ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ 1600 ಬಸ್ಗಳ ಮೂಲಕ ಜನರನ್ನು ಕರೆತಂದಿದ್ದ ಬಿಜೆಪಿ: ಆರ್ಟಿಐ
ಬೆಂಗಳೂರು, ಏಪ್ರಿಲ್ 07: ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ನೂತನ ವಿಮಾನ ನಿಲ್ದಾಣಕ್ಕೆ ನೂರಾರು ಬಸ್ಗಳ ಮೂಲಕ ಜನರನ್ನು ಕರೆತರಲಾಗಿತ್ತು ಎಂಬ ಸತ್ಯ ಬಹಿರಂಗೊಂಡಿದೆ.
ಹೌದು, ಫೆಬ್ರವರಿ 27 ರಂದು ಪ್ರಧಾನಮಂತ್ರಿ ನರೆಂದ್ರ ಮೋದಿಯವರು ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದರು. ಈ ವೇಳೆ ಭರಪೂರ ಜನರು ಸಮಾರಂಭಕ್ಕೆ ಹರಿದು ಬಂದಿದ್ದರು. ಸದ್ಯ ಅವರೆನ್ನೆಲ್ಲ ಬಿಜೆಪಿ ಪಕ್ಷವೇ ಸುಮಾರು 1600 ಬಸ್ಗಳಲ್ಲಿ ಕರೆ ತಂದಿರುವ ಸತ್ಯ (ಮಾಹಿತಿ ಹಕ್ಕು ಅರ್ಜಿ) ಆರ್ಟಿಐ ಮೂಲಕ ತಿಳಿದು ಬಂದಿದೆ.

ಸೋಗಾನೆಯಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಗೆಂದೆ ಬಿಜೆಪಿಯು ಜಿಲ್ಲೆಯ ಮೂಲೆ ಮೂಲೆಗಳಿಂದ ಜನರನ್ನು ಕರೆತಂದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಸಲ್ಲಿಕೆಯಾಗಿದ್ದ ಆರ್ಟಿಐ ಅರ್ಜಿಗೆ ಕೆಎಸ್ಆರ್ಟಿಸಿ ಶಿವಮೊಗ್ಗ ವಿಭಾಗದ ಅಧಿಕಾರಿಗಳು ಉತ್ತರದಲ್ಲಿ ತಿಳಿಸಿದ್ದಾರೆ ಎಂದು ಬೆಂಗಳೂರು ವೈರ್ ವರದಿ ಮಾಡಿದೆ.
ಅರ್ಜಿದಾರರು ಆರ್ಟಿಐ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಗೆ ವಿವಿಧ ಜಿಲ್ಲೆಗಳ ಜನರನ್ನು ಕರೆತರಲು ಎಷ್ಟು ಕೆಎಸ್ಆರ್ಟಿಸಿ ಬಸ್ ಬಳಸಲಾಗಿತ್ತು, ಎಷ್ಟು ಹಣ, ಎಂಬೆಲ್ಲ ಮಾಹಿತಿ ಕೋರಿ ಆರ್ಟಿಐ ಸಲ್ಲಿಸಿದ್ದರು.
ಒಪ್ಪಂದದ ಮೇರೆಗೆ ಬಸ್ ಬುಕ್
ಈ ಅರ್ಜಿಗೆ ಕೆಎಸ್ಆರ್ಟಿಸಿ ಶಿವಮೊಗ್ಗ ವಿಭಾಗದ ಅಧಿಕಾರಿಗಳು ನೀಡಿದ ಉತ್ತರದಿಂದ ಸತ್ಯಾಂಶ ಬಯಲಾಗಿದೆ. ಅಧಿಕಾರಿಗಳು, ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭಕ್ಕಾಗಿ ಜನರನ್ನು ಕರೆ ತರಲು ಕೆಎಸ್ಆರ್ಟಿಸಿ ನಿಗಮದ 1600 ಬಸ್ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಬುಕ್ ಆಗಿದ್ದವು. ಅದಕ್ಕಾಗಿ ಶಿವಮೊಗ್ಗ ಕಾರ್ಯಪಾಲಕ ಇಂಜಿನಿಯರ್ 3.93 ಕೋಟಿ ರೂಪಾಯಿ ಹಣ ಪಡೆದಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ.

ಮೆಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಬಹುನಿರೀಕ್ಷಿತ ವಿಮಾನ ನಿಲ್ದಾಣವನ್ನು ಬಿಜೆಪಿ ಸರ್ಕಾರ ಒಟ್ಟು 450 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಅಂದು ಕರ್ನಾಟಕಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಒಟ್ಟು 3600 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ/ ಯೋಜನೆಗಳಿಗೆ ಅವರು ಚಾಲನೆ ನೀಡಿದ್ದರು.
ಹರ್ಷ ವ್ಯಕ್ತಪಡಿಸಿದ್ದ ಬಿ.ಎಸ್ ಯಡಿಯೂರಪ್ಪ
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಹೆಸರು ಇಡಬೇಕೆಂಬ ಆಗ್ರಹವು ಜೋರಾಗಿ ಕೇಳಿ ಬಂದಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಬಿ.ಎಸ್ ಯಡಿಯೂರಪ್ಪ ಅವರು ತಾವೇ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಸೂಚಿಸಿದ್ದರು. ಅದರಂತೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಅಂತಿಮಗೊಳಿಸಲಾಯಿತು.
ಈ ವಿಮಾನ ನಿಲ್ದಾಣದ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ, ಬಿ.ಎಸ್.ಯಡಿಯೂರಪ್ಪ ಅವರ ಕನಸು ಕುರಿತು ಮಾತನಾಡಿದರು. ಬಳಿಕ ಯಡಿಯೂರಪ್ಪನವರು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿಗಳು ಆಗಮಿಸಿದ್ದು ಸಂತೋಷವಾಗಿದೆ. ಈ ಹಿಂದೆಯೇ ಜನ್ಮದಿನದಂದು ವಿಮಾನ ನಿಲ್ದಾಣ ಉದ್ಘಾಟನೆ ಮಾಡೋಣ ಎಂದು ಅವರು ಹೇಳಿದ್ದರು. ಅಂದು ನೀಡಿದ ಮಾತಿನಂತೆ ಇಂದು ಪ್ರಧಾನಿ ನರೇಂದ್ರ ಮೋದಿಯವರು ಮಲೆನಾಡಿನಲ್ಲಿ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡುತ್ತಿರುವು ಸಂತಸ ತಂದಿದೆ ಎಂದು ಹೇಳಿದ್ದರು
ಉದ್ಘಾಟನೆಗೂ ಮುನ್ನ ಶಿವಮೊಗ್ಗ ವಿಮಾನ ನಿಲ್ದಾಣದ ಒಳಗೆ ಕನ್ನಡಕ್ಕೆ ಹೆಚ್ಚಿನ ಆದ್ಯತೆ ಸಿಕ್ಕಿಲ್ಲ. ಆಂಗ್ಲ ಭಾಷೆಯ ನಾಮಫಲಕಗಳನ್ನೇ ಹಾಕಲಾಗಿದೆ ಎಂಬ ಟೀಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬಂದಿದ್ದವು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications