ಅಡಕೆ ಕಾರ್ಯಪಡೆಯ ಮೊದಲ ಸಭೆ; 8 ನಿರ್ಣಯಗಳು
ಶಿವಮೊಗ್ಗ, ಫೆಬ್ರವರಿ 9; ಕರ್ನಾಟಕ ಸರ್ಕಾರ ಅಡಕೆ ಬೆಳೆಗಾರರ ಹಿತರಕ್ಷಣೆಗಾಗಿ ರಾಜ್ಯಮಟ್ಟದ ಕಾರ್ಯಪಡೆಯನ್ನು ರಚನೆ ಮಾಡಿತ್ತು. ತೀರ್ಥಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಈ ಕಾರ್ಯಪಡೆಯ ಅಧ್ಯಕ್ಷರಾಗಿದ್ದಾರೆ.
ಮಂಗಳವಾರ ಶಿವಮೊಗ್ಗದಲ್ಲಿ ಅಡಕೆ ಕಾರ್ಯಪಡೆಯ ಮೊದಲ ಸಭೆ ನಡೆಯಿತು. ಮಲೆನಾಡು ಅಭಿವೃದ್ಧಿ ಮಂಡಳಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಡಕೆ ಕಾರ್ಯಪಡೆಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ಕೊಟ್ಟಿದ್ದರು. ಅಡಕೆ ಸಂಬಂಧಿತ ಸಂಶೋಧನೆ ಮತ್ತು ಇನ್ನಿತರ ಚಟುವಟಿಕೆಗಳಿಗೆ ಸಹಾಯಕವಾಗುವಂತೆ 10 ಕೋಟಿ ರೂ. ಅನುದಾನವನ್ನು ಕಾರ್ಯಪಡೆಗೆ ನೀಡಲಾಗಿದೆ.

ಸಭೆಯಲ್ಲಿನ ನಿರ್ಣಯಗಳು
* ಅಡಕೆ ಆರೋಗ್ಯಕ್ಕೆ ಹಾನಿಕಾರಕ ಎಂದು ಹಿಂದನ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಇದರ ವಿರುದ್ಧ ವಾದ ಮಂಡಿಸಲು ಸುಪ್ರೀಂ ಕೋರ್ಟ್ನಲ್ಲಿ ಹಿರಿಯ ವಕೀಲರನ್ನು ಸರ್ಕಾರ ನೇಮಿಸಬೇಕು.
* ಎಂ.ಎಸ್.ರಾಮಯ್ಯ ವಿಶ್ವವಿದ್ಯಾಲಯದಲ್ಲಿ ಅಡಕೆ ಕುರಿತು ಸಂಶೋಧನೆ ನಡೆಸಲಾಗುತ್ತಿದೆ. ಸಂಶೋದನಾ ವರದಿ ಬರುವವರೆಗೆ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಮುಂದೂಡಬೇಕಿದೆ. ಈ ಕುರಿತು ಕೇಂದ್ರ ಸರ್ಕಾರದ ವಕೀಲರು ಕೋರ್ಟ್ಗೆ ಮನವರಿಕೆ ಮಾಡಬೇಕು. ಇದರ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು.

ಅಡಕೆಗೆ ಬೆಂಬಲ ಬೆಲೆ
* ಅಡಕೆಯ ಕನಿಷ್ಠ ಬೆಂಬಲ ಬೆಲೆ ದರವನ್ನು ಐದಾರು ವರ್ಷದ ಹಿಂದೆ ನಿಗದಿಪಡಿಸಲಾಗಿದೆ. ತಜ್ಞರು, ಬೆಳೆಗಾರರಿಂದ ಮಾಹಿತಿ ಸಂಗ್ರಹಿಸಿ ಪರಿಷ್ಕೃತ ಎಂಎಸ್ಪಿ ದರ ನಿಗದಿ ಮಾಡಬೇಕು. ಈಗ 250 ರೂ. ಕನಿಷ್ಠ ಬೆಂಬಲ ಇದೆ. ಇದನ್ನು ಪ್ರತಿ ಕೆಜಿಗೆ 350 ರೂ. ನಿಗದಿ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಇದರಿಂದ ವಿದೇಶದಿಂದ ಕಡಿಮೆ ದರಕ್ಕೆ ಅಡಕೆ ಆಮದಾಗುವುದು ತಪ್ಪಲಿದೆ.
* ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ ಅಡಿ ಶಿವಮೊಗ್ಗ ಜಿಲ್ಲೆಗೆ ಅನಾನಸ್ ಹಣ್ಣನ್ನು ನಿಗದಿಪಡಿಸಲಾಗಿದೆ. ಆದರೆ ಈ ಯೋಜನೆ ಅಡಿ ಜಿಲ್ಲೆಗೆ ಅಡಕೆ ಬೆಳೆಯನ್ನು ಪರಿಗಣಿಸುವಂತೆ ಶಿಫಾರಸು ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗುತ್ತಿದೆ.

ಅಡಕೆ ಉಪಯೋಗದ ಪ್ರಯೋಗ
* ಅಡಕೆ ಬೆಳೆ ಸಂಬಂಧ ತೋಟಗಾರಿಕ ವಿಶ್ವವಿದ್ಯಾಲಯ ಕೈಗೊಂಡಿರುವ ಕೌಶಲ್ಯ ತರಬೇತಿ ಕಾರ್ಯಕ್ರಮಗಳಿಗೆ ಟಾಸ್ಕ್ ಫರ್ಸ್ನಿಂದ ಸಹಕಾರ.
* ಅಡಕೆಯನ್ನು ಉಪಯೋಗಿಸಿಕೊಂಡು ಪರ್ಯಾಯ ಪ್ರಯೋಗಗಳಿಗೆ ಟಾಸ್ಕ್ ಫೋರ್ಸ್ನಿಂದ ಹೆಚ್ಚಿನ ಸಹಕಾರ ನೀಡಲು ನಿರ್ಧಾರ.

ಒಂದು ತಂಡ ರಚನೆ
* ಎಂ. ಎಸ್. ರಾಮಯ್ಯ ವಿವಿ, ಚೌಡಪ್ಪ ಅವರ ನೇತೃತ್ವದಲ್ಲಿ ಅಡಕೆ ಕುರಿತ ಸಂಶೋಧನೆಗೆ ತಂತ್ರಜ್ಞರ ತಂಡ.
* ಅಡಕೆಯ ಉತ್ಪಾದನಾ ವೆಚ್ಚ ಕುರಿತು ವರದಿ ನೀಡಲು ತೋಟಗಾರಿಕ ಇಲಾಖೆ ಜೊತೆ ಸೇರಿ ಮಾಹಿತಿ ಸಂಗ್ರಹಿಸಲು ಒಂದು ತಂಡ ರಚನೆ. ಹದಿನೈದು ದಿನದೊಳಗೆ ವರದಿ ಸಲ್ಲಿಸಲು ಸೂಚನೆ.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications