Bhadra Dam: ಭದ್ರಾ ಜಲಾಶಯದ ಹೊಸ ಇತಿಹಾಸ-ಏನದು? ಮಾಹಿತಿ
Bhadra Dam: ಕಳೆದ ವರ್ಷ ಮುಂಗಾರು ಕೈಕೊಟ್ಟ ಪರಿಣಾಮ ಜಲಾಶಯಗಳಲ್ಲಿ ಆಗಿನಿಂದಲೂ ನೀರಿನ ಪ್ರಮಾಣ ಕಡಿಮೆಯಾಗುತ್ತಲೇ ಬರುತ್ತಿದೆ. ಇನ್ನು ಕೆಲವೆಡೆ ನೀರೇ ಇಲ್ಲದಂತಹ ಪರಿಸ್ಥಿತಿಯೂ ನಿರ್ಮಾಣವಾಗಿದೆ. ಹಾಗೆಯೇ ಅತ್ಯಂತ ಕಡಿಮೆ ಪ್ರಮಾಣದ ನೀರಿನ ಸಂಗ್ರಹದಲ್ಲಿ ಈ ಬಾರಿ ಮಲೆನಾಡಿನ ಜೀವಸೆಲೆಯಾದ ಭದ್ರಾ ಜಲಾಶಯ ಹೊಸ ದಾಖಲೆ ಬರೆದಿದೆ. ಹಾಗಾದರೆ ಮಾಹಿತಿ ಇಲ್ಲಿದೆ ಗಮನಿಸಿ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಆಗಾಗ ಮಳೆಯಾಗುತ್ತಿದೆ ಬಿಟ್ಟರೆ, ಬಹುತೇಕ ಜಿಲ್ಲೆಗಳಲ್ಲಿ ರಣಭೀಕರ ಬಿಸಿಲಿನ ವಾತಾವರಣ ಮುಂದುವರೆದಿದೆ. ಪರಿಣಾಮ ನೀರಿನ ಮೂಲಗಳೆಲ್ಲ ಬತ್ತಿಹೋಗುತ್ತಿದ್ದು, ನೀರಿನ ಹಾಹಾಕಾರ ಶುರುವಾಗಿದೆ. ಮತ್ತೊಂದೆಡೆ ಜನರು ಬಿಸಿಲಿನ ಬೇಗೆ ಬೆಂಡಾಗಿ ಹೋಗಿದ್ದರೆ, ಬೇಸತ್ತ ಅನ್ನದಾತ ಮೋಡದ ಕಡೆ ಮುಖ ಮಾಡಿ ಕುಳಿತ್ತಿದ್ದಾನೆ.

ರಾಜ್ಯದಲ್ಲಿ ಕಳೆದ ವರ್ಷ ಮುಗಾರು ಮಳೆ ಕೈಕೊಟ್ಟಿದ್ದರಿಂದ ಈ ಬಾರಿ ತೀವ್ರ ಬರ ಕಾಡುತ್ತಿದೆ. ಅದರಲ್ಲೂ ದಾವಣಗೆರೆ ಜಿಲ್ಲೆ ರೈತರ ಜೀವನಾಡಿಯಾದ ಭದ್ರಾ ಜಲಾಶಯದ ಸುತ್ತಮುತ್ತಲಿನ ಮಲೆನಾಡಿನಲ್ಲಿಯೇ ಕಳೆದ ಬಾರೀ ನಿರೀಕ್ಷಿತ ಮಳೆಯಾಗಿಲ್ಲ. ಈ ಹಿನ್ನೆಲೆ ಮುಂಗಾರಿನಲ್ಲಿ ಜಲಾಶಯಕ್ಕೆ ನೀರು ಬಂದಿದ್ದೇ ಕಡಿಮೆ.
ಭದ್ರಾ ಜಲಾಶಯದಿಂದ ಬೇಸಿಗೆ ಬೆಳೆಗೆ ನೀರು ಹರಿಸುವುದಕ್ಕೆ ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಷ್ಟೇ ಅಲ್ಲದೆ, ಮುಂಗಾರು ಬೆಳೆಗೆಯೇ ಹೋರಾಟ ಮಾಡಿ ನೀರು ತಂದಿದ್ದರು. ಆದರೆ ಇದೀಗ ಈ ಬಾರಿ ಶಿವಮೊಗ್ಗ ಜಿಲ್ಲೆಯ ಭದ್ರಾ ಜಲಾಶಯದಲ್ಲಿ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಅತ್ಯಂತ ಕಡಿಮೆ ನೀರು ಸಂಗ್ರಹ ಆಗಿದೆ ಎಂದು ತಿಳಿದುಬಂದಿದೆ
ಕಳೆದ ವರ್ಷ 2023 ಇದೇ ದಿನ 145.7 ಅಡಿ ನೀರು ಸಂಗ್ರಹವಾಗಿತ್ತು. ತೀವ್ರ ಬರಗಾಲವಿದ್ದ 2004ಕ್ಕಿಂತ ಮುನ್ನ 2003ರಲ್ಲಿ 118 ಅಡಿ ನೀರಿನ ಸಂಗ್ರಹವಿದ್ದು, ಈವರೆಗಿನ ಕನಿಷ್ಠ ನೀರು ಸಂಹ್ರಹ ಆಗಿತ್ತು. ಇದೀಗ 2024 ಮೇ 5ರಂದು 116.5 ಅಡಿ ನೀರು ಇದ್ದು, ಇದು ಅತ್ಯಂತ ಕಡಿಮೆ ನೀರು ಸಂಗ್ರಹವಾಗಿದೆ. ಅಲ್ಲದೆ ಈ ಬಾರಿ ಇತಿಹಾಸದಲ್ಲಿಯೇ ಅತ್ಯಂತ ಕಡಿಮೆ ನೀರಿನ ಸಂಗ್ರಹ ಇದ್ದು, ಇದು ಹೊಸ ದಾಖಲೆಯಾಗಿದ ಎಂದರೆ ತಪ್ಪಾಗಲಾರದು.
ಈ ಜಲಾಶಯದಲ್ಲಿ ಸದ್ಯ ಇದೀಗ 8.5 ಟಿಎಂಸಿ ಅಡಿ ಡೆಡ್ಸ್ಟೋರೇಜ್ ಸೇರಿ, ಒಟ್ಟು 13.8 ಟಿಎಂಸಿ ಅಡಿ ನೀರಿನ ಸಂಗ್ರಹ ಇದೆ. ಜಲಾಶಯದ ಬಲದಂಡೆ ನಾಲೆಯ ಗೇಟ್ ಸಂಪೂರ್ಣ ತೆರೆಯಲಾಗಿದೆ. ಕಳೆದ ಮೂರು ದಿನಗಳಿಂದ 2,000 ಕ್ಯೂಸೆಕ್ನಷ್ಟು ಮಾತ್ರ ಹರಿಯುತ್ತಿದೆ. ಇದೇ ಇನ್ನು ಎರಡ್ಮೂರು ದಿನ ನೀರು ಹರಿಸಿ ನಿಲ್ಲಿಸಲಾಗುವುದು ಎಂದು ಭದ್ರಾ ಜಲಾಶಯದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದದಾರೆ ಅಂತಾ ಮಾಹಿತಿ ಲಭ್ಯವಾಗಿದೆ.
ಇದೀಗ ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮತ್ತೊಂದೆಡೆ ಕೆಲವೆಡೆ ಮಳೆ ಆಗಾಗ ಮಾತ್ರ ಎಂಟ್ರಿ ಕೊಟ್ಟು ಭೂಮಿಯನ್ನು ತಣ್ಣಗೆ ಮಾಡುತ್ತದೆ. ಆದರೆ ಮಾರನೇ ದಿನ ಅದೇ ಆಡಿದ್ದೇ ಆಟ ಎಂಬಂತೆ ಭೀಕರ ಬಿಸಿಲಿನ ವಾತಾವರಣ ಮುಂದುವರೆಯುತ್ತಿದೆ. ಹೀಗೆ ಆದರೆ, ಜನರು, ರೈತರ ಗತಿಯೇನು ಎನ್ನುವಂತಹ ಪ್ರಶ್ನೆಗಳು ಉದ್ಭವವಾಗಿವೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications