Bhadra Dam Leakage: ಮಳೆಗಾಲದಲ್ಲೇ ಡ್ಯಾಂನ ಸಾವಿರಾರು ಕ್ಯೂಸೆಕ್ ನೀರು ವ್ಯರ್ಥ, ಭಾರೀ ಆಕ್ರೋಶ
ಶಿವಮೊಗ್ಗ, ಜುಲೈ 05: ಕರ್ನಾಟಕದಲ್ಲಿ ಮಲೆನಾಡು ಇನ್ನಿತರ ಕಡೆ ಭಾರೀ ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗುತ್ತವೆ. ಮುಂದಿನ ಬೇಸಿಗೆವರೆಗೂ ನೀರು ಬೇಕಿರುವ ಕಾರಣ ಮಳೆ ನೀರನ್ನು ಸಂಗ್ರಹಿಟ್ಟುಕೊಳ್ಳಲಾಗುತ್ತಿದೆ. ಆದರೆ ಶಿವಮೊಗ್ಗ ಜಿಲ್ಲೆಯ ಈ ಭದ್ರಾ ಆಣೆಕಟ್ಟಿನ ನೀರು ಪೋಲಾಗುತ್ತಿದೆ.
ಹೌದು, ಸರ್ಕಾರಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಭದ್ರಾ ಜಲಾಶಯದಿಂದ ಸಾವಿರಾರು ಕ್ಯೂಸೆಕ್ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ಇದಕ್ಕೆ ಜಿಲ್ಲೆಯ ರೈತರು, ಜಲಾಯನಯನ ಪ್ರದೇಶಗಳ ನಿವಾಸಿಗಳು ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭದ್ರಾ ಜಲಾಶಯದ ಸ್ಲೂಯಿಸ್ (ರಿವರ್) ಗೇಟ್ ನಿಂದ ಸಾವಿರಾರು ಕ್ಯೂಸೆಕ್ ನೀರು ಪೋಲಾಗುತ್ತಿರುವ ಪೋಟೋ-ವಿಡಿಯೋಗಳು ಹರಿದಾಡುತ್ತಿವೆ. ಮಳೆಗಾಲದಲ್ಲೂ ಸಹ ಅನಗತ್ಯವಾಗಿ ನದಿಗೆ ಈ ಆಣೆಕಟ್ಟಿನ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ.
ಬೇಸಿಗೆಯಲ್ಲಿ ಪರದಾಡುವ ಸ್ಥಿತಿ?
ಇದು ಹೀಗೆ ಮುಂದುವರಿದರೆ, ಮಳೆ ಸರಿಯಾಗಿ ಭಾರದಿದ್ದ ಕೆಲವೇ ವಾರಗಳಲ್ಲಿ ಡ್ಯಾಂ ನೀರಿನ ಮಟ್ಟ ಇಳಿಕೆಯಾಗುತ್ತದೆ. ಮುಂದೆ ಬೇಸಿಗೆಯಲ್ಲಿ ಮಲೆನಾಡಿನ ಜನರು ಪರದಾಡಬೇಕಾಗುತ್ತದೆ. ಆದ್ದರಿಂದ ಸ್ಲೂಯಿಸ್ (ರಿವರ್) ಗೇಟ್ ಅನ್ನು ಸರಿಯಾಗಿ ದುರಸ್ತಿ ಮಾಡಬೇಕು. ಇದನ್ನು ಅಧಿಕಾರಿಗಳು ನಿರ್ಲಕ್ಷಿಸಿದ್ದಕ್ಕೆ ಹೀಗೆ ನೀರು ಪೋಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ.
ಒಂದು ವಾರದಿಂದ ನೀರು ಪೋಲು: ರೈತರಲ್ಲಿ ಆತಂಕ
ಡ್ಯಾಂನ ಒಂದು ಗೇಟ್ನಿಂದ ಪೋಲಾಗುತ್ತಿರುವ ಭಾರಿ ಪ್ರಮಾಣದ ನೀರನ್ನು ಕಂಡು ರೈತರು ಆತಂಕಗೊಂಡಿದ್ದಾರೆ. ಕಳೆದ ಒಂದು ವಾರದಿಂದ ನಿರಂತರವಾಗಿ ಸಾವಿರಾರು ಕ್ಯೂಸೆಕ್ ನೀರು ನದಿಗೆ ಹರಿದು ಹೋಗುತ್ತಿದೆ. ಸೂಕ್ತ ಗೇಟನ್ನು ಕೂರಿಸಲಾಗದೆ ಒದ್ದಾಡುತ್ತಿರುವ ಡ್ಯಾಂ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಒದ್ದಾಡುತ್ತಿದ್ದಾರೆ. ಲಕ್ಷಾಂತರ ರೂ. ಗೇಟ್ ಅನ್ನು ದುರಸ್ತಿ ಮಾಡಲು ಮುಂದಾಗಿಲ್ಲ ಎಂಬ ದೂರು ಕೇಳಿ ಬಂದಿವೆ.

ತೀರ್ಥಹಳ್ಳಿ ಮೂಲದ ಜಿಪಿಎಸ್ ಕನ್ಸ್ಟ್ರಕ್ಷನ್ ಕಂಪನಿ ಡ್ಯಾಂನ ಗೇಟ್ ಅನ್ನು ಕೂರಿಸುವ ಕಾರ್ಯದ ಗುತ್ತಿಗೆ ಪಡೆದಿದೆ. ತಾಂತ್ರಿಕ ಅನುಭವ ಇಲ್ಲದೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗೇಟ್ ಅನ್ನು ಕೂರಿಸಿರುವುದೇ ಇದಕ್ಕೆಲ್ಲ ಕಾರಣ ಎಂದು ತಿಳಿದು ಬಂದಿದೆ.
ಬೇಸಿಗೆಯಲ್ಲಿ ಡ್ಯಾಂ ಗೇಟ್ ದುರಸ್ತಿ ಮಾಡದೇ ನಿರ್ಲಕ್ಷ್ಯ
ಸಾಮಾನ್ಯವಾಗಿ ಜಲಾಶಯಗಳ ದುರಸ್ತಿ ಕೆಲಸವನ್ನು ಬೇಸಿಗೆ ಕಾಲದಲ್ಲಿ ನೀರಿಲ್ಲದ ಸಂದರ್ಭದಲ್ಲಿ ಮಾಡುತ್ತಾರೆ. ಆದರೆ ಈ ಅಧಿಕಾರಿಗಳು ಬೇಸಿಗೆ ವೇಳೆ ಸುಮ್ಮನಿದ್ದಾರೆ. ನಿರ್ಲಕ್ಷ್ಯ ವಹಿಸಿದ್ದಾರೆ. ಹೀಗಾಗಿ ಈಗ ನೀರು ಪೋಲಾಗುವಾಗ ಅಧಿಕಾರಿಗಳು ಓಡಾಡುತ್ತಿದ್ದಾರೆ. ಇದು ಅಧಿಕಾರಿಗಳು ಆಡಳಿತ ವೈಫಲ್ಯ ಎಂದು ತಿಳಿದು ಬಂದಿದೆ.
ಈ ಭಾಗದಲ್ಲಿ ಭದ್ರಾ ಡ್ಯಾಂನಲ್ಲಿ ಸಂಗ್ರಹಿಸಿಟ್ಟ ನೀರಿಟ್ಟ ಬೇಸಿಗೆಯಲ್ಲಿ ಕುಡಿಯುವ ಉದ್ದೇಶಕ್ಕೆ ಬಳಕೆಯಾಗಬೇಕಿದ್ದ ನೀರು ಮಳೆಗಾದಲ್ಲೇ ಸ್ಲೋಯಿಸ್ ಗೇಟ್ ಮೂಲಕ ಹರಿದು ಹೋಗುತ್ತಿದೆ. ತುರ್ತು ಸಂದರ್ದಲ್ಲಿ ತೆರೆಯಬೇಕಾಗಿದ್ದ ಗೇಟ್ ಅನ್ನು ಈಗಲೇ ಅಧಿಕಾರಿಗಳು ತೆರೆದಿದ್ದಾರೆ ಎನ್ನಲಾಗಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications