ಈಶ್ವರ್ ಖಂಡ್ರೆ ಹೇಳಿಕೆ ಖಂಡಿಸುವಾಗ ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಬಗ್ಗೆ ನಾಲಿಗೆ ಹರಿಬಿಟ್ಟ ಆರಗ ಜ್ಞಾನೇಂದ್ರ
ಶಿವಮೊಗ್ಗ, ಆಗಸ್ಟ್. 02: ಕೆ.ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣದ ಕುರಿತು ಮಾಜಿ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಆರಗ ಜ್ಞಾನೇಂದ್ರ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.
ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ನೀಡಿದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ಶಿವಮೊಗ್ಗ ಜಿಲ್ಲೆಯ ಆರಗ ಜ್ಞಾನೇಂದ್ರ ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಆಗಸ್ಟ್ 1 ರಂದು ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಅರಣ್ಯ ಸಚಿವ ಈಶ್ವರ ಖಂಡ್ರೆ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೈಬಣ್ಣದ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಬೀದರ್ ಮೂಲದ ಈಶ್ವರ ಖಂಡ್ರೆ ಅವರನ್ನು ಗುರಿಯಾಗಿಸಿಕೊಂಡು ಮಾತನಾಡಿದ ಅವರು ಬೀದರ್ನ ಜನರಿಗೆ ಮರಗಳು, ಗಿಡಗಳು ಅಥವಾ ನೆರಳಿನ ಬಗ್ಗೆ ಏನೂ ತಿಳಿದಿಲ್ಲ ಎಂದು ಹೇಳಿದ್ದಾರೆ. "ಅರಣ್ಯ ಸಚಿವರಿಗೆ ಪಶ್ಚಿಮ ಘಟ್ಟದ ಜನರ ಜೀವನಕ್ರಮ, ಗಿಡ- ಮರಗಳ ಕುರಿತು ತಿಳಿವಳಿಕೆ ಇಲ್ಲ. ಅವರಿಗೆ ಮಲೆನಾಡು ಜನರ ಜೀವನ ಅಥವಾ ಪಶ್ಚಿಮ ಘಟ್ಟಗಳ ಹತ್ತಿರ ಇರುವವರು ಎದುರಿಸುತ್ತಿರುವ ಸಮಸ್ಯೆಗಳು ತಿಳಿದಿಲ್ಲ. ಪಶ್ಚಿಮ ಘಟ್ಟಗಳ ಬಗ್ಗೆ ವರದಿ ನೀಡಿರುವ, ವಿಜ್ಞಾನಿ ಕಸ್ತೂರಿ ರಂಗನ್ ಪರಿಸರ ತಜ್ಞ ಅಲ್ಲ" ಎಂದು ಕಿಡಿಕಾರಿದ್ದಾರೆ.
"ಅವರಿಗೆ ಮರ - ಗಿಡದ ಬಗ್ಗೆ ಗೊತ್ತಿಲ್ಲ. ಮರದ ನೆರಳಿನ ಮಹತ್ವ ಗೊತ್ತಿಲ್ಲ. ಅಲ್ಲಿನವರು ನೆರಳನ್ನೇ ಕಂಡಿರೋದಿಲ್ಲ. ಆ ಪ್ರದೇಶದ ಜನರು ಸುಡುವ ಸೂರ್ಯನ ಕೆಳಗೆ ಸುಟ್ಟು ಕರಕಲಾದಂತೆ ಇರ್ತಾರೆ. ನಮ್ಮ ಖರ್ಗೆಯವರನ್ನು ನೋಡಿದ್ರೇ ಗೊತ್ತಾಗೋದಿಲ್ವಾ...? ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆ. ಮಲೆನಾಡು ಮತ್ತು ಪಶ್ಚಿಮಘಟ್ಟದ ಬದುಕು ಅವರಿಗೆ ಗೊತ್ತಿಲ್ಲ" ಎನ್ನುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಸ್ತಾಪಿಸಿಯೇ ಅವರ ಬಣ್ಣದ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಕಸ್ತೂರಿ ರಂಗನ್ ವರದಿಯನ್ನು ಸರ್ಕಾರ ಜಾರಿಗೊಳಿಸುವುದಾಗಿ ಈಶ್ವರ್ ಖಂಡ್ರೆ ನೀಡಿದ ಹೇಳಿಕೆಗೆ ಆರಗ ಜ್ಞಾನೇಂದ್ರ ಕಿಡಿಕಾರಿದ್ದಾರೆ. "ಕಸ್ತೂರಿರಂಗನ್ ಅವರು ಪರಿಸರ ಪರಿಣತರಲ್ಲ. ಸ್ಥಳೀಯ ಜನರಿಂದಾಗಿ ಪಶ್ಚಿಮ ಘಟ್ಟಗಳು ಉಳಿದುಕೊಂಡಿವೆ. ಉಪಗ್ರಹ ಚಿತ್ರಗಳನ್ನು ಆಧರಿಸಿ ವಿಜ್ಞಾನಿಗಳು ವರದಿ ಸಿದ್ಧಪಡಿಸಿದ್ದಾರೆ. ವರದಿಯನ್ನು ವಿರೋಧಿಸುತ್ತಲೇ ಬಂದಿದ್ದೇವೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು" ಎಂದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications