ರಾಗಿಗುಡ್ಡದಲ್ಲಿ ಜೈವಿಕ ವನ ಅಭಿವೃದ್ಧಿ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ, ಆ.12: ಶಿವಮೊಗ್ಗ ನಗರದಲ್ಲಿರುವ ರಾಗಿಗುಡ್ಡದಲ್ಲಿ ಲಭ್ಯವಿರುವ ಸುಮಾರು 20 ಎಕರೆ ಕಂದಾಯ ಜಮೀನಿನಲ್ಲಿ ಜೈವಿಕ ವನ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಬುಧವಾರದಂದು ಸೂಚನೆ ನೀಡಿದರು.
ಜೈವಿಕ ವನ ಅಭಿವೃದ್ಧಿ ಕುರಿತು ಜಿಲ್ಲಾಡಳಿತ ಸಭಾಂಗಣದಲ್ಲಿ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಸ್ಮಾರ್ಟ್ ಸಿಟಿ ಮುಖ್ಯ ಇಂಜಿನಿಯರ್ ಶಿವಕುಮಾರ್ ಕೆ.ಪಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರ್ ಮತ್ತಿತರರು ಉಪಸ್ಥಿತರಿದ್ದರು
ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದ ಹಸಿರೀಕರಣಕ್ಕಾಗಿ 3.86ಕೋಟಿ ರೂ. ಮೀಸಲಿರಿಸಲಾಗಿದ್ದು, ಇದನ್ನು ಬಳಸಿಕೊಂಡು ಜೈವಿಕ ವನ ಅಭಿವೃದ್ಧಿಪಡಿಲು ಉದ್ದೇಶಿಸಲಾಗಿದೆ. ಮಲೆನಾಡಿನಲ್ಲಿ ಸ್ಥಳೀಯವಾಗಿ ಲಭ್ಯವಿರುವ ಉತ್ತಮ ಸಸಿಗಳನ್ನು ಬಳಸಿಕೊಂಡು ವನ ಅಭಿವೃದ್ಧಿಪಡಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು. ಇದರಲ್ಲಿ ಮುಂದಿನ ಐದು ವರ್ಷಗಳ ನಿರ್ವಹಣೆಯೂ ಸೇರಿರಬೇಕು. ಒಟ್ಟು 7ಸಾವಿರ ಸಸಿಗಳನ್ನು ನೆಡುವ ಗುರಿಯನ್ನು ಹೊಂದಲಾಗಿದೆ ಎಂದು ಸಚಿವರು ತಿಳಿಸಿದರು.

ರಾಗಿಗುಡ್ಡದ 112 ಸರ್ವೆ ನಂಬರಿನಲ್ಲಿ ಒಟ್ಟು 69ಎಕ್ರೆ ಜಮೀನು ಇದ್ದು, ಇದರಲ್ಲಿ ವಿವಿಧ ಉದ್ದೇಶಗಳಿಗಾಗಿ ಒಟ್ಟು 43ಎಕ್ರೆ ಈಗಾಗಲೇ ಮಂಜೂರು ಮಾಡಲಾಗಿದೆ. ಇದರಲ್ಲಿ 5ಎಕ್ರೆ ಇಎಸ್ಐ ಆಸ್ಪತ್ರೆ, 8ಎಕ್ರೆ ಪ್ರಾದೇಶೀಕ ವಿಜ್ಞಾನ ಕೇಂದ್ರ, 5ಎಕ್ರೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಸೇರಿದೆ. ಇನ್ನೂ ಕೆಲವು ಪ್ರಸ್ತಾವನೆಗಳನ್ನು ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ.
ಇಲ್ಲಿ 18ಎಕ್ರೆ ಲಭ್ಯವಿದ್ದು, ಜೈವಿಕ ಉದ್ಯಾನಕ್ಕೆ ಬಳಸಿಕೊಳ್ಳಬಹುದಾಗಿದೆ. ಇನ್ನೂ 2ಎಕ್ರೆ ಲಭ್ಯವಿದೆ. ಇದೇ ರೀತಿ ಉದ್ದೇಶಿತ ವಾಜಪೇಯಿ ಬಡಾವಣೆಯಲ್ಲಿ 10ಎಕ್ರೆ ಮೀಸಲು ಅರಣ್ಯವಿದ್ದು ಇಲ್ಲಿಯೂ ಸಸಿಗಳನ್ನು ನೆಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ರಾಗಿಗುಡ್ಡದಲ್ಲಿ ಸುಮಾರು 20ಗುಂಟೆ ಜಮೀನು ಒತ್ತುವರಿ ಮಾಡಿ 22ಮನೆಗಳನ್ನು ನಿರ್ಮಿಸಲಾಗಿದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು. (ಮಾಹಿತಿ ಕೃಪೆ: ವಾರ್ತಾ ಇಲಾಖೆ)
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications