ಮಾಂಸ ಮಾರಾಟಗಾರರೇ ಗಮನಿಸಿ: ಶಿವರಾತ್ರಿಯಂದು ಇಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ...
ಶಿವಮೊಗ್ಗ ಮಾರ್ಚ್ 6: ಮಾರ್ಚ್ 8ರಂದು ಮಹಾ ಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತದೆ. ಇದರ ಪ್ರಯುಕ್ತ ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಹೀಗಾಗಿ ಮಾಂಸ ಮಾರಾಟಗಾರರು ಹಾಗೂ ವ್ಯಾಪಾರಿಗಳು ಈ ಬಗ್ಗೆ ಗಮನ ಹರಿಸುವಂತೆ ಸೂಚಿಸಲಾಗಿದೆ.
ಈ ಬಗ್ಗೆ ಸಭೆ ನಡೆಸಿದ ಬಳಿಕ ಶಿವಮೊಗ್ಗ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮಾರ್ಚ್ 8ರಂದು ದೇಶಾದ್ಯಂತ ಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ಆಚರಣೆಯ ವೇಳೆ ಕಟ್ಟುನಿಟ್ಟಿನ ಆಹಾರ ಕ್ರಮವನ್ನು ಪಾಲಿಸಲಾಗುತ್ತದೆ. ಜೊತೆಗೆ ಸಾತ್ವಿಕ ಆಹಾರಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತದೆ.

ಇದರ ಬೆನ್ನಲ್ಲೆ ಮಾಂಸ ಮಾರಾಟಕ್ಕೆ ಈ ದಿನ ಬ್ರೇಕ್ ಹಾಕಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮಾಡದಿರಲು ಹಾಗೂ ಪ್ರಾಣಿ ವಧೆ ಮಾಡದೇ ಇರಲು ಸಾರ್ವಜನಿಕರಲ್ಲಿ ಕೋರಲಾಗಿದೆ. ಜೊತೆಗೆ ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ಸೂಚಿಸಿದ್ದಾರೆ.
ಶಿವರಾತ್ರಿಯು ಶಿವನಿಗೆ ಅರ್ಪಿತವಾದ ಹಬ್ಬವಾಗಿದೆ. ಈ ದಿನ ಶಿವನ ಭಕ್ತರು ಉಪವಾಸ ಮಾಡುವ ಮೂಲಕ ರಾತ್ರಿ ಇಡೀ ಜಾಗರಣೆ ಮಾಡುತ್ತಾರೆ. ಶಿವ ಆರಾಧನೆ ಮಾಡಿ ವಿಶೇಷ ಪೂಜೆ ಪುನಸ್ಕಾರಗಳಲ್ಲಿ ಭಾಗಿಯಾಗುತ್ತಾರೆ. ಜೊತೆಗೆ ಶಿವನ ದೇವಸ್ಥಾನಗಳಲ್ಲಿಯೂ ವಿಶೇಷ ಪೂಜೆಗಳು ಈ ದಿನ ನಡೆಯುತ್ತವೆ. ಶಿವರಾತ್ರಿಯಂದು ಕಠಿಣ ಉಪವಾಸ ಮಾಡಿದರೆ ಶಿವನ ಆಶೀರ್ವಾದ ಸಿಗಲಿದೆ ಎಂದು ನಂಬಲಾಗುತ್ತದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications