ನಾನು ರಾಜಕೀಯಕ್ಕೆ ಬರಲ್ಲ: ಶಿವರಾಜ್ ಕುಮಾರ್
ಶಿವಮೊಗ್ಗ, ಮಾ.30: ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಜನರು ತೋರಿಸುತ್ತಿರುವ ಪ್ರೀತಿ, ಆದರ ಕಂಡು ನನ್ನ ಹೃದಯ ತುಂಬಿ ಬಂದಿದೆ. ಜನರ ನಿರೀಕ್ಷೆಗಳನ್ನು ನಾನು ಸುಳ್ಳು ಮಾಡುವುದಿಲ್ಲ ಎಂದು ಶಿವಮೊಗ್ಗದ ಜೆಡಿಎಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಹೇಳಿದ್ದಾರೆ. ಈ ನಡುವೆ ಪತ್ನಿ ಪರ ಪ್ರಚಾರ ಕಾರ್ಯನಿರತ ಶಿವರಾಜ್ ಅವರು ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಕೂಡಾ ಮಾತುಗಳನ್ನಾಡಿದ್ದಾರೆ.
ಗೀತಾ ಶಿವರಾಜ್ ಕುಮಾರ್ ಅವರು ಮೊದಲ ಹಂತದ ಚುನಾವಣಾ ಪ್ರಚಾರವನ್ನು ಮುಗಿಸಿದ್ದಾರೆ. ಶಿವಮೊಗ್ಗ, ಶಿಕಾರಿಪುರ, ಸಾಗರ ತಾಲೂಕುಗಳಲ್ಲಿ ಸಂಚರಿಸಿ ಜನರ ಪ್ರೀತಿ ಗಳಿಸಿದ್ದಾರೆ. ನಮ್ಮ ತಂದೆ ಬಂಗಾರಪ್ಪ ಅವರು ಬಡವರಿಗಾಗಿ ಘೋಷಿಸಿದ ಹಲವು ಯೋಜನೆಗಳನ್ನು ನಾನು ಮತ್ತೆ ಜಾರಿಗೆ ತರಲು ಯತ್ನಿಸುತ್ತೇನೆ. ಅಪ್ಪನ ಶ್ರೀರಕ್ಷೆ, ಜನರ ಆಶೀರ್ವಾದ ನನ್ನ ಮೇಲಿದೆ ಎಂದು ಗೀತಾ ಅವರು ಹೇಳಿದರು.
ಎರಡನೇ ಹಂತದ ಪ್ರಚಾರ ಕಾರ್ಯ ಭಾನುವಾರ ಆರಂಭಗೊಂಡಿದ್ದು ಭದ್ರಾವತಿ ತಾಲೂಕು ಸಿದ್ದಿಪುರದಲ್ಲಿ ಪತ್ನಿ ಪರ ಶಿವರಾಜ್ ಪ್ರಚಾರ ನಡೆಸಿದ್ದಾರೆ. ಜತೆಗೆ ನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]

ರಾಜಕೀಯಕ್ಕೆ ಬರಲ್ಲ: ಯಾವುದೇ ಕಾರಣಕ್ಕೂ ತಾವು ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸಂಬಂಧಿ ಕುಮಾರ್ ಬಂಗಾರಪ್ಪ ಹೇಳಿಕೆಗೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ತಾವು ನಟಿಸಿರುವ ಚಲನಚಿತ್ರ, ಚಿತ್ರಗೀತೆಗಳ ಪ್ರಸಾರಕ್ಕೆ ನಿಷೇಧ ಹೇರುವಂತೆ ಚುನಾವಣಾ ಆಯೋಗಕ್ಕೆ ಕೆಲವರು ಮನವಿ ಮಾಡಿರುವ ಕುರಿತಂತೆ ತಮಗೆ ಯಾವುದೇ ಮಾಹಿತಿಯಿಲ್ಲ. ಈ ಕುರಿತಂತೆ ತಮಗೇನೂ ಗೊತ್ತಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಶೂಟಿಂಗ್ ನಲ್ಲಿರುವ ವೇಳೆಯೇ ಮೊಬೈಲ್ ಮೂಲಕ ಪತ್ನಿ (ಗೀತಾ) ಭಾಗ ವಹಿಸುತ್ತಿದ್ದ ಸಭೆ - ಸಮಾರಂಭಗಳ ಭಾಷಣ ಕೇಳುತ್ತಿದ್ದೆ. ಚೆನ್ನಾಗಿ ಮಾತನಾಡುತ್ತಾಳೆ. ಬಂಗಾರಪ್ಪ ಮಗಳು ಎಂಬುದನ್ನು ಸಾಬೀತುಪಡಿಸಿದ್ದಾಳೆ ಎಂದು ಚಿತ್ರನಟ ಶಿವರಾಜ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಗೀತಾಗೆ ಮಹಿಳಾ ವರ್ಗದಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಇದು ತಮ್ಮ ಆತ್ಮವಿಶ್ವಾಸ ವೃದ್ಧಿಸುವಂತೆ ಮಾಡಿದೆ. ಜನತೆ ಬದಲಾವಣೆ ಬಯಸಿದ್ದಾರೆ. ಗೀತಾ ಗೆಲುವು ನಿಶ್ಚಿತ. ಶೂಟಿಂಗ್ ಕಾರ್ಯ ಮುಕ್ತಾಯವಾದ ಹಿನ್ನೆಲೆಯಲ್ಲಿ ಪತ್ನಿಯ ಪರವಾಗಿ ಪ್ರಚಾರಕ್ಕೆ ಆಗಮಿಸಿದ್ದೇನೆ. ಮೂರು ದಿನಗಳ ಕಾಲ ಜಿಲ್ಲೆಯಾದ್ಯಂತ ಪತ್ನಿಯ ಪರ ಪ್ರಚಾರ ಕಾರ್ಯ ನಡೆಸುತ್ತೇನೆ.ಮುಂದಿನ ದಿನಗಳಲ್ಲಿ ಹಲವು ಚಿತ್ರ ನಟ, ನಟಿಯರು ಪ್ರಚಾರದಲ್ಲಿ ಭಾಗವಹಿಸುವುದಾಗಿ ತಮಗೆ ಹೇಳಿದ್ದಾರೆ ಎಂದರು.
ಪುನೀತ್ ರಾಜ್ ಕುಮಾರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಪ್ರಚಾರಕ್ಕೆ ಬರುವುದು, ಬಿಡುವುದು ಆತನಿಗೆ ಬಿಟ್ಟ ವಿಚಾರವಾಗಿದೆ. ಪ್ರಚಾರಕ್ಕೆ ಬರುವಂತೆ ತಾವು ಯಾವುದೇ ಮನವಿ ಮಾಡಲು ಹೋಗುವುದಿಲ್ಲ. ನಾವು ಚೆನ್ನಾಗಿದ್ದೇವೆ. ಈ ಕುರಿತಂತೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ' ಎಂದು ತಿಳಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications