Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್‌ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ?: ಇಲ್ಲಿದೆ ಮಾರ್ಚ್‌ 17ರ ದರಪಟ್ಟಿ

Arecanut Price: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ, ಮಲೆನಾಡಿನ ಹೆಬ್ಬಾಗಿಲು ಅಂತಲೇ ಕರೆಸಿಕೊಳ್ಳುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಮಾರ್ಚ್‌ 17) ಕೆಲವು ರೀತಿಯ ಅಡಿಕೆ ಧಾರಣೆ ತುಸು ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ. ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದಲ್ಲಿ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕು ಎಂದು ನಿರ್ಧರಿಸುತ್ತಾರೆ. ಯಾಕಂದ್ರೆ, ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ, ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ, ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

Arecanut Price Today March 17 Shivamogga Market Rates Show Fluctuations Across Varieties

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 68,200 ರೂಪಾಯಿ

* ಗರಿಷ್ಠ - 98,596 ರೂಪಾಯಿ

ಶಿವಮೊಗ್ಗದಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 50,000 ರೂಪಾಯಿ

* ಗರಿಷ್ಠ - 63,210 ರೂಪಾಯಿ

ಶಿವಮೊಗ್ಗದಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 46,609 ರೂಪಾಯಿ

* ಗರಿಷ್ಠ - 54,659 ರೂಪಾಯಿ

ಶಿವಮೊಗ್ಗದಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 19,862 ರೂಪಾಯಿ

* ಗರಿಷ್ಠ - 37,169 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಕೆಂಪುಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 23,999 ರೂಪಾಯಿ

* ಗರಿಷ್ಠ - 37,199 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಕೋಕ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 14,156 ರೂಪಾಯಿ

* ಗರಿಷ್ಠ - 35,800 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಚಾಲಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 20,305 ರೂಪಾಯಿ

* ಗರಿಷ್ಠ - 43,309 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಬಿಳೆ ಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 20,022 ರೂಪಾಯಿ

* ಗರಿಷ್ಠ - 33,000 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 36,009 ರೂಪಾಯಿ

* ಗರಿಷ್ಠ - 59,170 ರೂಪಾಯಿ

ಸಾಗರ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 8,332 ರೂಪಾಯಿ

* ಗರಿಷ್ಠ - 22,415 ರೂಪಾಯಿ

ಇದೀಗ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ಸಮಯದಲ್ಲಿ ಗಿಡಗಳನ್ನು ರಕ್ಷಣೆ ಮಾಡುವುದೇ ಬೆಳೆಗಾರರಿಗೆ ದೊಡ್ಡ ಸವಾಲಾಗಿದೆ. ಈಗಾಗಲೇ ಬಹುತೇಕ ಭಾಗಗಳಲ್ಲಿ ರಕ್ಷಣೆ ದಾರಿಯನ್ನು ಕಂಡುಕೊಂಡಿದ್ದು, ಪ್ರತಿ ಗಿಡಕ್ಕೂ ಸುಣ್ಣ ಬಳಿದು ಗರಿ ಕಟ್ಟಿದ್ದಾರೆ. ಇದನ್ನು ಮಾಡದಿದ್ದರೆ, ಸೂರ್ಯನ ಕಿರಣಗಳ ಶಾಖಕ್ಕೆ ಬುಡದಲ್ಲಿ ಬಿರುಕು ಬಿಟ್ಟು ಗಿಡ ಹಾಳಾಗುವ ಸಾಧ್ಯತೆ ಹೆಚ್ಚಿರುತ್ತದೆ. ಈಗಾಗಲೇ ಕೆಲವೆಡೆ ಈ ಕ್ರಮ ಅನುಸರಿಸದವರ ತೋಟಗಳಲ್ಲಿ ಗಿಡಗಳು ನಾಶವಾದ ಉದಾಹರಣೆಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+