ಕನ್ನಡ ವಿಶ್ವವಿದ್ಯಾಲಯದ ಉಪ ಕುಲಪತಿ ಮಲ್ಲಿಕಾ ಘಂಟಿ ವಿರುದ್ಧ ವಾರೆಂಟ್
ಭದ್ರಾವತಿ, ಅಕ್ಟೋಬರ್ 09 : ತಮ್ಮ ಹತ್ಯೆಗೆ ಕುವೆಂಪು ವಿವಿ ಸಿಬ್ಬಂದಿ ಸಂಚು ರೂಪಿಸಿದ್ದಾರೆಂದು ದೂರು ನೀಡಿ ವಿಚಾರಣೆಗೆ ಗೈರುಹಾಜರಾದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಮಲ್ಲಿಕಾ ಘಂಟಿ ವಿರುದ್ಧ ಭದ್ರಾವತಿ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಜಾಮೀನು ಸಹಿತ ವಾರೆಂಟ್ ಜಾರಿ ಮಾಡಿದೆ.
ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದಾಗ ಕೆಲವು ಸಿಬ್ಬಂದಿ ತಮ್ಮ ಕೊಲೆಗೆ ಸಂಚು ರೂಪಿಸುತ್ತಿದ್ದಾರೆ ಎಂದು ಆರೋಪಿಸಿ ಮಲ್ಲಿಕಾ ಘಂಟಿ ಇಲ್ಲಿನ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೇ ಪ್ರಕರಣದ ವಿಚಾರಣೆಗೆ ಡಾ. ಮಲ್ಲಿಕಾ ಘಂಟಿ ಗೈರಾಗಿದ್ದರಿಂದ ಕೋರ್ಟ್ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ.

ಇದರ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಇದೇ ಪ್ರಕರಣದ ಆರೋಪಿಯಾಗಿದ್ದ ಅಂದಿನ ಪರೀಕ್ಷಾಂಗ ಕುಲಸಚಿವ ಪ್ರೊ. ಬೋಜಾ ನಾಯ್ಕ ಅವರ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ, ಉಳಿದ ಮೂವರ ವಿರುದ್ಧ ವಿಚಾರಣೆ ಇನ್ನು ನಡೆಯುತ್ತಿದೆ.
ಮಲ್ಲಿಕಾ ಘಂಟಿ ಅವರು, ಇತ್ತೀಚೆಗೆ ಸಮಾರಂಭವೊಂದರಲ್ಲಿ ಭಾಷಣ ಮಾಡುವಾಗ ''ಸರ್ಕಾರದಲ್ಲಿ ಸೂಟ್ ಕೇಸ್ ನೀಡದೆ ಯಾವ ಕೆಲಸವೂ ನಡೆಯುವುದಿಲ್ಲ. ಎಲ್ಲಿ ಎಲ್ಲವೂ ಹಣದ ಮೇಲೆಯೇ ನಿಂತಿರುತ್ತೆ'' ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು.
ಘಂಟಿ ಹೇಳಿಕೆಗೆ ಸರಕಾರದ ಕಡೆಯಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿಯೂ ಘಂಟಿ ಹೇಳಿಕೆಗೆ ಅಸಮಧಾನ ವ್ಯಕ್ತಪಿಡಿಸಿ ಹೇಳಿಕೆ ನಿಜವಾಗಿದ್ದರೆ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದರು.
ಬಳಿಕ ಮಲ್ಲಿಕಾ ಘಂಟಿ ತಾವು ಹಾಗೆ ಹೇಳಿಯೇ ಇಲ್ಲ. ನನ್ನ ಹೇಳಿಕೆಯನ್ನು ಸುದ್ದಿ ಮಾಧ್ಯಮಗಳು ತಿರುಚಿ ಪ್ರಸಾರ ಮಾಡಿವೆ ಎಂದು ಸ್ಪಷ್ಟನೆ ನೀಡಿ ಕೈತೊಳೆದುಕೊಂಡಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications