ಭದ್ರಾವತಿ ನಗರಸಭೆ ಉಪ ಚುನಾವಣೆ: ಜೆಡಿಎಸ್ಗೆ ಭರ್ಜರಿ ಗೆಲುವು
ಶಿವಮೊಗ್ಗ, ಸೆಪ್ಟೆಂಬರ್ 6: ತೀವ್ರ ಕುತೂಹಲ ಕೆರಳಿಸಿದ್ದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರಸಭೆ 29ನೇ ವಾರ್ಡ್ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ವಿಜಯಲಕ್ಷ್ಮಿ ಒಲಿದಿದ್ದಾಳೆ. ಜೆಡಿಎಸ್ ಅಭ್ಯರ್ಥಿ ನಾಗರತ್ನ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಯಾರಿಗೆಷ್ಟು ಮತ ಲಭಿಸಿದೆ?
ಭದ್ರಾವತಿ ನಗರಸಭೆಯ 29ನೇ ವಾರ್ಡ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ನಾಗರತ್ನ 1282 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಲೋಹಿತಾ ನಂಜಪ್ಪ 832 ಮತಗಳು, ಬಿಜೆಪಿ ಪಕ್ಷದ ಅಭ್ಯರ್ಥಿ ರಮಾ ವೆಂಕಟೇಶ್ 70 ಮತಗಳನ್ನು ಪಡೆದುಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ 450 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಯಾವ್ಯಾವ ಬೂತ್ನಲ್ಲಿ ಯಾರಿಗೆಷ್ಟು ಮತ?
29ನೇ ವಾರ್ಡ್ನಲ್ಲಿ ನಾಲ್ಕು ಬೂತ್ಗಳಿದ್ದವು. ಬೂತ್ ನಂಬರ್ 111ರಲ್ಲಿ ಜೆಡಿಎಸ್ 243, ಕಾಂಗ್ರೆಸ್ 143, ಬಿಜೆಪಿ 15 ಮತ ಪಡೆದಿದೆ. ಇಲ್ಲಿ ಒಟ್ಟು 402 ಮತಗಳು ಚಲಾವಣೆಯಾಗಿತ್ತು.

ಇನ್ನು ಬೂತ್ 112ರಲ್ಲಿ 420 ಮತ ಚಲಾವಣೆಯಾಗಿತ್ತು. ಈ ಪೈಕಿ ಜೆಡಿಎಸ್ 211, ಕಾಂಗ್ರೆಸ್ 195, ಬಿಜೆಪಿ 10 ಮತ ಪಡೆದಿವೆ. ಬೂತ್ 113ರಲ್ಲಿ 737 ಮತಗಳು ಚಲಾವಣೆಯಾಗಿದ್ದು, ಜೆಡಿಎಸ್ 485, ಕಾಂಗ್ರೆಸ್ 237, ಬಿಜೆಪಿ 12 ಮತಗಳು ಪಡೆದಿವೆ. ಬೂತ್ 114ರಲ್ಲಿ 641 ಮತಗಳು ಚಲಾವಣೆಯಾಗಿದ್ದವು. ಜೆಡಿಎಸ್ 343 ಕಾಂಗ್ರೆಸ್ 257, ಬಿಜೆಪಿ 33 ಮತ ಗಳಿಸಿದೆ.
16 ನೋಟಾ ಓಟ್
ಜಿದ್ದಾಜಿದ್ದಿನ ಕಣದಲ್ಲಿ ನೋಟಾ ಓಟುಗಳು ಕೂಡ ಚಲಾವಣೆಯಾಗಿದೆ. 16 ಮಂದಿ ನೋಟಾ ಮತಗಳನ್ನು ಚಲಾಯಿಸಿದ್ದಾರೆ. ಬೂತ್ ನಂಬರ್ 111ರಲ್ಲಿ 1, 112ರಲ್ಲಿ 4, 113ರಲ್ಲಿ 3, 114ರಲ್ಲಿ 8 ನೋಟಾ ಮತಗಳು ಚಲಾವಣೆಯಾಗಿದೆ.

ಪ್ರಾಬಲ್ಯ ಮೆರೆದ ಜೆಡಿಎಸ್
29ನೇ ವಾರ್ಡ್ನಲ್ಲಿ ಹಿಂದಿನಿಂದಲೂ ಜೆಡಿಎಸ್ ಪ್ರಾಬಲ್ಯವಿದೆ. ಈ ಚುನಾವಣೆಯ ಫಲಿತಾಂಶ ಇದನ್ನು ಪುನಃ ಸಾಬೀತುಪಡಿಸಿದೆ. ಈ ಹಿಂದೆ ಜೆಡಿಎಸ್ ಪಕ್ಷದ ಅನಿಲ್ ಕುಮಾರ್ ಈ ವಾರ್ಡ್ನಿಂದ ಗದ್ದಿದ್ದರು. ಮೀಸಲಾತಿ ಬದಲಾದ ಹಿನ್ನೆಲೆ ಪತ್ನಿ ನಾಗರತ್ನರನ್ನು ಕಣಕ್ಕಿಳಿಸಿದ್ದರು. ಈ ಬಾರಿಯೂ ಜನರು ಜೆಡಿಎಸ್ ಪರವಾಗಿ ಒಲವು ತೋರಿಸಿದ್ದಾರೆ.
ಜೆಡಿಎಸ್ ಪಾಳಯದಲ್ಲಿ ಸಂಭ್ರಮ
ತಮ್ಮ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸುತ್ತಿದ್ದಂತೆ ಜೆಡಿಎಸ್ ಪಾಳಯದಲ್ಲಿ ಸಂಭ್ರಮಾಚರಣೆ ಆರಂಭವಾಗಿದೆ. ಜೆಡಿಎಸ್ ಕಾರ್ಯಕರ್ತರು ಪಕ್ಷದ ಪರವಾಗಿ, ಪಕ್ಷದ ಮುಖಂಡರ ಪರವಾಗಿ ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ.

ನಗರಸಭೆಯಲ್ಲಿ ಬಲಾಬಲ ಹೇಗಿದೆ?
ಜೆಡಿಎಸ್ ಅಭ್ಯರ್ಥಿ ಗೆಲುವಿನಿಂದಾಗಿ ಭದ್ರಾವತಿ ನಗರಸಭೆಯಲ್ಲಿ ಜೆಡಿಎಸ್ ಹುಮ್ಮಸ್ಸು ಹೆಚ್ಚಾಗಿದೆ. 35 ವಾರ್ಡುಗಳ ಪೈಕಿ ಕಾಂಗ್ರೆಸ್ 18, ಜೆಡಿಎಸ್ 12, ಬಿಜೆಪಿ 4, ಪಕ್ಷೇತರ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications