ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೆಸರು ಹೇಳದೆ ಮಧು ಬಂಗಾರಪ್ಪಗೆ ಟಾಂಗ್ ಕೊಟ್ಟ ಬಿ.ವೈ.ರಾಘವೇಂದ್ರ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಮಾರ್ಚ್ 11: ಶಿವಮೊಗ್ಗದಲ್ಲಿ ತಮ್ಮ ವಿರುದ್ಧ ಸ್ಪರ್ಧಿಸುತ್ತಿರುವ ಮೈತ್ರಿ ಕೂಟದ ಅಭ್ಯರ್ಥಿ ಇಂಪೋರ್ಟೆಡ್ ಅಭ್ಯರ್ಥಿ. ಚುನಾವಣೆ ಬಂದಾಗ ಮಾತ್ರ ಕ್ಷೇತ್ರಕ್ಕೆ ಬರುತ್ತಾರೆ
ಎಂದು ತಮ್ಮ ಪ್ರತಿಸ್ಪರ್ಧಿ ಮಧು ಬಂಗಾರಪ್ಪ ವಿರುದ್ಧ ಸಂಸದ ಬಿ.ವೈ.ರಾಘವೇಂದ್ರ ಹೆಸರು ಹೇಳದೆ ವಾಗ್ದಾಳಿ ನಡೆಸಿದರು.

ಲೋಕಸಭೆ ಚುನಾವಣೆ ಘೋಷಣೆ ಬಳಿಕ ಭಾನುವಾರ ಸಂಜೆ (ಮಾ.10) ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಕ್ಷೇತ್ರದಲ್ಲೇ ಇರುವ ಅಭ್ಯರ್ಥಿಗೆ ಜನ ಆಶೀರ್ವಾದ ಮಾಡುವುದರಲ್ಲಿ ಅನುಮಾನವೇ ಇಲ್ಲ. ಅದನ್ನು ಬಿಟ್ಟು ಚುನಾವಣೆ ಸಮಯದಲ್ಲಿ ಕ್ಷೇತ್ರಕ್ಕೆ ಬರುವವರಿಗೆ ಜನ ತಕ್ಕಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

B.Y.Raghavendra talked indirectly about Madhu Bangarappa

 ಫ್ಲಾಪ್ ಆಪರೇಷನ್‌ ಡಾಕ್ಟರೇಟ್‌ ಯಡಿಯೂರಪ್ಪಗೆ ಕೊಡಬೇಕು: ಮಧು ಬಂಗಾರಪ್ಪ ಫ್ಲಾಪ್ ಆಪರೇಷನ್‌ ಡಾಕ್ಟರೇಟ್‌ ಯಡಿಯೂರಪ್ಪಗೆ ಕೊಡಬೇಕು: ಮಧು ಬಂಗಾರಪ್ಪ

ಸೂರ್ಯ-ಚಂದ್ರ ಇರುವುದು ಎಷ್ಟು ನಿಜವೋ, ನರೇಂದ್ರ‌ ಮೋದಿ ಮತ್ತೆ ಪ್ರಧಾನಿಯಾಗುವುದೂ ಅಷ್ಟೇ ಸತ್ಯ. ವಿರೋಧ ಪಕ್ಷಗಳು ಈಗ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿವೆ. ವಿಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಮಾಡುವುದರೊಳಗಾಗಿ ಚುನಾವಣೆಯೇ ಮುಗಿದಿರುತ್ತದೆ. ಈ ಬಾರಿ ಬಿಜೆಪಿ ಪಕ್ಷ ದೇಶದಲ್ಲಿ 380 ರಿಂದ 400 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ರಾಘವೇಂದ್ರ ಭವಿಷ್ಯ ನುಡಿದರು.

English summary
B.Y. Raghavendra talked indirectly about Madhu Bangarappa in Shivamogga.Raghavendra said he comes only in election time. People do not bless them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X