ಗೀತಾ ಗೆಲುವು; ಟ್ರಾಕ್ಟರ್ ಪಣಕ್ಕಿಟ್ಟ ವಿಜಯೇಂದ್ರ ತವರು ಕ್ಷೇತ್ರದ ರೈತ!
ಶಿವಮೊಗ್ಗ, ಮೇ 14: ಈ ಬಾರಿಯ ಕರ್ನಾಟಕ ಲೋಕಸಭೆ ಚುನಾವಣೆಯಲ್ಲಿ ಕುತೂಹಲ ಮೂಡಿಸಿರುವ ಕ್ಷೇತ್ರಗಳಲ್ಲಿ ಶಿವಮೊಗ್ಗ ಸಹ ಒಂದು. ಮೇ 7ರಂದು ಮತದಾನ ಮುಕ್ತಾಯಗೊಂಡು ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಶೇ 76.05ರಷ್ಟು ಮತದಾನವಾಗಿದ್ದು, ಫಲಿತಾಂಶದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಶಿವಮೊಗ್ಗದಲ್ಲಿ ಹಾಲಿ ಸಂಸದ ಬಿ. ವೈ. ರಾಘವೇಂದ್ರ ಬಿಜೆಪಿ ಅಭ್ಯರ್ಥಿ. ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ನಿಂದ ಕಣದಲ್ಲಿದ್ದಾರೆ. ಪುತ್ರನಿಗೆ ಹಾವೇರಿ ಟಿಕೆಟ್ ಕೈ ತಪ್ಪಿದ ಬಳಿಕ ಅಸಮಾಧಾನಗೊಂಡ ಕೆ. ಎಸ್. ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗದಲ್ಲಿ ಕಣಕ್ಕಿಳಿದರು.

ಲೋಕಸಭೆ ಚುನಾವಣೆ ಮತ ಎಣಿಕೆ ಜೂನ್ 4ರಂದು ನಡೆಯಲಿದೆ. ಆದರೆ ಈಗಲೇ ಶಿವಮೊಗ್ಗದಲ್ಲಿ ಯಾರಿಗೆ ಗೆಲುವು? ಎಂಬ ಲೆಕ್ಕಾಚಾರಗಳು ನಡೆಯುತ್ತಿವೆ. ಬೆಟ್ಟಿಂಗ್ ಸಹ ನಡೆಯುತ್ತಿದ್ದು, ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಪರಸ್ಪರ ಸವಾಲು ಹಾಕಿ ನಿಂತಿದ್ದಾರೆ.
ಗೀತಾ ಶಿವರಾಜ್ ಕುಮಾರ್ ಗೆಲುವು?; ಮೂರು ಬಾರಿ ಗೆಲುವು ಕಂಡಿರುವ ಬಿ. ವೈ. ರಾಘವೇಂದ್ರ ಈ ಬಾರಿಯೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವ ಉತ್ಸಾಹದಲ್ಲಿದ್ದಾರೆ. ಬಿಜೆಪಿ ಕಾರ್ಯಕರ್ತರು ಸಹ ಈ ಬಾರಿ ಗೆಲುವು ನಮ್ಮದು ಎಂದು ಹೇಳುತ್ತಿದ್ದಾರೆ.
ಕಾಂಗ್ರೆಸ್ ಶಿವಮೊಗ್ಗ ಕ್ಷೇತ್ರ ಕೈವಶವಾಗಲಿದೆ ಎಂದು ಭರವಸೆ ಹೊಂದಿದ್ದಾರೆ. ಗೀತಾ ಶಿವರಾಜ್ಕುಮಾರ್ ಮೊದಲ ಬಾರಿಗೆ ಸಂಸದರಾಗಲಿದ್ದಾರೆ ಎಂದು ಹೇಳುತ್ತಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತವರು ಕ್ಷೇತ್ರ ಶಿಕಾರಿಪುರದ ರೈತರೊಬ್ಬರು ಗೀತಾ ಗೆಲುವು ಖಚಿತ ಎಂದು ಹೇಳಿದ್ದು, ಟ್ರಾಕ್ಟರ್ ಪಣಕ್ಕಿಟ್ಟಿದ್ದಾರೆ.
ಶಿಕಾರಿಪುರದ ರವೀಂದ್ರ ಎಂಬ ರೈತ ಗೀತಾ ಶಿವರಾಜ್ ಕುಮಾರ್ ಹೆಚ್ಚು ಅಂತರದಿಂದ ಗೆಲ್ಲುತ್ತಾರೆ. ಟ್ರಾಕ್ಟರ್ ಪಣಕ್ಕೆ ಇಟ್ಟಿದ್ದೇನೆ ಎಂದು ಬಿಜೆಪಿ ಕಾರ್ಯಕರ್ತರರಿಗೆ ಸವಾಲು ಹಾಕಿದ್ದಾರೆ. ಯಾರು ಗೆಲ್ಲುತ್ತಾರೆ? ಎಂದು ತಿಳಿಯಲು ಜೂನ್ 4ರ ತನಕ ಕಾಯಬೇಕಾಗಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಬಿ. ವೈ. ರಾಘವೇಂದ್ರ 7,29,872 ಮತಗಳನ್ನು ಪಡೆದು ಸುಮಾರು ಎರಡೂವರೆ ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಅದಕ್ಕಿಂತ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಬಿಜೆಪಿ ಕಾರ್ಯಕರ್ತರು ವಿಶ್ವಾಸದಲ್ಲಿದ್ದಾರೆ.
ಆದರೆ ಕಾಂಗ್ರೆಸ್ನ 5 ಗ್ಯಾರಂಟಿ ಯೋಜನೆಗಳು, ಸಚಿವ ಮಧು ಬಂಗಾರಪ್ಪ ಪ್ರಭಾವ, ಎಸ್. ಬಂಗಾರಪ್ಪ ಕುಟುಂಬದ ವರ್ಚಸ್ಸು, ಅಬ್ಬರದ ಪ್ರಚಾರ, ಕೆ. ಎಸ್. ಈಶ್ವರಪ್ಪ ಸ್ಪರ್ಧೆಯಿಂದಾಗಿ ಗೀತಾ ಶಿವರಾಜ್ ಕುಮಾರ್ ಗೆಲುವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಹೇಳುತ್ತಿದ್ದಾರೆ.
ಈ ಬಾರಿಯ ಶಿವಮೊಗ್ಗದ ಚುನಾವಣೆ ಎಸ್. ಬಂಗಾರಪ್ಪ, ಬಿ. ಎಸ್. ಯಡಿಯೂರಪ್ಪ ಕುಟುಂಬದ ನಡುವಿನ ಪ್ರತಿಷ್ಠೆಯಾಗಿತ್ತು. ಆದರೆ ಹಾವೇರಿಯಲ್ಲಿ ಪುತ್ರ ಕೆ. ಇ. ಕಾಂತೇಶ್ಗೆ ಬಿಜೆಪಿ ಟಿಕೆಟ್ ಕೈ ತಪ್ಪಿತು ಎಂದು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದರು.
ಅಮಿತ್ ಶಾ ಸೇರಿದಂತೆ ಯಾವ ನಾಯಕರ ಮನವೊಲಿಕೆಗೂ ಬಗ್ಗದೇ ನಾಮಪತ್ರ ವಾಪಸ್ ಪಡೆಯದೇ ಚುನಾವಣಾ ಕಣದಲ್ಲಿ ಉಳಿದರು. ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆಗೊಂಡರು. ಕೆ. ಎಸ್. ಈಶ್ವರಪ್ಪ ಬಿ. ವೈ. ರಾಘವೇಂದ್ರ, ಗೀತಾ ಶಿವರಾಜ್ ಕುಮಾರ್ ಇವರಲ್ಲಿ ಯಾರ ಮತಗಳನ್ನು ಸೆಳೆಯಲಿದ್ದಾರೆ? ಎಂಬುದು ಚುನಾವಣಾ ಫಲಿತಾಂಶದ ಚಿತ್ರಣವನ್ನು ತೀರ್ಮಾನಿಸಲಿದೆ.
ಶಿವಮೊಗ್ಗದ ಈ ಬಾರಿಯ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ, ಸೊರಬದ ಶಾಸಕ, ಸಚಿವ ಮಧು ಬಂಗಾರಪ್ಪ ಪ್ರತಿಷ್ಠೆ ಅಡಗಿದೆ. ಶಿವಮೊಗ್ಗದಲ್ಲಿ ಗೆಲುವು ಯಾರಿಗೆ? ಎಂದು ತಿಳಿಯಲು ಜೂನ್ 4ರ ತನಕ ಕಾಯಬೇಕಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications