ಬಿಎಸ್ವೈ ಮನೆ ಮೇಲೆ ಕಲ್ಲು ತೂರಾಟ; ಶಿಕಾರಿಪುರಕ್ಕೆ ಆರಗ ಜ್ಞಾನೇಂದ್ರ ಭೇಟಿ
ಶಿವಮೊಗ್ಗ, ಮಾರ್ಚ್ 28; "ಶಿಕಾರಿಪುರ ಪಟ್ಟಣದಲ್ಲಿ ಪರಿಸ್ಥಿತಿ ತಿಳಿಯಾಗಿದೆ. ಯಾವುದೇ ಅಹಿತಕರ ಘಟನೆ ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ" ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಸೋಮವಾರ ಶಿಕಾರಿಪುರ ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಿವಾಸದ ಮೇಲೆ ಒಳ ಮೀಸಲಾತಿ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಬಂಜಾರ ಸಮುದಾಯದವರು ಕಲ್ಲು ತೂರಾಟ ನಡೆಸಿದ್ದರು.
ಮಂಗಳವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಶಿಕಾರಿಪುರಕ್ಕೆ ಭೇಟಿ ನೀಡಿದರು. ಶಿವಮೊಗ್ಗ ಸಂಸದ, ಯಡಿಯೂರಪ್ಪ ಪುತ್ರ ಬಿ. ವೈ. ರಾಘವೇಂದ್ರ, ಶಿವಮೊಗ್ಗ ಜಿಲ್ಲಾ ಪೋಲಿಸ್ವ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಹಲವು ಸಚಿವರ ಜೊತೆ ಇದ್ದರು. ಪೊಲೀಸರ ಜೊತೆ ಚರ್ಚೆ ನಡೆಸಿದ ಸಚಿವರು, ಶಿಕಾರಿಪುರದ ಸದ್ಯದ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು.

ಬಳಿಕ ಮಾತನಾಡಿದ ಆರಗ ಜ್ಞಾನೇಂದ್ರ, "ಒಳ ಮೀಸಲಾತಿ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಸರ್ಕಾರ, ಪರಿಶಿಷ್ಟ ಜಾತಿ ಸಮುದಾಯಗಳಿಗೆ ಒಳ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸದಾಶಿವ ಆಯೋಗದ ಶಿಫಾರಸುಗಳನ್ನು ಅನುಷ್ಟಾನ ಮಾಡಿಲ್ಲ. ಈ ಕುರಿತು ವಿರೋಧ ಪಕ್ಷದ ನಾಯಕರು ಅಪಪ್ರಚಾರ ನಡೆಸಿ, ರಾಜಕೀಯ ಬೇಳೆ ಬೇಯಿಸಲು ಹೊರಟಿದ್ದಾರೆ" ಎಂದು ಆರೋಪಿಸಿದರು.
"ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ನಾಯಕರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮಧ್ಯೆ ಒಡಕು ಮೂಡಿಸಲು ಯತ್ನಿಸುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಯಾವುದೇ ಕ್ರಮಕ್ಕೆ ಮುಂದಾಗದೆ, ನ್ಯಾಯ ಒದಗಿಸಲು ವಿಫಲರಾದ ವಿರೋಧ ಪಕ್ಷದ ನಾಯಕರು ಒಳ ಮೀಸಲಾತಿ ವಿಷಯಕ್ಕೆ ಸಂಬಂಧಿಸಿ ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ" ಎಂದು ದೂರಿದರು.

"ಒಳ ಮೀಸಲಾತಿ ವಿಷಯಕ್ಕೆ ಸಂಬಂಧಿಸಿ ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮುಕ್ತವಾಗಿ ಚರ್ಚೆ ನಡೆಸಲು ಸಿದ್ದರಿದ್ದಾರೆ. ಯಾವುದೇ ಕಾರಣಕ್ಕೂ ಯಾರೇ ಆಗಲಿ, ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು" ಎಂದು ಗೃಹ ಸಚಿವರು ಮನವಿ ಮಾಡಿದರು.
"ಸೋಮವಾರ ನಡೆದ ಗಲಾಟೆ ವೇಳೆ ಪೊಲೀಸರಿಗೆ ಪೆಟ್ಟು ಬಿದ್ದಿದೆ, ರಕ್ತ ಹೆಪ್ಪುಗಟ್ಟಿದೆ. ಪೊಲೀಸರಿಗೆ ಹೊಡೆದರೆ ಬಿಡಲು ಆಗುತ್ತದೆಯೇ?. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಒಳ ಮೀಸಲಾತಿ ವಿಚಾರದಲ್ಲಿ ಅನ್ಯಾಯವಾಗಿದ್ದರೆ ಅದನ್ನು ಸರಿಪಡಿಲಸು ಮುಖ್ಯಮಂತ್ರಿಗಳು ಮುಕ್ತ ಮನಸ್ಸಿನಿಂದ ಇದ್ದಾರೆ. ಇದು ಇಲ್ಲಿಗೆ ನಿಲ್ಲಬೇಕು, ಪೊಲೀಸರ ವಿಚಾರಣೆಯಲ್ಲಿ ಯಾರು, ಯಾರು ಇದ್ದಾರೆ ಎಂಬುದನ್ನು ಪರಿಶೀಲನೆ ಮಾಡುತ್ತಾರೆ" ಎಂದು ಗೃಹ ಸಚಿವರು ಹೇಳಿದರು.
ನಿಷೇಧಾಜ್ಞೆ ಜಾರಿ; ಸೋಮವಾರ ಬಂಜಾರ ಸಮುದಾಯದವರು ಒಳ ಮೀಸಲಾತಿ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆಸುತ್ತಿದ್ದ ಪ್ರತಿಭಟನೆ ಕೈ ಮೀರಿ ಹೋಗಿತ್ತು. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಿವಾಸದ ಬಳಿ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸ್ ಬ್ಯಾರಿಕೇಡ್ಗಳನ್ನು ತಳ್ಳಿ ಪೊಲೀಸರ ಮೇಲೆ ಚಪ್ಪಲಿ, ಕಲ್ಲುಗಳನ್ನು ತೂರಲಾಗಿತ್ತು. ಬಳಿಕ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿತ್ತು. ಬಳಿಕ ಶಿಕಾರಿಪುರ ತಹಶೀಲ್ದಾರ್ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದರು.
ಮಂಗಳವಾರವೂ ಬಂಜಾರ ಸಮುದಾಯದವ ಪ್ರತಿಭಟನೆ ಶಿವಮೊಗ್ಗದಲ್ಲಿ ಮುಂದುವರೆದಿದೆ. ಕುಂಚೇನಹಳ್ಳಿ ತಾಂಡಾದ ರಸ್ತೆಯಲ್ಲಿ ಟೈರ್ಗಳಿಗೆ ಬೆಂಕಿ ಹಚ್ಚಲಾಗಿದೆ. ರಸ್ತೆ ಬದಿಯಲ್ಲಿನ ವಿದ್ಯುತ್ ಕಂಬಗಳಲ್ಲಿದ್ದ ಬಿಜೆಪಿ ಬಾವುಟಗಳನ್ನು ಕಿತ್ತು ಹಾಕಲಾಗಿದೆ. ನೂರಾರು ಯುವಕರು ಪ್ರತಿಭಟನೆಗೆ ಇಳಿದಿದ್ದು, ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಬಂಜಾರ ಸಮುದಾಯದವರು ಇಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜೊತೆ ಮಾತುಕತೆ ನಡೆಸಲಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications