ಅಪಸ್ವರದ ನಡುವೆ ಬಂಗಾರಪ್ಪ ಮೂರ್ತಿ ಪ್ರತಿಷ್ಠಾಪನೆಗೆ ಶಂಕುಸ್ಥಾಪನೆ
ಶಿವಮೊಗ್ಗ, ಮಾರ್ಚ್ 04: ಸೊರಬ ಜನರ ಹಲವು ದಿನಗಳ ಕನಸಾಗಿರುವ ದಿ.ಬಂಗಾರಪ್ಪನವರ ಪುತ್ಥಳಿಗೆ ಶಂಕುಸ್ಥಾಪನೆಯನ್ನ ಶಾಸಕ ಕುಮಾರ ಬಂಗಾರಪ್ಪ ಇಂದು ಸೋಮವಾರ ನೆರವೇರಿಸಿದರು.
ಶಾಸಕ ಕುಮಾರ ಬಂಗಾರಪ್ಪನವರು, ತಂದೆ ದಿ.ಬಂಗಾರಪ್ಪನವರ ಪುತ್ಥಳಿಯನ್ನು ನಿರ್ಮಾಣ ಮಾಡಲು ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಪಟ್ಟಣ ಪಂಚಾಯಿತಿ ಸದಸ್ಯರು ಅಪಸ್ವರ ತೆಗೆದಿದ್ದಾರೆ.
ಸೊರಬ ಪಟ್ಟಣ ಪಂಚಾಯಿತಿಯಿಂದ ಖಾಸಗಿ ಬಸ್ ನಿಲ್ದಾಣದಲ್ಲಿ ಇಂದು ಕಾರ್ಯಕ್ರಮ ನಡೆದಿರುವ ಬಗ್ಗೆ ನಮಗೆ ಭಿನ್ನಾಭಿಪ್ರಾಯವಿಲ್ಲ. ಆದರೆ ದಿ.ಬಂಗಾರಪ್ಪನವರ ಅಭಿಮಾನಿಗಳು, ಅವರಿಗೆ ಬೆಂಬಲ ನೀಡಿದವರು ಅಪಾರ ಸಂಖ್ಯೆಯಲ್ಲಿದ್ದಾರೆ. ಈ ಕಾರ್ಯಕ್ರಮ ನಡೆಸುವ ಮುಂಚೆ ಪೂರ್ವಭಾವಿ ಸಭೆ ಕರೆಯಬೇಕೆಂದು ಜೆಡಿಎಸ್ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಸೊರಬ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ರತ್ನ, ನಮ್ಮ ಜೆಡಿಎಸ್ ಪಕ್ಷದ ಮಾಜಿ ಶಾಸಕ ಮಧು ಬಂಗಾರಪ್ಪರವರು ಶಾಸಕರಾಗಿದ್ದಾಗ ಸೊರಬ ತಾಪಂ ಸದಸ್ಯರೆಲ್ಲಾ ಸಭೆ ಸೇರಿ 4 ಲಕ್ಷ ರೂ.ವೆಚ್ಚದಲ್ಲಿ ದಿ.ಬಂಗಾರಪ್ಪನವರ ಪುತ್ಥಳಿ ನಿರ್ಮಿಸಲು ನಿರ್ಣಯ ತೆಗೆದುಕೊಂಡಿತ್ತು. ಹಂತಹಂತವಾಗಿ ಇದಕ್ಕೆ ಹಣ ಏರಿಸಲು ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿತ್ತು.
ಹಾಗಾಗಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿ, ದಿ.ಬಂಗಾರಪ್ಪನವರ ಪುತ್ಥಳಿ ನಿರ್ಮಾಣಕ್ಕೆ ನಡೆಯುವ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಬಂಗಾರಪ್ಪನವರ ಅಭಿಮಾನಿಗಳನ್ನ ಕರೆಯಿಸಿ ಸನ್ಮಾನ ಮಾಡಬೇಕಿತ್ತು. ಆ ಕೆಲಸ ಮಾಡದೆ ಇರುವುದು ಬೇಸರತಂದಿದೆ ಎಂದರು.
ಈ ಕುರಿತು ಮಾತನಾಡಿದ ಕುಮಾರ್ ಬಂಗಾರಪ್ಪ, ಈ ಹಿಂದೆ ಬಂಗಾರಪ್ಪನವರ ಪುತ್ಥಳಿ ನಿರ್ಮಾಣಕ್ಕೆ ಜಗಳವಾಗಿ ಅನಾವರಣಗೊಳ್ಳಬೇಕಿದ್ದ ಪುತ್ಥಳಿಯನ್ನ ತಹಶೀಲ್ದಾರ್ ಸೀಜ್ ಮಾಡಿ ತಾಲೂಕ್ ಪಂಚಾಯಿತಿಯಲ್ಲಿಡಲಾಯಿತು.
ಹಾಗಾಗಿ ಈ ಕುರಿತು ದಿ.ಬಂಗಾರಪ್ಪನವರ ಪುತ್ಥಳಿಯನ್ನ ಸ್ಮಾರಕವೆಂದು ಪರಿಗಣಿಸಿ ಸರ್ಕಾರದವತಿಯಿಂದ ದಿ.ಬಂಗಾರಪ್ಪನವರ ಪ್ರತಿಮೆ ಅನಾವರಣಗೊಳಿಸಿ ಎಂದು ಮನವಿ ಮಾಡಿಕೊಂಡಿದ್ವಿ. ಆದರೂ ಅದು ಕಾರಣಾಂತರದಿಂದ ಸಾಧ್ಯವಾಗಲಿಲ್ಲ.ಹಾಗಾಗಿ ಪಟ್ಟಣ ಪಂಚಾಯಿತಿ ಸದಸ್ಯರಿಗೆ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಇಂದು ಕಾರ್ಯಕ್ರಮ ನಡೆಸಲಾಗಿದೆ ಎಂದರು.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications