ಮತ್ತೆ ಜಾತ್ಯಾತೀತರ ಬಗ್ಗೆ ಕುಹುಕವಾಡಿದ ಅನಂತ್ಕುಮಾರ್ ಹೆಗಡೆ
ಸಾಗರ, ಜನವರಿ 13: ಇತ್ತೀಚೆಗಷ್ಟೆ 'ಜಾತ್ಯಾತೀತರಿಗೆ ಅಪ್ಪ ಅಮ್ಮ ಇಲ್ಲ' ಎಂದು ಹೇಳಿ ವಿವಾದ ಎಬ್ಬಿಸಿದ್ದ ಕೇಂದ್ರ ಸಚಿವ ಅನಂತ್ಕುಮಾರ್ ಹೆಗಡೆ ಮತ್ತೆ ಜಾತ್ಯಾತೀತರನ್ನು ವ್ಯಂಗ್ಯ ಮಾಡಿದ್ದಾರೆ.
ಸಾಗರ ಬಿಜೆಪಿ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು 'ನನ್ನ ಜಾತ್ಯಾತೀತ ಹೇಳಿಕೆಯಿಂದ ಕೆಲವು ಜಾತ್ಯಾತೀತರಿಗೆ ಚಡ್ಡಿಯಲ್ಲಿ ಬೆಂಕಿ ಹತ್ತಿಕೊಂಡಿದೆ' ಎಂದು ವ್ಯಂಗ್ಯ ಮಾಡಿದ್ದಾರೆ.
ಜಾತ್ಯತೀತ ಎಂಬುದು ಯಾರೋ ಫ್ಯಾಷನ್ಗೆ ಹೇಳಿಕೊಟ್ಟಿರುವ ವಿಷಯ, ಜಾತ್ಯತೀತ ಹೆಸರಿನಲ್ಲಿ ನಮ್ಮತನ ಮರೆಯುತ್ತಿದ್ದೇವೆ ಎಂದು ಅಭಿಪ್ರಾಯಪಟ್ಟರು.

'ಕೆಲವು ಬುದ್ಧಿಜೀವಿಗಳು ರಾಮನ ಅಪ್ಪ-ಅಮ್ಮ ಯಾರು ಎಂದು ಕೇಳುತ್ತಾರೆ. ಇಂಥವರಿಗೆ ಅವರ ಅಪ್ಪ-ಅಮ್ಮ ಯಾರು ಎಂಬುದೇ ಗೊತ್ತಿರುವುದಿಲ್ಲ, ತಾವು ಬರೆದಿದ್ದೇ ಸಾಹಿತ್ಯ ಎಂದು ಪ್ರತಿಪಾದಿಸುವ ಮೂರ್ಖರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ.' ಎಂದು ಕಠುವಾಗಿ ಟೀಕಿಸಿದರು.
ರಾಮ, ಗಣಪತಿ, ಕಾಳಿ ಮೊದಲಾದ ಹಿಂದೂ ದೇವರು ಸೌಮ್ಯ ದೇವತೆಗಳಲ್ಲ, ಬದಲಾಗಿ ಶಕ್ತಿ ದೇವತೆಗಳು. ಅನ್ಯಾಯದ ವಿರುದ್ಧ ಶಸ್ತ್ರ ಹಿಡಿದು ಸೆಟೆದು ನಿಂತವರು. ಹಿಂದೂ ದೇವತೆಗಳನ್ನು ನಾವೆಲ್ಲರೂ ಸರಿಯಾಗಿ ಅರ್ಥಮಾಡಿಕೊಂಡಿದ್ದರೆ ಕೈಯಲ್ಲಿ ಕತ್ತಿ, ಕೊಡಲಿ ಹಿಡಿದು ನಿಲ್ಲಬೇಕಿತ್ತು. ಸೋಗಲಾಡಿತನದ ಸಭ್ಯತೆ ಇದ್ದವರು ರಾಮ, ಗಣಪತಿ, ಕಾಳಿ ಮೊದಲಾದ ಶಕ್ತಿ ದೇವತೆಗಳಿಗೆ ನಮಸ್ಕಾರ ಮಾಡುವ ಅಗತ್ಯವಿಲ್ಲ' ಎಂದು ಉದ್ರೇಕದಿಂದ ಮಾತನಾಡಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications