ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಈ ಬಾರಿ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ: ಸಿಎಂ ಬಿಎಸ್ವೈ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಡಿಸೆಂಬರ್ 7: ಈ ಬಾರಿಯ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮಂಡಿಸಲಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮೊದಲು ಗೋಹತ್ಯೆ ನಿಷೇಧ ಕಾಯ್ದೆಯನ್ನು ಅಂಗೀಕರಿಸುವಂತೆ ಸದನ ಸಮಿತಿ ಒಪ್ಪಿಗೆ ನೀಡಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ರಾಜ್ಯಪಾಲರು ತಿರಸ್ಕರಿಸಿದ್ದರು ಎಂದರು.

ಶಿವಮೊಗ್ಗದಲ್ಲಿ ಕೋಮು ಗಲಭೆ; ಆಸ್ಪತ್ರೆಗೆ ಸಂಸದ, ಸಚಿವರ ಭೇಟಿಶಿವಮೊಗ್ಗದಲ್ಲಿ ಕೋಮು ಗಲಭೆ; ಆಸ್ಪತ್ರೆಗೆ ಸಂಸದ, ಸಚಿವರ ಭೇಟಿ

ಈ ಬಾರಿ ಅಧಿವೇಶನದಲ್ಲಿ ಮತ್ತೆ ಮಂಡಿಸಲಾಗುವುದು ರಾಜ್ಯಪಾಲರ ಒಪ್ಪಿಗೆ ದೊರೆಯುವ ಭರವಸೆ ಇದೆ. ಅದೇ ರೀತಿ ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ಮಸೂದೆಯನ್ನು ಮಂಡಿಸಲಾಗುವುದು, ಈ ಬಾರಿ ಮಂಡಿಸುವುದಿಲ್ಲವೆಂದು ಹೇಳಿದರು.

Shivamogga: Anti-Cow Slaughter Ban Bill Will Be Introduced During Winter Assembly Session: CM Yediyurappa

ಡಿ.8ರ ಭಾರತ್ ಬಂದ್ ಕರೆ ನೀಡಲಾಗಿದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಂದ್ ಮಾಡದಂತೆ ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಪದೇ ಪದೇ ಬಂದ್ ಮಾಡಲು ಕರೆ ನೀಡಿದರೆ, ಸಾರ್ವಜನಿಕರಿಗೆ ಹಾಗೂ ಆರ್ಥಿಕತೆಗೆ ತೊಂದರೆ ಆಗಲಿದೆ. ಭಾರತ ಬಂದ್ ನಂತಹ ಕಟು ನಿರ್ಧಾರ ಕೈಗೊಳ್ಳುವುದು ಸರಿಯಲ್ಲ. ಹಾಗಾಗಿ ರೈತರು ಸರ್ಕಾರದ ಜೊತೆಗೆ ಕುಳಿತು ಸಮಸ್ಯೆ ಬಗೆಹರಿಸಿಕೊಂಡರೆ ಒಳ್ಳೆಯದು ಎಂದು ಸಲಹೆ ನೀಡಿದರು.

English summary
In winter assembly session, We Will be Introduced Anti-Cow Slaughter Ban Bill, CM Yediyurappa said that
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X