Breaking: ಆಗುಂಬೆ ಘಾಟ್ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ ಮತ್ತೆ ವಿಸ್ತರಣೆ
ಶಿವಮೊಗ್ಗ, ಆಗಸ್ಟ್ 30: ಆಗುಂಬೆ ಘಾಟ್ನಲ್ಲಿ ಭಾರೀ ವಾಹನ ಸಂಚಾರ ನಿಷೇಧದ ಆದೇಶವನ್ನು ಇನ್ನೂ ಒಂದು ತಿಂಗಳು ವಿಸ್ತರಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಆಗುಂಬೆ ಭಾಗದಲ್ಲಿ ಜೋರು ಮಳೆಯಾಗುತ್ತಿತ್ತು. ಘಾಟಿಯ 11ನೇ ತಿರುವಿನಲ್ಲಿ ಭೂ ಕುಸಿತ ಉಂಟಾಗಿತ್ತು. ಈ ಹಿನ್ನೆಲೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧಿಸಲಾಗಿತ್ತು. ಆಗಸ್ಟ್ 31ರವರೆಗೆ ಈ ನಿಷೇಧ ವಿಧಿಸಲಾಗಿತ್ತು. ಆದರೆ ಈ ಭಾಗದಲ್ಲಿ ಮಳೆ ಮುಂದುವರೆದಿದೆ. ಅಲ್ಲದೆ ಭೂ ಕುಸಿತದ ಸಾಧ್ಯತೆಯು ಇದೆ. ಹಾಗಾಗಿ ಭಾರೀ ವಾಹನ ಸಂಚಾರ ನಿಷೇಧವನ್ನು ವಿಸ್ತರಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಇಂಜಿನಿಯರ್ ಅವರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದರು.
ಆಗುಂಬೆ ಘಾಟ್ನಲ್ಲಿ ಭಾರೀ ವಾಹನ ಸಂಚಾರ ನಿಷೇಧದ ಆದೇಶವನ್ನು ವಿಸ್ತರಿಸಲಾಗಿದೆ. ಸೆಪ್ಟೆಂಬರ್ 30ರವರೆಗೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ.

ಸದ್ಯ ಘಾಟ್ನಲ್ಲಿ ಲಘು ವಾಹನಗಳು ಮತ್ತು ಬಸ್ಸುಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ. ಭಾರೀ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಸಾವಿರಾರು ಎಕರೆ ಬೆಳನಾಶ; ಸೋಮವಾರ ಸುರಿದ ಭಾರೀ ಮಳೆಗೆ ಭದ್ರಾ ಎಡದಂಡೆ ಕಾಲುವೆಯ ತಡೆಗೋಡೆ ಒಡೆದು ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಭತ್ತ, ಅಡಿಕೆ ಸೇರಿದಂತೆ ಹಲವು ಬೆಳೆ ಹಾನಿಗೊಳಗಾಗಿವೆ. ಭಾರೀ ಮಳೆ ಪರಿಣಾಮ ಜಿಲ್ಲೆಯ ಬಹುತೇಕ ಕೆರೆ ಕೋಡಿಗಳು ತುಂಬಿ ಹರಿಯುತ್ತಿರುವುದರಿಂದ ಕಾಲುವೆ ತಡೆಗೋಡೆ ಒಡೆದಿದೆ ಎಂದು ತಿಳಿದುಬಂದಿದೆ.

ಇನ್ನೂ ಜುಲೈ ಮತ್ತು ಆಗಸ್ಟ್ ಎರಡು ತಿಂಗಳು ಸೇರಿ ಜಿಲ್ಲೆಯಲ್ಲಿ ಸುರಿದಿರುವ ಮುಂಗಾರು ಹಂಗಾಮಿನಲ್ಲಿ 3,291 ಹೆಕ್ಟೇರ್ ತೋಟಗಾರಿಕೆ ಹಾಗೂ ಕೃಷಿ ಬೆಳಗಳು ಹಾನಿಗೊಳಗಾಗಿವೆ. ಜಿಲ್ಲೆಯಲ್ಲಿ ಈ ಎರಡು ತಿಂಗಳಲ್ಲಿ 21 ಕೋಟಿ ರೂ ನಷ್ಟೂ ಬೆಳೆ ಹಾನಿಯಾಗಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Summer Walking: ಬೇಸಿಗೆಯಲ್ಲಿ ವಾಕಿಂಗ್ ಮಾಡುವವರು ಈ ನಿಯಮ ತಪ್ಪದೇ ಪಾಲಿಸಿ.. -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications