Get Updates
Get notified of breaking news, exclusive insights, and must-see stories!

ಗೀತಾ ಗೆಲುವು; ಟ್ರಾಕ್ಟರ್ ಪಣಕ್ಕಿಟ್ಟ ವಿಜಯೇಂದ್ರ ತವರು ಕ್ಷೇತ್ರದ ರೈತ!

ಶಿವಮೊಗ್ಗ, ಮೇ 14: ಈ ಬಾರಿಯ ಕರ್ನಾಟಕ ಲೋಕಸಭೆ ಚುನಾವಣೆಯಲ್ಲಿ ಕುತೂಹಲ ಮೂಡಿಸಿರುವ ಕ್ಷೇತ್ರಗಳಲ್ಲಿ ಶಿವಮೊಗ್ಗ ಸಹ ಒಂದು. ಮೇ 7ರಂದು ಮತದಾನ ಮುಕ್ತಾಯಗೊಂಡು ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಶೇ 76.05ರಷ್ಟು ಮತದಾನವಾಗಿದ್ದು, ಫಲಿತಾಂಶದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಶಿವಮೊಗ್ಗದಲ್ಲಿ ಹಾಲಿ ಸಂಸದ ಬಿ. ವೈ. ರಾಘವೇಂದ್ರ ಬಿಜೆಪಿ ಅಭ್ಯರ್ಥಿ. ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್‌ನಿಂದ ಕಣದಲ್ಲಿದ್ದಾರೆ. ಪುತ್ರನಿಗೆ ಹಾವೇರಿ ಟಿಕೆಟ್ ಕೈ ತಪ್ಪಿದ ಬಳಿಕ ಅಸಮಾಧಾನಗೊಂಡ ಕೆ. ಎಸ್. ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗದಲ್ಲಿ ಕಣಕ್ಕಿಳಿದರು.

Betting On Shivamogga Election Result Congress Geetha Shivakumar

ಲೋಕಸಭೆ ಚುನಾವಣೆ ಮತ ಎಣಿಕೆ ಜೂನ್ 4ರಂದು ನಡೆಯಲಿದೆ. ಆದರೆ ಈಗಲೇ ಶಿವಮೊಗ್ಗದಲ್ಲಿ ಯಾರಿಗೆ ಗೆಲುವು? ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ. ಬೆಟ್ಟಿಂಗ್ ಸಹ ನಡೆಯುತ್ತಿದ್ದು, ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಪರಸ್ಪರ ಸವಾಲು ಹಾಕಿ ನಿಂತಿದ್ದಾರೆ.

ಗೀತಾ ಶಿವರಾಜ್‌ ಕುಮಾರ್ ಗೆಲುವು?; ಮೂರು ಬಾರಿ ಗೆಲುವು ಕಂಡಿರುವ ಬಿ. ವೈ. ರಾಘವೇಂದ್ರ ಈ ಬಾರಿಯೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವ ಉತ್ಸಾಹದಲ್ಲಿದ್ದಾರೆ. ಬಿಜೆಪಿ ಕಾರ್ಯಕರ್ತರು ಸಹ ಈ ಬಾರಿ ಗೆಲುವು ನಮ್ಮದು ಎಂದು ಹೇಳುತ್ತಿದ್ದಾರೆ.

ಕಾಂಗ್ರೆಸ್ ಶಿವಮೊಗ್ಗ ಕ್ಷೇತ್ರ ಕೈವಶವಾಗಲಿದೆ ಎಂದು ಭರವಸೆ ಹೊಂದಿದ್ದಾರೆ. ಗೀತಾ ಶಿವರಾಜ್‌ಕುಮಾರ್ ಮೊದಲ ಬಾರಿಗೆ ಸಂಸದರಾಗಲಿದ್ದಾರೆ ಎಂದು ಹೇಳುತ್ತಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತವರು ಕ್ಷೇತ್ರ ಶಿಕಾರಿಪುರದ ರೈತರೊಬ್ಬರು ಗೀತಾ ಗೆಲುವು ಖಚಿತ ಎಂದು ಹೇಳಿದ್ದು, ಟ್ರಾಕ್ಟರ್ ಪಣಕ್ಕಿಟ್ಟಿದ್ದಾರೆ.

ಶಿಕಾರಿಪುರದ ರವೀಂದ್ರ ಎಂಬ ರೈತ ಗೀತಾ ಶಿವರಾಜ್ ಕುಮಾರ್ ಹೆಚ್ಚು ಅಂತರದಿಂದ ಗೆಲ್ಲುತ್ತಾರೆ. ಟ್ರಾಕ್ಟರ್ ಪಣಕ್ಕೆ ಇಟ್ಟಿದ್ದೇನೆ ಎಂದು ಬಿಜೆಪಿ ಕಾರ್ಯಕರ್ತರರಿಗೆ ಸವಾಲು ಹಾಕಿದ್ದಾರೆ. ಯಾರು ಗೆಲ್ಲುತ್ತಾರೆ? ಎಂದು ತಿಳಿಯಲು ಜೂನ್ 4ರ ತನಕ ಕಾಯಬೇಕಾಗಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಬಿ. ವೈ. ರಾಘವೇಂದ್ರ 7,29,872 ಮತಗಳನ್ನು ಪಡೆದು ಸುಮಾರು ಎರಡೂವರೆ ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಅದಕ್ಕಿಂತ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಬಿಜೆಪಿ ಕಾರ್ಯಕರ್ತರು ವಿಶ್ವಾಸದಲ್ಲಿದ್ದಾರೆ.

ಆದರೆ ಕಾಂಗ್ರೆಸ್‌ನ 5 ಗ್ಯಾರಂಟಿ ಯೋಜನೆಗಳು, ಸಚಿವ ಮಧು ಬಂಗಾರಪ್ಪ ಪ್ರಭಾವ, ಎಸ್. ಬಂಗಾರಪ್ಪ ಕುಟುಂಬದ ವರ್ಚಸ್ಸು, ಅಬ್ಬರದ ಪ್ರಚಾರ, ಕೆ. ಎಸ್. ಈಶ್ವರಪ್ಪ ಸ್ಪರ್ಧೆಯಿಂದಾಗಿ ಗೀತಾ ಶಿವರಾಜ್ ಕುಮಾರ್‌ ಗೆಲುವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಹೇಳುತ್ತಿದ್ದಾರೆ.

ಈ ಬಾರಿಯ ಶಿವಮೊಗ್ಗದ ಚುನಾವಣೆ ಎಸ್. ಬಂಗಾರಪ್ಪ, ಬಿ. ಎಸ್. ಯಡಿಯೂರಪ್ಪ ಕುಟುಂಬದ ನಡುವಿನ ಪ್ರತಿಷ್ಠೆಯಾಗಿತ್ತು. ಆದರೆ ಹಾವೇರಿಯಲ್ಲಿ ಪುತ್ರ ಕೆ. ಇ. ಕಾಂತೇಶ್‌ಗೆ ಬಿಜೆಪಿ ಟಿಕೆಟ್ ಕೈ ತಪ್ಪಿತು ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರು.

ಅಮಿತ್‌ ಶಾ ಸೇರಿದಂತೆ ಯಾವ ನಾಯಕರ ಮನವೊಲಿಕೆಗೂ ಬಗ್ಗದೇ ನಾಮಪತ್ರ ವಾಪಸ್ ಪಡೆಯದೇ ಚುನಾವಣಾ ಕಣದಲ್ಲಿ ಉಳಿದರು. ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆಗೊಂಡರು. ಕೆ. ಎಸ್. ಈಶ್ವರಪ್ಪ ಬಿ. ವೈ. ರಾಘವೇಂದ್ರ, ಗೀತಾ ಶಿವರಾಜ್‌ ಕುಮಾರ್ ಇವರಲ್ಲಿ ಯಾರ ಮತಗಳನ್ನು ಸೆಳೆಯಲಿದ್ದಾರೆ? ಎಂಬುದು ಚುನಾವಣಾ ಫಲಿತಾಂಶದ ಚಿತ್ರಣವನ್ನು ತೀರ್ಮಾನಿಸಲಿದೆ.

ಶಿವಮೊಗ್ಗದ ಈ ಬಾರಿಯ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ, ಸೊರಬದ ಶಾಸಕ, ಸಚಿವ ಮಧು ಬಂಗಾರಪ್ಪ ಪ್ರತಿಷ್ಠೆ ಅಡಗಿದೆ. ಶಿವಮೊಗ್ಗದಲ್ಲಿ ಗೆಲುವು ಯಾರಿಗೆ? ಎಂದು ತಿಳಿಯಲು ಜೂನ್ 4ರ ತನಕ ಕಾಯಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+