ಅಡಕೆ ಕಾರ್ಯಪಡೆಯ ಮೊದಲ ಸಭೆ; 8 ನಿರ್ಣಯಗಳು
ಶಿವಮೊಗ್ಗ, ಫೆಬ್ರವರಿ 9; ಕರ್ನಾಟಕ ಸರ್ಕಾರ ಅಡಕೆ ಬೆಳೆಗಾರರ ಹಿತರಕ್ಷಣೆಗಾಗಿ ರಾಜ್ಯಮಟ್ಟದ ಕಾರ್ಯಪಡೆಯನ್ನು ರಚನೆ ಮಾಡಿತ್ತು. ತೀರ್ಥಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಈ ಕಾರ್ಯಪಡೆಯ ಅಧ್ಯಕ್ಷರಾಗಿದ್ದಾರೆ.
ಮಂಗಳವಾರ ಶಿವಮೊಗ್ಗದಲ್ಲಿ ಅಡಕೆ ಕಾರ್ಯಪಡೆಯ ಮೊದಲ ಸಭೆ ನಡೆಯಿತು. ಮಲೆನಾಡು ಅಭಿವೃದ್ಧಿ ಮಂಡಳಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಡಕೆ ಕಾರ್ಯಪಡೆಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ಕೊಟ್ಟಿದ್ದರು. ಅಡಕೆ ಸಂಬಂಧಿತ ಸಂಶೋಧನೆ ಮತ್ತು ಇನ್ನಿತರ ಚಟುವಟಿಕೆಗಳಿಗೆ ಸಹಾಯಕವಾಗುವಂತೆ 10 ಕೋಟಿ ರೂ. ಅನುದಾನವನ್ನು ಕಾರ್ಯಪಡೆಗೆ ನೀಡಲಾಗಿದೆ.

ಸಭೆಯಲ್ಲಿನ ನಿರ್ಣಯಗಳು
* ಅಡಕೆ ಆರೋಗ್ಯಕ್ಕೆ ಹಾನಿಕಾರಕ ಎಂದು ಹಿಂದನ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಇದರ ವಿರುದ್ಧ ವಾದ ಮಂಡಿಸಲು ಸುಪ್ರೀಂ ಕೋರ್ಟ್ನಲ್ಲಿ ಹಿರಿಯ ವಕೀಲರನ್ನು ಸರ್ಕಾರ ನೇಮಿಸಬೇಕು.
* ಎಂ.ಎಸ್.ರಾಮಯ್ಯ ವಿಶ್ವವಿದ್ಯಾಲಯದಲ್ಲಿ ಅಡಕೆ ಕುರಿತು ಸಂಶೋಧನೆ ನಡೆಸಲಾಗುತ್ತಿದೆ. ಸಂಶೋದನಾ ವರದಿ ಬರುವವರೆಗೆ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಮುಂದೂಡಬೇಕಿದೆ. ಈ ಕುರಿತು ಕೇಂದ್ರ ಸರ್ಕಾರದ ವಕೀಲರು ಕೋರ್ಟ್ಗೆ ಮನವರಿಕೆ ಮಾಡಬೇಕು. ಇದರ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು.

ಅಡಕೆಗೆ ಬೆಂಬಲ ಬೆಲೆ
* ಅಡಕೆಯ ಕನಿಷ್ಠ ಬೆಂಬಲ ಬೆಲೆ ದರವನ್ನು ಐದಾರು ವರ್ಷದ ಹಿಂದೆ ನಿಗದಿಪಡಿಸಲಾಗಿದೆ. ತಜ್ಞರು, ಬೆಳೆಗಾರರಿಂದ ಮಾಹಿತಿ ಸಂಗ್ರಹಿಸಿ ಪರಿಷ್ಕೃತ ಎಂಎಸ್ಪಿ ದರ ನಿಗದಿ ಮಾಡಬೇಕು. ಈಗ 250 ರೂ. ಕನಿಷ್ಠ ಬೆಂಬಲ ಇದೆ. ಇದನ್ನು ಪ್ರತಿ ಕೆಜಿಗೆ 350 ರೂ. ನಿಗದಿ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಇದರಿಂದ ವಿದೇಶದಿಂದ ಕಡಿಮೆ ದರಕ್ಕೆ ಅಡಕೆ ಆಮದಾಗುವುದು ತಪ್ಪಲಿದೆ.
* ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ ಅಡಿ ಶಿವಮೊಗ್ಗ ಜಿಲ್ಲೆಗೆ ಅನಾನಸ್ ಹಣ್ಣನ್ನು ನಿಗದಿಪಡಿಸಲಾಗಿದೆ. ಆದರೆ ಈ ಯೋಜನೆ ಅಡಿ ಜಿಲ್ಲೆಗೆ ಅಡಕೆ ಬೆಳೆಯನ್ನು ಪರಿಗಣಿಸುವಂತೆ ಶಿಫಾರಸು ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗುತ್ತಿದೆ.

ಅಡಕೆ ಉಪಯೋಗದ ಪ್ರಯೋಗ
* ಅಡಕೆ ಬೆಳೆ ಸಂಬಂಧ ತೋಟಗಾರಿಕ ವಿಶ್ವವಿದ್ಯಾಲಯ ಕೈಗೊಂಡಿರುವ ಕೌಶಲ್ಯ ತರಬೇತಿ ಕಾರ್ಯಕ್ರಮಗಳಿಗೆ ಟಾಸ್ಕ್ ಫರ್ಸ್ನಿಂದ ಸಹಕಾರ.
* ಅಡಕೆಯನ್ನು ಉಪಯೋಗಿಸಿಕೊಂಡು ಪರ್ಯಾಯ ಪ್ರಯೋಗಗಳಿಗೆ ಟಾಸ್ಕ್ ಫೋರ್ಸ್ನಿಂದ ಹೆಚ್ಚಿನ ಸಹಕಾರ ನೀಡಲು ನಿರ್ಧಾರ.

ಒಂದು ತಂಡ ರಚನೆ
* ಎಂ. ಎಸ್. ರಾಮಯ್ಯ ವಿವಿ, ಚೌಡಪ್ಪ ಅವರ ನೇತೃತ್ವದಲ್ಲಿ ಅಡಕೆ ಕುರಿತ ಸಂಶೋಧನೆಗೆ ತಂತ್ರಜ್ಞರ ತಂಡ.
* ಅಡಕೆಯ ಉತ್ಪಾದನಾ ವೆಚ್ಚ ಕುರಿತು ವರದಿ ನೀಡಲು ತೋಟಗಾರಿಕ ಇಲಾಖೆ ಜೊತೆ ಸೇರಿ ಮಾಹಿತಿ ಸಂಗ್ರಹಿಸಲು ಒಂದು ತಂಡ ರಚನೆ. ಹದಿನೈದು ದಿನದೊಳಗೆ ವರದಿ ಸಲ್ಲಿಸಲು ಸೂಚನೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications