ತಮ್ಮಾಡಿಹಳ್ಳಿ ದತ್ತು ಪಡೆದ ಆಯನೂರು ಮಂಜುನಾಥ್
ಶಿವಮೊಗ್ಗ, ನ. 24 : ಬಿಜೆಪಿ ನಾಯಕ ಮತ್ತು ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್ ಅವರು ಸಂಸದರ ಆದರ್ಶ ಗ್ರಾಮ ಯೋಜನೆ ಅಡಿಯಲ್ಲಿ ಶಿವಮೊಗ್ಗ ತಾಲೂಕಿನ ತಮ್ಮಾಡಿಹಳ್ಳಿ ಗ್ರಾಮವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಗ್ರಾಮದ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಸಂಸದರ ಆದರ್ಶ ಗ್ರಾಮ ಯೋಜನೆ ಅಡಿಯಲ್ಲಿ ಶಿವಮೊಗ್ಗ ತಾಲೂಕಿನ ತಮ್ಮಾಡಿಹಳ್ಳಿ ಗ್ರಾಮವನ್ನು ಆಯ್ಕೆ ಮಾಡಿಕೊಂಡಿರುವುದಾಗಿ ಆಯನೂರು ಮಂಜುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಮ್ಮಾಡಿಹಳ್ಳಿ ಗ್ರಾಮ ಪಂಚಾಯಿತಿಯಾಗಿದ್ದು ಇದರ ಅಡಿಯಲ್ಲಿ ತಮ್ಮಾಡಿಹಳ್ಳಿ, ಆಡಿನಕೊಟ್ಟಿಗೆ, ಹೂಡಿ ಸೇರಿದಂತೆ 8 ಗ್ರಾಮಗಳು ಬರುತ್ತವೆ.

80 ಲಕ್ಷ ಅನುದಾನ ಘೋಷಣೆ : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡರು ಆಯ್ಕೆ ಮಾಡಿಕೊಂಡಿರುವ ನೆಟ್ಟಿಗೆರೆ ಗ್ರಾಮ ಪಂಚಾಯಿತಿಗೆ ಮೊದಲ ಕಂತಾಗಿ ಸಂಸದರ ನಿಧಿಯಿಂದ 80 ಲಕ್ಷ ರೂ.ಗಳ ಅನುದಾನ ಘೋಷಿಸಿದ್ದಾರೆ. [ಮೂರು ಗ್ರಾಮಗಳನ್ನು ದತ್ತು ಪಡೆಯಲಿದ್ದಾರೆ ಡಿವಿಎಸ್]
ಯಶವಂತಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ನೆಟ್ಟಿಗೆರೆ ಗ್ರಾಮದಲ್ಲಿ ಯೋಜನೆ ಅಡಿಯಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಕುರಿತು ಭಾನುವಾರ ಗ್ರಾಮಕ್ಕೆ ತೆರಳಿ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗೆ ಸದಾನಂದ ಗೌಡರು ಸಭೆ ನಡೆಸಿದರು.
ನೆಟ್ಟಿಗೆರೆ ಗ್ರಾಮ ಮತ್ತು ಬಂಡೆ ಕಾಲೋನಿಗೆ ಕುಡಿಯುವ ನೀರು ಪೂರೈಕೆ, ನೆಟ್ಟಿಗೆರೆ ರಾಮಗೊಂಡ್ಲು ಪರಿಶಿಷ್ಟರ ಕಾಲೋನಿ ನಡುವೆ ಸಿಮೆಂಟ್ ರಸ್ತೆ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸದಾನಂದ ಗೌಡರು ಸೂಚಿಸಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications