ಅಮೃತಧಾರೆ : ತಾಯಿ ಎದೆ ಹಾಲು ಬ್ಯಾಂಕ್ ಶಿವಮೊಗ್ಗದಲ್ಲಿ ಆರಂಭ
ಶಿವಮೊಗ್ಗ, ಮೇ 15: ತಾಯಿ ಎದೆ ಹಾಲು ಸಂಗ್ರಹಣೆ ಮತ್ತು ವಿತರಣೆ ಕೇಂದ್ರ 'ಅಮೃತಧಾರೆ'ಯನ್ನು ಈಗ ಶಿವಮೊಗ್ಗದಲ್ಲಿ ಆರಂಭಿಸಲಾಗಿದೆ. ಕರ್ನಾಟಕ ಸರ್ಕಾರದ ಮೊದಲ ಈ ಮಾದರಿ ಬ್ಯಾಂಕ್ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಪ್ರಾರಂಭವಾಗಿತ್ತು.
ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿ ಶಿವಮೊಗ್ಗದ ವೈದ್ಯಕೀಯ ವಿಜ್ಞಾನ ಸಂಸ್ಥೆಯ, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ತಾಯಿ ಎದೆ ಹಾಲು ಸಂಗ್ರಹಣೆ ಮತ್ತು ವಿತರಣೆ ಕೇಂದ್ರ 'ಅಮೃತಧಾರೆ' ತೆರೆಯಲಾಗಿದೆ. ಈ ಬ್ಯಾಂಕ್ ಅನ್ನು ಸಿಮ್ಸ್ ನಿರ್ದೇಶಕ ಡಾ. ವಿ. ವಿರೂಪಾಕ್ಷ ಉದ್ಘಾಟಿಸಿದರು.

ಎಲ್ಲಾ ಆರೋಗ್ಯವಂತ ತಾಯಿಯಂದಿರು ತಮ್ಮ ಮಗುವಿಗೆ ಉಣಿಸಿ ಹೆಚ್ಚಾದ ಎದೆ ಹಾಲನ್ನು 'ಅಮೃತಧಾರೆ' ಸಂಗ್ರಹ ಕೇಂದ್ರಕ್ಕೆ ದಾನ ನೀಡಬಹುದಾಗಿದ್ದು, ಕೆಲವು ತಾಯಂದಿರಲ್ಲಿ ಹಾಲು ಉತ್ಪತ್ತಿಯಾಗದಿದ್ದರೆ, ತೀವ್ರ ನಿಗಾ ಘಟಕದ ಕೇಂದ್ರದಲ್ಲಿ ದಾಖಲಾದ ತಾಯಿಯ ಮಗುವಿಗೆ ಅಥವಾ ನವಜಾತ ಶಿಶು ಕೇಂದ್ರದಲ್ಲಿದ್ದ ಮಗುವಿಗೆ ಅಥವಾ ಹೆರಿಗೆ ಸಮಯದಲ್ಲಿ ತಾಯಿ ಮೃತರಾದ ಮಗುವಿಗೆ ಹಾಲನ್ನುಈ ಬ್ಯಾಂಕ್ ಮೂಲಕ ಉಪಯೋಗ ಮಾಡಿಕೊಳ್ಳಲಾಗುತ್ತದೆ.
ಎದೆಹಾಲು ನೀಡುವುದರಿಂದ ನವಜಾತ ಶಿಶುವಿಗೆ ನೀಡುವ ಫಾರ್ಮುಲ ಫೀಡ್ ತಪ್ಪಿಸಬಹುದಾಗಿದೆ. ಇದರಿಂದ ಕರುಳಿನ ಬೇನೆ, ನಂಜು, ಕಣ್ಣಿನ ದೋಷ, ಮಕ್ಕಳಿಗೆ ಆಗುವ ಸಂದರ್ಭ ಹೆಚ್ಚಾಗದಂತೆ ತಡೆಯಬಹುದು. ನವಜಾತ ಶಿಶು ಆಸ್ಪತ್ರೆಯಲ್ಲಿ ಇರಬೇಕಾದ ಸಮಯ ಕಡಿಮೆಯಾಗುತ್ತದೆ. ಪೋಷಕರಿಗೆ ಖರ್ಚಿನ ಭಾರ ಕಡಿಮೆಯಾಗುತ್ತದೆ. ಎದೆಹಾಲು ನೀಡುವುದರಿಂದ ಮಗುವಿಗೆ ಪೋಷಕಾಂಶಗಳು, ಮೆದುಳು ಚುರುಕು ಮತ್ತು ನೆನಪಿನ ಶಕ್ತಿ ಹೆಚ್ಚಾಗುತ್ತದೆ.
ತಾಯಿಯ ಹಾಲು ಅಮೃತ: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ, ನವಜಾತ ಶಿಶುಗಳ ಮರಣ ಪ್ರಮಾಣವನ್ನು ಕಡಿಮೆ ಮಾಡಲು ಹಲವಾರು ಯೋಜನೆಗಳನ್ನು ಪ್ರಾರಂಭಿಸಲಾಗಿದೆ. ಇವುಗಳಲ್ಲಿ ತಾಯಿ ಎದೆ ಹಾಲು ಸಂಗ್ರಹಣೆ ಮತ್ತು ವಿತರಣೆ ಕೇಂದ್ರ 'ಅಮೃತಧಾರೆ' ಸಹ ಒಂದು.
ತಾಯಿಯ ಹಾಲು ಮಗುವಿಗೆ ಅಮೃತವಾಗಿದೆ. ಇದು ನವಜಾತ ಶಿಶುವಿನ ಎಲ್ಲಾ ಅಗತ್ಯಗಳನ್ನು ಅತ್ಯುತ್ತಮ ಪೋಷಣೆ ಮತ್ತು ರಕ್ಷಣಾತ್ಮಕ ಸೋಂಕುನಿವಾರಕ ವಸ್ತುಗಳನ್ನು ಒದಗಿಸುವ ಮೂಲಕ ಪೂರೈಸುತ್ತದೆ. ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ, ಆಸ್ಪತ್ರೆಗಳಲ್ಲಿ ದಾಖಲಾಗುವ ಅವಧಿಪೂರ್ವ, ಕಡಿಮೆ ತೂಕದ ಮತ್ತು ಅನಾರೋಗ್ಯದ ಶಿಶುಗಳು ತಾಯಿಯ ಹಾಲನ್ನು ಹೊಂದಿರುವುದಿಲ್ಲ.
ಎಲ್ಲಾ ಶಿಶುಗಳಿಗೆ ಎದೆಹಾಲು ನಿರಂತರ ಪೂರೈಕೆಯನ್ನು ಒದಗಿಸುವ ಅವಶ್ಯಕತೆಯಿದೆ. ಮಾನವ ಹಾಲಿನ ಬ್ಯಾಂಕ್ ತಾಯಂದಿರಿಂದ ನೈಸರ್ಗಿಕ ಹಾಲುಣಿಸುವಿಕೆಯನ್ನು ಉತ್ತೇಜಿಸುವುದರ ಜೊತೆಗೆ ಎಲ್ಲಾ ಶಿಶುಗಳಿಗೆ ಉಚಿತ, ಪಾಸ್ಟರೈಸ್ ಮಾಡಿದ ಎದೆಹಾಲನ್ನು ಒದಗಿಸುವ ಪ್ರಯತ್ನವಾಗಿದೆ. ಹ್ಯೂಮನ್ ಮಿಲ್ಕ್ ಬ್ಯಾಂಕ್ ಎನ್ನುವುದು ಕೆಲವು ಪಾಶ್ಚಿಮಾತ್ಯ ದೇಶಗಳಲ್ಲಿ ಈಗಾಗಲೇ ಯಶಸ್ಸಗಳಿಸಿದೆ. ಮಗುವಿನ ಬೌದ್ಧಿಕ ಅಂಶವನ್ನು ಹೆಚ್ಚಿಸುವಲ್ಲಿ ಹಾಲಿನ ಕೊಡುಗೆಯು ಮಹತ್ವದ್ದು.
ಭಾರತದಲ್ಲಿ ಪ್ರತಿ ವರ್ಷ 27 ಮಿಲಿಯನ್ ಶಿಶುಗಳು ಜನಿಸುತ್ತವೆ ಅದರಲ್ಲಿ 3.5 ಮಿಲಿಯನ್ ಅವಧಿಪೂರ್ವ ಮತ್ತು 7.5 ಮಿಲಿಯನ್ ಕಡಿಮೆ ತೂಕದ ಜನನವಾಗಿದೆ. ಭಾರತದಲ್ಲಿ ಜನಿಸಿದ ಸುಮಾರು 47 ಪ್ರತಿಶತದಷ್ಟು ಶಿಶುಗಳು ಗರ್ಭಾವಸ್ಥೆಯ ವಯಸ್ಸಿಗೆ ಚಿಕ್ಕದಾಗಿದೆ. ಈ ಎಲ್ಲಾ ಶಿಶುಗಳು ಬದುಕುಳಿಯುವಿಕೆ ಮತ್ತು ಅರಿವಿನ ಬೆಳವಣಿಗೆಯ ವಿಷಯದಲ್ಲಿ ದುರ್ಬಲವಾಗಿರುತ್ತವೆ ಮತ್ತು ಸಾಮಾನ್ಯವಾಗಿ ಅವರ ವೈದ್ಯಕೀಯ ಪರಿಸ್ಥಿತಿಗಳಿಂದಾಗಿ ಆಹಾರ ಸಮಸ್ಯೆಗಳನ್ನು ಹೊಂದಿರುತ್ತಾರೆ.
ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಮಾರ್ಚ್ 8, 2022ರಲ್ಲಿ ರಾಜ್ಯದ ಮೊದಲ 'ಅಮೃತಧಾರೆ' ಬ್ಯಾಂಕ್ ಆರಂಭವಾಯಿತು. ಒಂದು ವರ್ಷದಲ್ಲಿ 186 ಲೀಟರ್ ಎದೆಹಾಲು ಸಂಗ್ರಹಣೆ ಮಾಡಲಾಯಿತು. ಇದರಲ್ಲಿ 123 ಲೀಟರ್ ಬಳಕೆ ಮಾಡಲಾಯಿತು. 886 ಮಕ್ಕಳಿಗೆ ಈ ಬ್ಯಾಂಕ್ ಹಾಲನ್ನು ಒದಗಿಸಿತು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications