ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ; ಕಲ್ಲು ತೂರಾಟ, ಶಾಲೆ-ಕಾಲೇಜುಗಳಿಗೆ ರಜೆ
ಶಿವಮೊಗ್ಗ, ಫೆಬ್ರವರಿ 21: ಭಾನುವಾರ (ಫೆಬ್ರವರಿ 20) ರಾತ್ರಿ ಎಲ್ಲರೂ ಊಟ ಮಾಡಿ ಇನ್ನೇನು ನಿದ್ರೆಗೆ ಜಾರಬೇಕು ಅನ್ನುವಷ್ಟರಲ್ಲೇ ಶಿವಮೊಗ್ಗ ಜಿಲ್ಲೆಯಲ್ಲಿ ರಕ್ತಪಾತ ನಡೆದಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ಹಿಂದೂ ಕಾರ್ಯಕರ್ತ ಹರ್ಷನನ್ನು ಕೊಲೆ ಮಾಡಿ ಪರಾರಿ ಆಗಿದ್ದಾರೆ. ಇದರಿಂದಾಗಿ ಶಿವಮೊಗ್ಗ ಜಿಲ್ಲೆ ಇದೀಗ ಬೂದಿ ಮುಚ್ಚಿದ ಕೆಂಡದತಾಗಿದೆ.
ಹಿಂದೂ ಕಾರ್ಯಕರ್ತನ ಹತ್ಯೆಯಿಂದ ರೊಚ್ಚಿಗೆದ್ದ ಜನರು ಮನ ಬಂದಂತೆ ಕಲ್ಲು ತೂರಾಟ ನಡೆಸಿದರು. ಪೊಲೀಸರು ಎಷ್ಟೇ ತಡೆದರೂ ಕಲ್ಲೆಸೆಯುವುದನ್ನು ಬಿಡಲಿಲ್ಲ. ಕಣ್ಣಿಗೆ ಕಂಡ ವಾಹನಗಳಿಗೆ ಬೆಂಕಿ ಹಚ್ಚಿದರು. ಇದಕ್ಕೆಲ್ಲಾ ಕಾರಣ ನಡುರಸ್ತೆಯಲ್ಲೇ ನೆತ್ತರೋಕುಳಿ ಹರಿದಿರುವುದು. ದುಷ್ಕರ್ಮಿಗಳು ಮನಬಂದಂತೆ ಬಜರಂಗದಳ ಕಾರ್ಯಕರ್ತ ಹರ್ಷನನ್ನು ಹತ್ಯೆ ಮಾಡಿದ್ದಾರೆ.
ಏನಿದು ಘಟನೆ?
ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಜಿಲ್ಲೆಯಲ್ಲಿ ಭಾನುವಾರ ರಾತ್ರಿ 30ರ ಸಮಯಕ್ಕೆ ನೆತ್ತರೋಕುಳಿ ಹರಿದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುವ ರಸ್ತೆ ಪಕ್ಕದ ಬಡಾವಣೆಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಕಾರಿನಲ್ಲಿ ಬಂದಿದ್ದ 4ರಿಂದ 6 ಜನರ ಗುಂಪು, ಬಜರಂಗದಳ ಕಾರ್ಯಕರ್ತ ಹರ್ಷ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಹರ್ಷ ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದನು. ಕೂಡಲೇ ಹರ್ಷನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದನು.

ಕಲ್ಲುತೂರಾಟ, ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ನಿಯಂತ್ರಣ
ಶಿವಮೊಗ್ಗದ ಸಿಗೇಹಟ್ಟಿ ಬಡಾವಣೆ ನಿವಾಸಿಯಾಗಿದ್ದ ಹರ್ಷ, ಐದು ವರ್ಷಗಳಿಂದ ಭಜರಂಗ ದಳದ ಸಕ್ರಿಯ ಕಾರ್ಯಕರ್ತನಾಗಿದ್ದ. ಈ ಹಿಂದೆ ಎರಡು ಬಾರಿ ಈತನ ಮೇಲೆ ಅಟ್ಯಾಕ್ ನಡೆದಿತ್ತು. ಆದರೆ ಭಾನುವಾರ ಸ್ಕೆಚ್ ಹಾಕಿದ್ದ ದುಷ್ಕರ್ಮಿಗಳು, ಹರ್ಷನ ಮೇಲೆ ಭೀಕರ ದಾಳಿ ಮಾಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಮಾರಕಾಸ್ತ್ರ ಬೀಸಿ ಪರಾರಿ ಆಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸೀಗೆಹಟ್ಟಿ ಬಡಾವಣೆ ಮತ್ತು ಅಕ್ಕಪಕ್ಕದ ಬಡಾವಣೆ ನಿವಾಸಿಗಳು ಜಮಾಯಿಸಿದರು. ರವಿವರ್ಮ ಬೀದಿ, ಕಲರ್ ಪೇಟೆ, ಶಾಮರಾವ್ ಬೀದಿ ಸೀಗೆಹಟ್ಟಿ ಸೇರಿ ವಿವಿಧ ಬಡಾವಣೆಯಲ್ಲಿ 2 ಉದ್ರಿಕ್ತ ಗುಂಪುಗಳ ಮಧ್ಯೆ ಕಲ್ಲು ತೂರಾಟ ನಡೀತು. ನಂತರ ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ನಿಯಂತ್ರಿಸಿದರು.
ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್- ಇಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
ಭಜರಂಗ ದಳ ಕಾರ್ಯಕರ್ತನ ಹತ್ಯೆ ಸುದ್ದಿ ಮಲೆನಾಡಿನಾದ್ಯಂತ ಕಾಡ್ಗಿಚ್ಚಿನಂತೆ ಹಬ್ಬಿತು. ಕೂಡಲೇ ಸ್ಥಳಕ್ಕೆ ಬಂದ ಎಸ್ಪಿ ಲಕ್ಷ್ಮಿಪ್ರಸಾದ್ ಮತ್ತು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಪರಿಶೀಲನೆ ನಡೆಸಿದರು. ಸೂಕ್ಷ್ಮಪ್ರದೇಶಗಳಲ್ಲಿ ರೌಂಡ್ಸ್ ಹಾಕಿದರು. ಮುಂಜಾಗ್ರತಾ ಕ್ರಮವಾಗಿ ಇಂದು ಶಿವಮೊಗ್ಗ ನಗರದ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಇದೇ ವೇಳೆ, ಮಾತಾಡಿದ ಡಿಸಿ ಡಾ. ಸೆಲ್ವಮಣಿ, ಆರೋಪಿಗಳನ್ನು ಕೂಡಲೇ ಬಂಧಿಸಲಾಗುವುದು. ಶಾಂತಿ ಸುವ್ಯವಸ್ಥೆಗೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಯಾರೂ ತಾಳ್ಮೆ ಕಳೆದುಕೊಳ್ಳಬೇಡಿ ಅಂತಾ ಮನವಿ ಮಾಡಿದ್ದಾರೆ.

ಉದ್ವಿಗ್ನಗೊಂಡ ಪ್ರದೇಶದಲ್ಲಿ ಐಜಿಪಿ ತ್ಯಾಗರಾಜನ್ ರೌಂಡ್ಸ್
ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಅಲರ್ಟ್ ಆಗಿದ್ದಾರೆ. ಉದ್ವಿಗ್ನಗೊಂಡ ಪ್ರದೇಶಗಳಲ್ಲಿ ರೌಂಡ್ಸ್ ಹಾಕಿದರು. ಮತ್ತೊಂದೆಡೆ, ಹಿಂದೂ ಕಾರ್ಯಕರ್ತನ ಭೀಕರ ಕೊಲೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ. ಈಗಾಗಲೇ ಹಿಜಾಬ್ ವಿವಾದದ ಮೂಲಕ ಶಿವಮೊಗ್ಗ ನಗರ ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಈ ನಡುವೆ ಭಜರಂಗದಳ ಕಾರ್ಯಕರ್ತನ ಕಗ್ಗೊಲೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವಂತೆ ಮಾಡಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರು ಪೊಲೀಸರು, ಆರೋಪಿಗಳಿಗೆ ಬಲೆ ಬೀಸಿದ್ದಾರೆ.
ಹತ್ಯೆಯಾದ ಕಾರ್ಯಕರ್ತನ ಮೆನೆಗೆ ಗೃಹ ಸಚಿವರ ಭೇಟಿ
ಶಿವಮೊಗ್ಗದಲ್ಲಿ ಹತ್ಯೆಯಾದ ಭಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಸ್ಥರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸೋಮವಾರ ಬೆಳಗ್ಗೆ ಭೇಟಿಯಾಗಿ, ಸಾಂತ್ವನ ಹೇಳಿದರು.
Recommended Video
ಹತ್ಯೆಯ ಆರೋಪಿಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ದುಷ್ಕರ್ಮಿಗಳನ್ನು ಬಂಧಿಸಲು ಪೊಲೀಸರು ವ್ಯಾಪಕ ಶೋಧ ನಡೆಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಇದೇ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರರವರು ಸೋಮವಾರ ಮುಂಜಾನೆ 8.30ಕ್ಕೆ ಶಿವಮೊಗ್ಗ ಪ್ರವಾಸಿ ಮಂದಿರದಲ್ಲಿ ಕೊಲೆ ಪ್ರಕರಣದ ಕುರಿತು ಸುದ್ದಿಗೋಷ್ಠಿ ನಡೆಸಲಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications