ಶಿವಮೊಗ್ಗದ ಶರಾವತಿ ಒಡಲಲ್ಲಿ ಶೀಘ್ರ ಮತ್ತೊಂದು ಯೋಜನೆ
ಶಿವಮೊಗ್ಗ, ಸೆಪ್ಟೆಂಬರ್ 27: ಶರಾವತಿ ಭೂಗರ್ಭದಲ್ಲಿ ಮತ್ತೊಂದು ಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಈಗಾಗಲೇ ಶರಾವತಿ ನದಿಯಿಂದ ಬೆಂಗಳೂರಿಗೆ ನೀರು ಹರಿಸುವ ವಿವಾದಿತ ಯೋಜನೆ ಬೆನ್ನಲ್ಲೇ ಇನ್ನೊಂದು ಯೋಜನೆಗೆ ಸಿದ್ಧತೆ ನಡೆದಿದೆ.
ಅದೇ ಕಣಿವೆಯಲ್ಲಿ ವಿದ್ಯುತ್ ಸ್ಥಾವರ ಸ್ಥಾಪಿಸುವ ಯೋಜನೆಗೂ ಸರ್ಕಾರ ಮುಂದಾಗಿದೆ. ಪಂಪ್ಡ್ ಸ್ಟೋರೇಜ್ ಮೂಲಕ ಶರಾವತಿ ನೀರು ಬಳಸಿಕೊಂಡು ವಿದ್ಯುತ್ ಸ್ಥಾವರಗಳನ್ನು ನಿರ್ಮಿಸುವ ಯೋಜನೆಗೆ ಪೂರಕವಾಗಿ ಸಮಗ್ರ ಯೋಜನಾ ವರದಿ ತಯಾರಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಉದ್ದೇಶದಿಂದ , ತಲಕಳಲೆ ಮತ್ತು ಗೇರುಸೊಪ್ಪದಲ್ಲಿ ತಲಾ 250 ಮೆಗಾವ್ಯಾಟ್ ಉತ್ಪಾದನಾ ಸಾಮರ್ಥ್ಯದ ಎಂಟು ಘಟಕಗಳ ಸ್ಥಾವರಗಳನ್ನು ಸ್ಥಾಪಿಸುವ ಈ ಯೋಜನೆಗೆ 378 ಎಕರೆ ಭೂಮಿ ಅಗತ್ಯವಿದ್ದು, ಇದರಲ್ಲಿ 370 ಅರಣ್ಯ ಭೂಮಿ ಸೇರಿದೆ.
2017ರಲ್ಲಿ ರೂಪಿಸಿದ್ದ ಯೋಜನೆಗೆ 4,862 ಕೋಟಿ ರೂ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿತ್ತು.
15 ಬೋರ್ವೆಲ್ಗಳನ್ನು ಕೊರೆಯಲು ಉದ್ದೇಶಿಸಲಾಗಿದ್ದು, ಇದರಲ್ಲಿ 12 ಬೋರ್ವೆಲ್ಗಳು ಅರಣ್ಯದಲ್ಲೇ ಇರಲಿದೆ.
ಮಲೆನಾಡಿಗರು, ಪರಿಸರ ಪ್ರಿಯರು ಬೆಂಗಳೂರಿಗೆ ನೀರಿನ ದಾಹ ನೀಗಿಸಲು ಲಿಂಗನಮಕ್ಕಿ ಜಲಾಶಯದ ನೀರನ್ನು ಬಳಸಿಕೊಳ್ಳುವ ಯೋಜನೆ ವಿರುದ್ಧ ಹೋರಾಟ ನಡೆದಿದೆ. ಹೊಸನಗರ, ತೀರ್ಥಹಳ್ಳಿ, ಸಾಗರ, ಸೊರಬ ತಾಲೂಕುಗಳು ಬರದಿಂದ ಬಳಲುತ್ತಿವೆ. ನಮಗೇ ನೀರಿನ ಅಭಾವ ಇದೆ. ಹೀಗಿದ್ದಾಗ ಬೆಂಗಳೂರಿಗೆ ನೀರು ಕೊಡಲು ಹೇಗೆ ಸಾಧ್ಯ ಎಂಬುದು ಪರಿಸರ ಪ್ರೇಮಿಗಳ ಪ್ರಶ್ನೆಯಾಗಿದೆ.
ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ಸರಬರಾಜು ಅವೈಜ್ಞಾನಿಕ ಯೋಜನೆ. ಹೀಗಾಗಿ, ಸರ್ಕಾರದ ಹುನ್ನಾರವನ್ನು ವಿರೋಧಿಸುತ್ತಿದ್ದೇವೆ. ಮುಂದಿನ 15 ದಿನಗಳಲ್ಲಿ ಈ ಯೋಜನೆ ಕೈಬಿಡದೇ ಹೋದಲ್ಲಿ, ಹೋರಾಟವನ್ನು ತೀವ್ರಗೊಳಿಸಲಾಗುವುದು ಅಲ್ಲಿನ ಜನತೆ ಎಚ್ಚರಿಕೆ ನೀಡಿತ್ತು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications