ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂಗೆ ಮನವಿ
ಶಿವಮೊಗ್ಗ, ನವೆಂಬರ್ 19 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮರಾಠ ಅಭಿವೃದ್ಧಿ ಪ್ರಾಧಿಕಾರ ಮತ್ತು ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ರಾಜ್ಯದದಲ್ಲಿ ಈಗಾಗಲೇ ಚರ್ಚೆಗಳು ನಡೆಯುತ್ತಿವೆ.
ಗುರುವಾರ ಸಾಗರ ಕ್ಷೇತ್ರದ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು. 'ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ' ಮಾಡಬೇಕು ಎಂದು ಮನವಿ ಸಲ್ಲಿಸಿದ್ದಾರೆ. ಒಕ್ಕಲಿಗ, ಕ್ರೈಸ್ತ್ರ, ಕುರುಬ ಸಮುದಾಯಗಳು ಸಹ ಮುಖ್ಯಮಂತ್ರಿಗಳಿಗೆ ಬೇಡಿಕೆ ಇಟ್ಟಿವೆ.
ಮನವಿ ಪತ್ರದಲ್ಲಿ ಹರತಾಳು ಹಾಲಪ್ಪ ಅವರು ರಾಜ್ಯದಲ್ಲಿ ಹಿಂದುಳಿದ ವರ್ಗದ ಈಡಿಗ, ಬಿಲ್ಲವ, ನಾಮದಾರಿ, ಪೂಜಾರಿ (ಇತರೆ 26 ಉಪಪಂಗಡಗಳನ್ನು ಸೇರಿ) ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸವಿಸ್ತಾರವಾಗಿ ವಾಸವಿದ್ದಾರೆ ಎಂದು ಹೇಳಿದ್ದಾರೆ.

ಇವರು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಅತಿ ಹಿಂದುಳಿದ ಜನಾಂಗದವರಾಗಿರುತ್ತಾರೆ. ಈ ಜನಾಂಗದವರು ಸಾಂಸ್ಕೃತಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ತಮ್ಮದೇ ಆದ ಸೇವೆ ಮತ್ತು ಸಾಧನೆಯನ್ನು ಮಾಡುತ್ತಾ ಬಂದಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ ಸಮುದಾಯದ 6 ಜನ ವಿಧಾನಸಭಾ ಸದಸ್ಯರು, ಮೂವರು ವಿಧಾನ ಪರಿಷತ್ತಿನ ಸದಸ್ಯರು ಇದ್ದಾರೆ. ಆದ್ದರಿಂದ, ಈಡಿಗ, ಬಿಲ್ಲವ, ನಾಮದಾರಿ, ಪೂಜಾರಿ (ಇತರೆ 26 ಉಪಪಂಗಡಗಳನ್ನು ಸೇರಿ) ಸಮುದಾಯದ ಅಭಿವೃದ್ಧಿಗೆ ನಿಗಮ ಸ್ಥಾಪಿಸಬೇಕು ಎಂದು ಕೋರಿದ್ದಾರೆ.
ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದಾಗ ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿಗಳು ಮಾಧ್ಯಮಗಳಿಗೆ ಪತ್ರಿಕ್ರಿಯೆ ನೀಡಿದ್ದರು.
"ಜಾತಿಗೊಂದು ಪ್ರಾಧಿಕಾರ ರಚನೆ ಮಾಡುತ್ತಾ ಹೋದರೆ ಅದಕ್ಕೆ ಮಿತಿಯೇ ಇರುವುದಿಲ್ಲ. ಇದರ ಬದಲು ಎಲ್ಲಾ ಸಮಾಜದಲ್ಲಿ ಹಿಂದುಳಿದವರು, ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಅಂಥವರಿಗೆ ಹೆಚ್ಚು ಒತ್ತು ಕೊಡುವ ಕೆಲಸ ಮಾಡಿದರೆ ಒಳ್ಳೆಯದು" ಎಂದು ಹೇಳಿದ್ದರು.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications