ಅಪ್ಪು ಪುಣ್ಯಸ್ಮರಣೆ; ಶಿವಮೊಗ್ಗದಲ್ಲಿ 3 ಸಾವಿರ ಜನರಿಗೆ ಬಾಡೂಟದ ವ್ಯವಸ್ಥೆ
ಶಿವಮೊಗ್ಗ, ಅಕ್ಟೋಬರ್, 19; ನಟ ಡಾ.ಪುನೀತ್ ರಾಜ್ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆ ಶಿವಮೊಗ್ಗದಲ್ಲಿ 3 ಸಾವಿರ ಜನರಿಗೆ ಅಭಿಮಾನಿಗಳು ಬಾಡೂಟ ಹಾಕಿದ್ದಾರೆ.
ನಗರದಲ್ಲಿ ಅಭಿಮಾನಿಗಳಿಂದ ನಟ ಪುನೀತ್ ರಾಜ್ಕುಮಾರ್ ಅವರ ಮೊದಲ ವರ್ಷದ ಪುಣ್ಯಸ್ಮರಣೆ ಮಾಡಲಾಯಿತು. ಪುನೀತ್ ರಾಜ್ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆ ಮೂರು ಸಾವಿರ ಜನರಿಗೆ ಬಾಡೂಟ ಬಡಿಸಿ, ಯುವಕರು ತಮ್ಮ ನೆಚ್ಚಿನ ನಟನಿಗೆ ನಮನ ಸಲ್ಲಿಸಿದರು. ವಿದ್ಯಾನಗರದ ಯಾಲಕಪ್ಪನಕೇರಿಯ ಶ್ರೀವೀರಕೇಸರಿ ಯುವಕರ ಸಂಘದ ವತಿಯಿಂದ ಪುನೀತ್ ರಾಜ್ಕುಮಾರ್ ಅವರ ಪುಣ್ಯಸ್ಮರಣೆ ಮಾಡಲಾಯಿತು.
ಹೂವಿನಲ್ಲಿ ಅರಳಿದ ಅಪ್ಪು
ಬಿ.ಹೆಚ್.ರಸ್ತೆ ಪಕ್ಕದಲ್ಲಿಯೇ ವಿದ್ಯಾನಗರದಲ್ಲಿ ವಿವಿಧ ಹೂವುಗಳಿಂದ ಅಲಂಕೃತವಾದ ಮಂಟಪವನ್ನು ನಿರ್ಮಿಸಲಾಗಿತ್ತು. ಅದರಲ್ಲಿ ನಟ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರವನ್ನು ಇರಿಸಲಾಗಿದ್ದು, ಹೆಚ್ಚಾಗಿ ಗಮನ ಸೆಳೆದಿದೆ. ಪುನೀತ್ ರಾಜ್ಕುಮಾರ್ ಭಾವಚಿತ್ರಕ್ಕೆ ಯುವಕರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಭಿಮಾನವನ್ನು ಮೆರೆದಿದ್ದಾರೆ. ಮೊದಲ ಪುಣ್ಯಸ್ಮರಣೆ ಅಂಗವಾಗಿ ಸುಮಾರು 3 ಸಾವಿರ ಜನರಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ನಾಲ್ಕು ಕುರಿ, 2 ಕ್ವಿಂಟಾಲ್ ಚಿಕನ್, ಮೊಟ್ಟೆ ಬಳಸಿ ಬಾಡೂಟ ತಯಾರಿಸಲಾಗಿತ್ತು. ವಿದ್ಯಾನಗರದ ಮನೆಗಳು, ಮುಖ್ಯ ರಸ್ತೆಯಲ್ಲಿ ಓಡಾಡುತ್ತಿದ್ದ ಸಾರ್ವಜನಿಕರಿಗೆ ಊಟ ಬಡಿಸಿ ಅಭಿಮಾನವನ್ನು ಮೆರೆದಿದ್ದಾರೆ.

ಅಭಿಮಾಮಾನಿಗಳ ಮನಸ್ಸಲ್ಲಿ ಅಪ್ಪು ಅಮರ
ನಟ ಪುನೀತ್ ರಾಜ್ಕುಮಾರ್ ಅವರನ್ನು ಪ್ರತಿ ವರ್ಷ ಇದೆ ರೀತಿ ಸ್ಮರಣೆ ಮಾಡಿಕೊಳ್ಳುತ್ತೇವೆ ಎಂದು ಶ್ರೀ ವೀರಕೇಸರಿ ಯುವಕರ ಸಂಘದ ಹರೀಶ್ ತಿಳಿಸಿದರು. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ದೈಹಿಕವಾಗಿ ನಮ್ಮನ್ನು ಅಗಲಿರಬಹದು, ಆದರೆ ನಮ್ಮ ಮನಸಲಿ ಅವರು ಎಂದಿಗೂ ಉಳಿದಿರುತ್ತಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಕನ್ನಡಿಗರು, ಅದರಲ್ಲೂ ಅಭಿಮಾನಿಗಳು ಒಂದೇ ಒಂದು ಕ್ಷಣ ಅವರನ್ನು ಮರೆತಿಲ್ಲ, ಮರೆಯುವುದೂ ಇಲ್ಲ. ಕನ್ನಡಿಗರ ಎದೆಯಲ್ಲಿ ಅಪ್ಪು ಎಂದಿಗೂ ಜೀವಂತ. ದೊಡ್ಮನೆ ರಾಜಕುಮಾರ ದೈಹಿಕವಾಗಿ ಇಲ್ಲದಿದ್ದರೂ, ಅವರ ನೆನಪುಗಳ ಜೊತೆ ಅಭಿಮಾನಿಗಳು ಜೀವನ ನಡೆಸುತ್ತಿದ್ದಾರೆ.

500 ಕಿ.ಲೋ. ಪಾದಯಾತ್ರೆಗೆ ಸಜ್ಜು
ಇನ್ನು ಕನ್ನಡ ಚಿತ್ರರಂಗದ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿ ಇದೇ ಅಕ್ಟೋಬರ್ 29ರಂದು ಒಂದು ವರ್ಷ ಆಗಲಿದೆ. ಆದರೆ ಅಪ್ಪು ಅಗಲಿಕೆಯ ನೋವು ಅಭಿಮಾನಿಗಳನ್ನು ಸದಾ ಕಾಡುತ್ತಿದೆ. ಪ್ರತಿನಿತ್ಯ ನೂರಾರು ಅಭಿಮಾನಿಗಳು ಅಪ್ಪು ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸುತ್ತಿದ್ದಾರೆ. ಇದೀಗ ಧಾರವಾಡದ ಮಹಿಳೆಯೊಬ್ಬರು ವಿಭಿನ್ನವಾಗಿ ಅಪ್ಪುಗೆ ತಮ್ಮ ಅಭಿಮಾನವನ್ನು ತೋರಿದ್ದಾರೆ. ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದ ದಾಕ್ಷಾಯಣಿ ಪಾಟೀಲ್ 500 ಕಿಲೋ ಮೀಟರ್ವರೆಗೆ ಪಾದಯಾತ್ರೆ ಕೈಗೊಳ್ಳುವ ಮೂಲಕ ಅಭಿಮಾನ ಮೆರೆಯಲು ಸಜ್ಜಾಗಿದ್ದಾರೆ.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications