ಅಪಸ್ವರದ ನಡುವೆ ಬಂಗಾರಪ್ಪ ಮೂರ್ತಿ ಪ್ರತಿಷ್ಠಾಪನೆಗೆ ಶಂಕುಸ್ಥಾಪನೆ
ಶಿವಮೊಗ್ಗ, ಮಾರ್ಚ್ 04: ಸೊರಬ ಜನರ ಹಲವು ದಿನಗಳ ಕನಸಾಗಿರುವ ದಿ.ಬಂಗಾರಪ್ಪನವರ ಪುತ್ಥಳಿಗೆ ಶಂಕುಸ್ಥಾಪನೆಯನ್ನ ಶಾಸಕ ಕುಮಾರ ಬಂಗಾರಪ್ಪ ಇಂದು ಸೋಮವಾರ ನೆರವೇರಿಸಿದರು.
ಶಾಸಕ ಕುಮಾರ ಬಂಗಾರಪ್ಪನವರು, ತಂದೆ ದಿ.ಬಂಗಾರಪ್ಪನವರ ಪುತ್ಥಳಿಯನ್ನು ನಿರ್ಮಾಣ ಮಾಡಲು ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಪಟ್ಟಣ ಪಂಚಾಯಿತಿ ಸದಸ್ಯರು ಅಪಸ್ವರ ತೆಗೆದಿದ್ದಾರೆ.
ಸೊರಬ ಪಟ್ಟಣ ಪಂಚಾಯಿತಿಯಿಂದ ಖಾಸಗಿ ಬಸ್ ನಿಲ್ದಾಣದಲ್ಲಿ ಇಂದು ಕಾರ್ಯಕ್ರಮ ನಡೆದಿರುವ ಬಗ್ಗೆ ನಮಗೆ ಭಿನ್ನಾಭಿಪ್ರಾಯವಿಲ್ಲ. ಆದರೆ ದಿ.ಬಂಗಾರಪ್ಪನವರ ಅಭಿಮಾನಿಗಳು, ಅವರಿಗೆ ಬೆಂಬಲ ನೀಡಿದವರು ಅಪಾರ ಸಂಖ್ಯೆಯಲ್ಲಿದ್ದಾರೆ. ಈ ಕಾರ್ಯಕ್ರಮ ನಡೆಸುವ ಮುಂಚೆ ಪೂರ್ವಭಾವಿ ಸಭೆ ಕರೆಯಬೇಕೆಂದು ಜೆಡಿಎಸ್ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿದ ಸೊರಬ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ರತ್ನ, ನಮ್ಮ ಜೆಡಿಎಸ್ ಪಕ್ಷದ ಮಾಜಿ ಶಾಸಕ ಮಧು ಬಂಗಾರಪ್ಪರವರು ಶಾಸಕರಾಗಿದ್ದಾಗ ಸೊರಬ ತಾಪಂ ಸದಸ್ಯರೆಲ್ಲಾ ಸಭೆ ಸೇರಿ 4 ಲಕ್ಷ ರೂ.ವೆಚ್ಚದಲ್ಲಿ ದಿ.ಬಂಗಾರಪ್ಪನವರ ಪುತ್ಥಳಿ ನಿರ್ಮಿಸಲು ನಿರ್ಣಯ ತೆಗೆದುಕೊಂಡಿತ್ತು. ಹಂತಹಂತವಾಗಿ ಇದಕ್ಕೆ ಹಣ ಏರಿಸಲು ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿತ್ತು.
ಹಾಗಾಗಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿ, ದಿ.ಬಂಗಾರಪ್ಪನವರ ಪುತ್ಥಳಿ ನಿರ್ಮಾಣಕ್ಕೆ ನಡೆಯುವ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಬಂಗಾರಪ್ಪನವರ ಅಭಿಮಾನಿಗಳನ್ನ ಕರೆಯಿಸಿ ಸನ್ಮಾನ ಮಾಡಬೇಕಿತ್ತು. ಆ ಕೆಲಸ ಮಾಡದೆ ಇರುವುದು ಬೇಸರತಂದಿದೆ ಎಂದರು.
ಈ ಕುರಿತು ಮಾತನಾಡಿದ ಕುಮಾರ್ ಬಂಗಾರಪ್ಪ, ಈ ಹಿಂದೆ ಬಂಗಾರಪ್ಪನವರ ಪುತ್ಥಳಿ ನಿರ್ಮಾಣಕ್ಕೆ ಜಗಳವಾಗಿ ಅನಾವರಣಗೊಳ್ಳಬೇಕಿದ್ದ ಪುತ್ಥಳಿಯನ್ನ ತಹಶೀಲ್ದಾರ್ ಸೀಜ್ ಮಾಡಿ ತಾಲೂಕ್ ಪಂಚಾಯಿತಿಯಲ್ಲಿಡಲಾಯಿತು.
ಹಾಗಾಗಿ ಈ ಕುರಿತು ದಿ.ಬಂಗಾರಪ್ಪನವರ ಪುತ್ಥಳಿಯನ್ನ ಸ್ಮಾರಕವೆಂದು ಪರಿಗಣಿಸಿ ಸರ್ಕಾರದವತಿಯಿಂದ ದಿ.ಬಂಗಾರಪ್ಪನವರ ಪ್ರತಿಮೆ ಅನಾವರಣಗೊಳಿಸಿ ಎಂದು ಮನವಿ ಮಾಡಿಕೊಂಡಿದ್ವಿ. ಆದರೂ ಅದು ಕಾರಣಾಂತರದಿಂದ ಸಾಧ್ಯವಾಗಲಿಲ್ಲ.ಹಾಗಾಗಿ ಪಟ್ಟಣ ಪಂಚಾಯಿತಿ ಸದಸ್ಯರಿಗೆ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಇಂದು ಕಾರ್ಯಕ್ರಮ ನಡೆಸಲಾಗಿದೆ ಎಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications