ಯಡಿಯೂರಪ್ಪ ಹಸಿರು ಶಾಲು ಹಾಕಲು ಬಿಡೋಲ್ಲ : ಬೇಳೂರು
ಶಿವಮೊಗ್ಗ, ಡಿಸೆಂಬರ್ 03 : 'ಬಿ.ಎಸ್ ಯಡಿಯೂರಪ್ಪ ಅವರು ರೈತರ ಪ್ರತೀಕವಾಗಿರುವ ಹಸಿರು ಶಾಲು ಹಾಕಲು ನಾವು ಬಿಡುವುದಿಲ್ಲ' ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.
ಯಡಿಯೂರಪ್ಪ ಅವರು ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವುದನ್ನು ಸಾಗರ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ಮುಂದುವರೆಸಿದ್ದಾರೆ. ಶಿವಮೊಗ್ಗದಲ್ಲಿ ಸೋಮವಾರ ಮಾತನಾಡಿದ ಅವರು, 'ರೈತನಾಯಕ ಎಂದು ಹೇಳುವ ಯಡಿಯೂರಪ್ಪ ಅವರಿಗೆ ರೈತರ ಬಗ್ಗೆ ಮಾತನಾಡಲು ಯೋಗ್ಯತೆ ಇಲ್ಲ' ಎಂದರು.
'ಯಡಿಯೂರಪ್ಪ ಅವರಿಗೆ ಹಸಿರು ಶಾಲು ಹಾಕಿಕೊಳ್ಳಲು ಬಿಡಬಾರದು. ಸುಳ್ಳು ಹೇಳುವುದರಲ್ಲಿ ಅಪ್ಪ-ಮಕ್ಕಳು ಸದಾ ಮುಂದು. ತಾಕತ್ ಇದ್ದರೆ ನನ್ನ ಮುಂದೆ ಯಡಿಯೂರಪ್ಪ ಬರಲಿ, ಅವರ ಬಂಡವಾಳ ನನ್ನ ಬಳಿ ಇದೆ. ನನ್ನ ಮುಂದೆಯೇ ಐನೂರಕ್ಕೂ ಹೆಚ್ಚು ಜನರಿಗೆ ಎಂಎಲ್ಸಿ ಮಾಡುತ್ತೇವೆ ಎಂದು ಸುಳ್ಳು ಹೇಳಿದ್ದಾರೆ' ಎಂದು ವಾಗ್ದಾಳಿ ನಡೆಸಿದರು.

'ಯಡಿಯೂರಪ್ಪ ಪ್ರತಿ ಅಮಾವಾಸ್ಯೆಗೆ ಕೇರಳಕ್ಕೆ ಹೋಗುತ್ತಾರೆ. ಅವರು ಚಿಕಿತ್ಸೆಗಾಗಿ ಹೋಗುವುದಿಲ್ಲ. ಅವರು ಸರ್ಕಾರವನ್ನು ಬೀಳಿಸಲು ಮಾಟ ಮಂತ್ರ ಮಾಡಿಸಲು ಹೋಗುತ್ತಾರೆ. ಶೋಭಾ ಕರಂದ್ಲಾಜೆ ಜೊತೆಗೆ ಯಡಿಯೂರಪ್ಪ ಹಲವಾರು ಬಾರಿ ಕೇರಳಕ್ಕೆ ಹೋಗಿದ್ದಾರೆ' ಎಂದು ಆರೋಪಿಸಿದರು.
ಹುಚ್ಚು ಹಿಡಿದಿದೆ : 'ಹನುಮ ದೇವರು ದಲಿತ ಸಮುದಾಯಕ್ಕೆ ಸೇರಿದವರು' ಎಂಬ ಯೋಗಿ ಆದಿತ್ಯನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬೇಳೂರು ಗೋಪಾಲಕೃಷ್ಣ ಅವರು, 'ಉತ್ತರ ಪ್ರದೇಶದ ಸಿಎಂ ಯೋಗಿ ಅದಿತ್ಯನಾಥ್ ಅವರಿಗೆ ಹುಚ್ಚು ಹಿಡಿದಿದೆ. ಆಂಜನೇಯ ದಲಿತರ ದೇವರು ಎಂದು ಹೇಳುತ್ತಾರೆ. ಅಧಿಕಾರದಲ್ಲಿ ಇದ್ದರೆ ಏನು ಬೇಕಾದರೂ ಹೇಳಿಕೆ ನೀಡಬಹುದಾ?' ಎಂದು ಪ್ರಶ್ನಿಸಿದರು.
-
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
Gold Rate April 8: ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ












Click it and Unblock the Notifications