ಶಿವಮೊಗ್ಗ: ಶಿಕಾರಿಪುರ ಪುರಸಭಾ ಕಾಂಗ್ರೆಸ್ ಸದಸ್ಯೆ ರಾಜೀನಾಮೆ, ಬಿಜೆಪಿ ಸೇರ್ಪಡೆ
ಶಿವಮೊಗ್ಗ, ನವೆಂಬರ್ 1: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸ್ವಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪುರಸಭೆಯ ರಾಜಕೀಯದಲ್ಲಿ ದಿನೇ ದಿನೇ ಸಾಕಷ್ಟು ಬದಲಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.
ಶಿಕಾರಿಪುರ ಪಟ್ಟಣ 5ನೇ ವಾರ್ಡ್ ನ ಕಾಂಗ್ರೆಸ್ ಸದಸ್ಯೆ ಜ್ಯೋತಿ ಸಿದ್ದಲಿಂಗೇಶ್ ಕಾಂಗ್ರೆಸ್ ಪಕ್ಷಕ್ಕೆ ಮತ್ತು ಪುರಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ.
ಸಿಗಂದೂರು ದೇವಾಲಯ ಸಲಹಾ ಸಮಿತಿ ಮೊದಲ ಸಭೆಯಲ್ಲಿ ತೀರ್ಮಾನವಾಗಿದ್ದೇನು?
ಈಗಾಗಲೇ ಬಿಜೆಪಿ ಪಕ್ಷಕ್ಕೆ ಇಬ್ಬರು ಕಾಂಗ್ರೆಸ್ ಸದಸ್ಯರು ಸೇರ್ಪಡೆಗೊಂಡಿದ್ದು, ಭಾನುವಾರ ದೊಡ್ಡಪೇಟೆಯ 5 ವಾರ್ಡ್ ನ ಜ್ಯೋತಿ ಸಿದ್ದಲಿಂಗೇಶ್ ಸೇರಿದ್ದು, ಒಟ್ಟು ಪಕ್ಷೇತರರು ಮೂರು ಕಾಂಗ್ರೆಸ್ ಸದಸ್ಯರು ರಾಜಿನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ನವೆಂಬರ್ 9 ರಂದು ಪುರಸಭಾ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಇನ್ನೂ ಇಬ್ಬರು ಕಾಂಗ್ರೆಸ್ ಸದಸ್ಯರು ಬಿಜೆಪಿ ಸೇರಲು ಬಯಸಿದ್ದು, ಚುನಾವಣೆ ಮುಗಿದ ಮೇಲೆ ಸೇರಲಿದ್ದಾರೆ ಎಂದು ಬಿಜೆಪಿ ಮುಖಂಡ ಟಿ.ಎಸ್ ಮೋಹನ್ ತಿಳಿದಿದ್ದರು.
ಈ ಸಂದರ್ಭದಲ್ಲಿ ಶಿಕಾರಿಪುರ ತಾಲ್ಲೂಕು ಬಿಜೆಪಿ ಅಧ್ಯಕ್ಷ ವಿರೇಂದ್ರ ಪಾಟೀಲ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ ಚನ್ನವೀರಪ್ಪ, ಬಿಜೆಪಿ ಮುಖಂಡರಾದ ಬೆಣ್ಣೆ ದೇವೆಂದ್ರಪ್ಪ, ಸುಕೇಂದ್ರಪ್ಪ, ರೇಣುಕಸ್ವಾಮಿ, ನಾಗರಾಜಪ್ಪ, ಪರುಶುರಾಮ್ ಇದ್ದರು.