Get Updates
Get notified of breaking news, exclusive insights, and must-see stories!

ಹಲ್ಲೆ ಪ್ರಕರಣ: ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರನ ಬಂಧನ

ಶಿವಮೊಗ್ಗ, ಮಾರ್ಚ್ 6: ಶಿವಮೊಗ್ಗ ಜಿಲ್ಲೆ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪುತ್ರ ಬಸವೇಶ್ ಅವರನ್ನು ಚಿತ್ರದುರ್ಗದಲ್ಲಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಭದ್ರಾವತಿಯಲ್ಲಿ ಕಳೆದ ಫೆ.28ರ ರಾತ್ರಿ ನಡೆದ ಗಲಾಟೆ ಘಟನೆ ಬಳಿಕ ಬಿಜೆಪಿ ಮುಖಂಡರು ದೂರು ದಾಖಲಿಸಿದ್ದರು. ಆನಂತರ ಬಸವೇಶ್ ಭದ್ರಾವತಿಯಲ್ಲಿ ಕಾಣಿಸಿರಲಿಲ್ಲ. ಖಚಿತ ಮಾಹಿತಿ ಮೇರೆಗೆ ಭದ್ರಾವತಿ ಪೊಲೀಸರು ಬಸವೇಶ್‍ನನ್ನು ಚಿತ್ರದುರ್ಗದಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಫೆ.28ರ ರಾತ್ರಿ ಭದ್ರಾವತಿಯಲ್ಲಿ ನಡೆದ ಪ್ರೊ ಕಬ್ಬಡ್ಡಿ ಪಂದ್ಯಾವಳಿ ವೇಳೇಯಲ್ಲಿ ಪಂದ್ಯದಲ್ಲಿ ರನ್ನರ್​ ಅಪ್​ ಆಗಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್ ತಂಡ ಜೈ ಶ್ರೀರಾಮ್ ಎಂದು ಘೋಷಣೆ ಹಾಕಿದ್ದರು.

 Assault Case: Bhadravathi MLA Sangameshwars Son Arrest By Police

ಇದರಿಂದ ಸಿಟ್ಟಾಗಿದ್ದ ಶಾಸಕ ಸಂಗಮೇಶ್ವರ್ ಪುತ್ರ, ಸಹೋದರನ ಪುತ್ರರಿಂದ ತಂಡದ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಶಾಸಕ ಸಂಗಮೇಶ್ವರ್ ಸೇರಿದಂತೆ ಅವರ ಕುಟುಂಬದವರ ವಿರುದ್ಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

 Assault Case: Bhadravathi MLA Sangameshwars Son Arrest By Police

ಘಟನೆ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದರು. ಕೊಲೆ ಬೆದರಿಕೆ, ಜಾತಿ ನಿಂದನೆ ಕೇಸ್​ನಲ್ಲಿ ಬಸವೇಶ್ A-4 ಆರೋಪಿಯಾಗಿದ್ದು, ಈ ಪ್ರಕರಣ ಸಂಬಂಧ ಈತನಕ ಸುಮಾರು 15 ಮಂದಿಯನ್ನು ಬಂಧಿಸಲಾಗಿದೆ. ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಬಸವೇಶ್ನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+