ಜೋಗ ಜಲಪಾತದಲ್ಲಿ ಮೈಮರೆತು ಹಾಡಿದ ಅಟಲ್ ಜೀ!
ಶಿವಮೊಗ್ಗ, ಆಗಸ್ಟ್ 17 : ದಿ. ಅಟಲ್ ಬಿಹಾರಿ ವಾಜಪೇಯಿ ಅವರು 1968 ರಲ್ಲಿ ಪ್ರಾಂತೀಯ ಜನಸಂಘ ಸಮಾವೇಶದಲ್ಲಿ ಪಾಲ್ಗೊಳ್ಳಲು ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದರು. ಆಗ ಅವರು ಆರ್ಎಸ್ಎಸ್ನ ಡಿ.ಎಚ್.ಸುಬ್ಬಣ್ಣ ಮತ್ತು ಡಿ.ಎಚ್.ಶಂಕರಮೂರ್ತಿ ಅವರ ಬಿ.ಎಚ್. ರಸ್ತೆಯ ಕೂಡು ಕುಟುಂಬದ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು.
ಆಗ ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗೆ ಸುಬ್ಬಣ್ಣ ಅವರು ಕಳೆದ ಅನುಭವವನ್ನು ನೆನಪಿಸಿಕೊಂಡಿದ್ದಾರೆ.
ಪ್ರಾಂತೀಯ ಸಮಾವೇಶದಲ್ಲಿ ಭಾಗವಹಿಸಿದ್ದ ವಾಜಪೇಯಿ ಅವರನ್ನು ನಾನು ನನ್ನ ಅಂಬಾಸಿಡರ್ ಕಾರಿನಲ್ಲಿ ಕೂರಿಸಿಕೊಂಡು ಜೋಗ ಫಾಲ್ಸ್ ನೋಡಲು ಕರೆದುಕೊಂಡು ಹೋಗುವ ಅವಕಾಶ ಆಗ ನನಗೆ ಒದಗಿಬಂದಿತ್ತು. ಅವರು ಜೋಗ ಜಲಪಾತ ಸೌಂದರ್ಯವನ್ನು ನೋಡಿ ವಿಸ್ಮಯಗೊಂಡಿದ್ದರು.

ಜೋಗ ಜಲಪಾತ ಸೌಂದರ್ಯವನ್ನು ನೋಡಿದ ಅವರು ಆಶ್ಚರ್ಯ ಚಕಿತರಾದರು. ಜೋಗ ಜಲಪಾತದ ಒಂದು ನೋಟವನ್ನು ಕಣ್ಣಲ್ಲಿ ತುಂಬಿಕೊಂಡು ನಂತರ ಜಲಪಾತದ ಕೆಳ ಭಾಗಕ್ಕೆ ಹೋಗಲು ಒತ್ತಾಯಿಸಿದರು.
ಜೋಗ ಜಲಪಾತದ ಕೆಳಗೆ ನೀರು ಮತ್ತು ನಿಂಬೆ ಹಣ್ಣಿನೊಂದಿಗೆ ಹೊರಟೆವು. ಯಾವುದೇ ಮೆಟ್ಟಿಲುಗಳಿಲ್ಲದ ಆ ಜಾಗದಲ್ಲಿ ಇಳಿಯುವುದು ನಿಜಕ್ಕೂ ಸವಾಲು ಆಗಿತ್ತು. ನಾವು ಇಬ್ಬರು ಮಾತ್ರವೇ ಫಾಲ್ಸ್ ಕೆಳ ಭಾಗಕ್ಕೆ ಹೋದೆವು.
ಕೆಳ ಭಾಗ ತಲುಪುತ್ತಿದ್ದಂತೆಯೇ ವಾಜಪೇಯಿ ಅವರು ಒಂದು ದೊಡ್ಡ ಬಂಡೆಯ ಮೇಲೆ ಮಲಗಿ, ಹಾಡಲು ಶುರು ಮಾಡಿದರು. ಅವರು ಸುಮಾರು ಅರ್ಧ ಗಂಟೆ ದೊಡ್ಡ ಕಲ್ಲಿನ ಮೇಲೆ ಮಲಗಿದ್ದ ನೆನಪು ಮೆರಯಲಾಗದು ಎಂದು ಆ ದಿನಗಳನ್ನು ಸುಬ್ಬಣ್ಣ ಅವರು ಇಂದು ಮೆಲುಕು ಹಾಕಿದರು.

ಫಾಲ್ಸ್ ಮೇಲಕ್ಕೆ ಹತ್ತುವುದು ನಮ್ಮಿಬ್ಬರಿಗೆ ಸುಲಭ ಕೆಲಸವಾಗಿರಲಿಲ್ಲ. ಪರಿಸ್ಥಿತಿ ಕಠಿಣವಾಗಿದ್ದನ್ನು ಗಮನಿಸಿದ ವಾಜಪೇಯಿಜೀ ಏಕ್, ದೋ, ತೀನ್, ಚಾರ್.. ಎಣಿಸುವ ಮೂಲಕ 10 ಹೆಜ್ಜೆ ಮುಂದಕ್ಕೆ ಹೋಗುತ್ತಿದ್ದರು. ಅವರು ತಮ್ಮ ಶರ್ಟ್ ಪ್ಯಾಂಟ್ ಎರಡು ಬಿಚ್ಚಿಹಾಕಿ ಮೇಲಕ್ಕೆ ಹತ್ತಿದರು ನಂತರ ನಾವು ಒಟ್ಟಿಗೆ ಕುಳಿತು ವಿಶ್ರಾಂತಿ ತೆಗೆದುಕೊಂಡು ಜಲಪಾತ ಏರುತ್ತಾ ಮೇಲಕ್ಕೆ ಬಂದಾಗ ಮಧ್ಯಾಹ್ನವಾಗಿತ್ತು.
ಮೇಲೆ ಬಂದ ನಂತರ ಸ್ವಲ್ಪ ಆಯಾಸಗೊಂಡಿದ್ದರು. ಹಾಗಾಗಿ ವಾಜಪೇಯಿ ಅವರೊಂದಿಗೆ ಕೆಲ ಸಮಯ ಕಾರಿನಲ್ಲಿ ಕುಳಿತು ನಿದ್ರಿಸಿದೆವು. ನಾವು ಮನೆಗೆ ಬರುವಷ್ಟರಲ್ಲಿ ಮಧ್ಯಾಹ್ನ 3 ಗಂಟೆಯಾಗಿತ್ತು. ಈ ನಡುವೆ ಸಹೋದರ ಶಂಕರ ಮೂರ್ತಿ, ವಾಜಪೇಯಿಜೀಯೊಂದಿಗೆ ಊಟ ಮಾಡಲು ಕೆಲವು ಸ್ನೇಹಿತರನ್ನು ಆಹ್ವಾನಿಸಿದ್ದರು. ಅವರು ನಮ್ಮೊಂದಿಗೆ ಒಂದು ಚಪಾತಿ ತಿಂದು ವಿಶ್ರಾಂತಿ ಪಡೆದರು ಎಂದು ಸುಬ್ಬಣ್ಣ ಹೇಳಿದರು.

ನಾಲ್ಕು ಚಾಪತಿ ಮತ್ತು ಸಬ್ಜಿ : ಶಿವಮೊಗ್ಗದಿಂದ ಹರಿಹರಕ್ಕೆ ಹೊರಡಲು ವಾಜಪೇಯಿ ಅವರು ಮುಂದಾದರು. ನಾಲ್ಕು ಚಾಪತಿ ಮತ್ತು ಸಬ್ಜಿಯನ್ನು ಪ್ಯಾಕ್ ಮಾಡಲು ನನಗೆ ಹೇಳಿದರು. ನಾನು ಅವರನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ನಗರದ ರೈಲ್ವೆ ನಿಲ್ದಾಣಕ್ಕೆ ಬಿಟ್ಟು ರೈಲು ಹತ್ತಿಸಿದ ನಂತರ ಅವರು ನನಗೆ 'ಅರೆ ಸುಬ್ಬಾಣ್ಣಾ, ನೀವು ನಾಲ್ಕು ಚಾಪತಿ ಮತ್ತು ಸಬ್ಜಿಯನ್ನು ಪ್ಯಾಕ್ ಮಾಡಿದ್ದೀರಾ ತಾನೇ ?' ಎಂದು ಕೇಳಿದರು. ಇದು ಅವರು ಆಹಾರವನ್ನು ಪ್ರೀತಿಸುತ್ತಿದ್ದ ಮತ್ತು ತಮ್ಮ ಆತ್ಮೀಯರೊಂದಿಗೆ ಬೆರೆಯುವ ಪರಿಯಾಗಿತ್ತು ಎಂದು ಸುಬ್ಬಣ್ಣ ಅವರು ಅವರೊಂದಿಗೆ ಕೇಳದ ಸಮಯವನ್ನು ನೆನಪು ಮಾಡಿಕೊಂಡರು.
ಶಿವಮೊಗ್ಗ ಜಿಲ್ಲೆಯಲ್ಲಿ ಅಟಲ್ ಜೀ ಕಳೆದ ಕ್ಷಣದಗಳು ಅಂದಿನ ನಾಯಕರಿಗೆ ಮರೆಯಲು ಸಾಧ್ಯವಿಲ್ಲ ಅವರದೂ ವ್ಯಕ್ತತ್ವವೇ ಹಾಗೆ ಸಾಮಾನ್ಯರಲ್ಲಿ ಸಾಮಾನ್ಯರಾಗಿ ಮಕ್ಕಳೊಂದಿಗೆ ಮಕ್ಕಳಾಗಿ ವರ್ತಿಸುತ್ತಿದ್ದರು ಸರಳ ಸಜ್ಜನ ವ್ಯಕ್ತಿ ಎಷ್ಟೇ ಎತ್ತರಕ್ಕೆ ಏರಿದರು ನಡೆದು ಬಂದ ಹೆಜ್ಜೆಯನ್ನು ಅವರು ಎಂದು ಮರೆತು ಇರಲಿಲ್ಲ ಎಂದರು.
-
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಎಲ್ಪಿಜಿ ಪೂರೈಕೆಯಲ್ಲಿ ತೊಂದರೆ ಇಲ್ಲ, ಕೇಂದ್ರ ಸಚಿವರಿಂದ ಭರವಸೆ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು












Click it and Unblock the Notifications