ್ತು ನಾಡಗೀತೆಯಂತಹ ಕೊಡುಗೆಯನ್ನು ಯಾರು ಮರೆಯಲು ಸಾದ್ಯವಿಲ್ಲ' ಎಂದು ಅಮಿತ್ ಶಾ ಬಣ್ಣಿಸಿದರು.
'ವಿವೇಕಾನಂದರ ಪ್ರೇರಣೆಯಂತೆ ಏಕತೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಕುವೆಂಪು ಅವರ ಕೊಡುಗೆ ಅಪಾರವಾದದು. ಕರ್ನಾಟಕದ ಇಂದಿನ ಸ್ಥಿತಿಗತಿಗೆ ಕುವೆಂಪು ಅವರ ಸಂದೇಶ ಹೆಚ್ಚು ಪ್ರಸ್ತುತವಾಗಿದೆ' ಎಂದರು.

ಕವಿಶೈಲಕ್ಕೆ ಭೇಟಿ ನೀಡಿದ ಬಳಿಕ ಅಮಿತ್ ಶಾ ತೀರ್ಥಹಳ್ಳಿಗೆ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications