Arecanut Price: ಶಿವಮೊಗ್ಗ ಮಾರುಕಟ್ಟೆಯಲ್ಲಿ ಕ್ವಿಂಟಾಲ್‌ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮೇ 21ರ ದರಪಟ್ಟಿ

Arecanut Price: ಅಡಿಕೆ ಧಾರಣೆಯಲ್ಲಿ ಏರಿಳಿತ ಆಗುತ್ತಲಿರುತ್ತದೆ. ಹಾಗಾದ್ರೆ ಮಲೆನಾಡಿನ ಹೆಬ್ಬಾಗಿಲು ಅಂತಲೇ ಪ್ರಸಿದ್ಧಿ ಆಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು (ಮೇ 21) ಯಾವ ರೀತಿಯ ಅಡಿಕೆ ಧಾರಣೆ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಅಡಿಕೆ ಧಾರಣೆ ಎಲ್ಲಾ ಕಡೆಗಳಲ್ಲೂ ಒಂದೇ ರೀತಿ ಇರುವುದಿಲ್ಲ. ತುಸು ವ್ಯತ್ಯಾಸ ಇರುತ್ತದೆ. ಅದರಲ್ಲೂ ರಾಜ್ಯದ ದಾವಣಗೆರೆ ಜಿಲ್ಲೆಯ ಚನ್ನಗಿರಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ದೊಡ್ಡ ಮಾರುಕಟ್ಟೆಗಳಿದ್ದು, ಈ ಭಾಗಗಳ ಬೆಳೆಗಾರರು ಬೆಲೆಯನ್ನು ಗಮನಿಸಿ ಯಾವ ಮಾರುಕಟ್ಟೆಗೆ ಹಾಕಬೇಕೆಂದು ನಿರ್ಧರಿಸುತ್ತಾರೆ. ಯಾಕಂದ್ರೆ, ಹಾಕಿದ ಶ್ರಮಕ್ಕೆ ತಕ್ಕಂತೆ ತಕ್ಕ ಪ್ರತಿಫಲ ಅವರ ಬಯಕೆ ಆಗಿರುತ್ತದೆ. ಇಲ್ಲದಿದ್ದರೆ, ಎಲ್ಲಿ ನಷ್ಟ ಅನುಭವಿಸುತ್ತೇವೆಯೋ ಎನ್ನುವ ಆತಂಕವೂ ಕಾಡುತ್ತಿರುತ್ತದೆ. ಹಾಗಾದ್ರೆ, ಇಂದು ಯಾವ ಅಡಿಕೆ ಧಾರಣೆ ಎಷ್ಟಿದೆ ಎಂದು ಇಲ್ಲಿ ಗಮನಿಸಿ.

Arecanut Price Today May 21 2026 Shivamogga Market Rates Show Fluctuations Across Varieties

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 56,399 ರೂಪಾಯಿ

* ಗರಿಷ್ಠ - 93,729 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 53,099 ರೂಪಾಯಿ

* ಗರಿಷ್ಠ - 65,300 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 40,900 ರೂಪಾಯಿ

* ಗರಿಷ್ಠ - 53899 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 20,511 ರೂಪಾಯಿ

* ಗರಿಷ್ಠ - 42,511 ರೂಪಾಯಿ


ಹಿಂದಿನ ದಿನದ ಅಡಿಕೆ ಧಾರಣೆ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಸರಕು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 54,000 ರೂಪಾಯಿ

* ಗರಿಷ್ಠ - 93,696 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಬೆಟ್ಟೆ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 52,172 ರೂಪಾಯಿ

* ಗರಿಷ್ಠ - 58,099 ರೂಪಾಯಿ


ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 42,299 ರೂಪಾಯಿ

* ಗರಿಷ್ಠ - 54,299 ರೂಪಾಯಿ

ಶಿವಮೊಗ್ಗ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 19,000 ರೂಪಾಯಿ

* ಗರಿಷ್ಠ - 42,089 ರೂಪಾಯಿ


ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಗೊರಬಲು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 22,000 ರೂಪಾಯಿ

* ಗರಿಷ್ಠ - 29,138 ರೂಪಾಯಿ


ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಸಿಪ್ಪೆಗೋಟು ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 13,800 ರೂಪಾಯಿ

* ಗರಿಷ್ಠ - 138,00 ರೂಪಾಯಿ


ಶಿಕಾರಿಪುರ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌)

* ಕನಿಷ್ಠ - 53,810 ರೂಪಾಯಿ

* ಗರಿಷ್ಠ - 53,810 ರೂಪಾಯಿ

ಇದೀಗ ರಣಬಿಸಿಲು ಮುಂದುವರೆದ ಕಾರಣ ಗಿಡಗಳನ್ನು ರಕ್ಷಣೆ ಮಾಡುವುದೇ ದೊಡ್ಡ ಸವಾಲಾಗಿದೆ. ಈಗಾಗಲೇ ಬಹುತೇಕ ಭಾಗಗಳಲ್ಲಿ ರಕ್ಷಣೆ ದಾರಿಯನ್ನು ಕಂಡುಕೊಂಡಿದ್ದು, ಪ್ರತಿ ಗಿಡಕ್ಕೂ ಸುಣ್ಣ ಬಳಿದು ಗರಿ ಕಟ್ಟುವ ಕಟ್ಟಲಾಗಿದೆ. ಇಲ್ಲದಿದ್ದರೆ ಸೂರ್ಯನ ಶಾಖಕ್ಕೆ ಬುಡದಲ್ಲಿ ಬಿರುಕು ಬಿಟ್ಟು ಹಾಳಾಗುವ ಸಾಧ್ಯತೆ ಇರುತ್ತದೆ. ಇದೀಗ ಭಾರಿ ಬಿಸಿಲಿನ ನಡುವೆಯೇ ಹಲವೆಡೆ ಮಳೆಯಾಗುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕೆಲವೆಡೆ ಭಾರಿ ಮಳೆಯಿಂದಾಗಿ ಗಿಡಗಳು ಧರೆಗುರುಳಿ ಬೆಳೆಗಾರರು ಕಂಗಾಲಾಗಿರುವ ಘಟನೆಗಳು ಕೂಡ ನಡೆದಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+