Get Updates
Get notified of breaking news, exclusive insights, and must-see stories!

BJP vs BJP: ಬೆಳಗಾವಿಯಲ್ಲಿ ಸಭೆ ನಡೆಸಿದ ನಾಯಕರ ಕಡೆಗಣಿಸಿದರೆ ಬಿಜೆಪಿ ಇಬ್ಬಾಗ: ಈಶ್ವರಪ್ಪ ಭವಿಷ್ಯ

ಶಿವಮೊಗ್ಗ, ಆಗಸ್ಟ್ 12: ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಸಭೆ ನಡೆಸಿದ್ದು, ಆಘಾತ ತಂದಿದೆ. ಅವರು ಪಕ್ಷದಲ್ಲಿ ಏನೇನು ಅನುಭವಿಸಿದ್ದಾರೆ ಎಂಬುದನ್ನು ಹೇಳಿಕೊಂಡಿಲ್ಲ. ಬದಲಾಗಿ ಪಾದಯಾತ್ರೆ ಮಾಡುವುದಾಗಿ ತಿಳಿಸಿದ್ದಾರೆ. ಒಂದು ವೇಳೆ ಇದು ನಡೆದಿದ್ದೆ ಆದಲ್ಲಿ ಬಿಜೆಪಿ ಗಲ್ಲಿ ಗಲ್ಲಿಗಳಲ್ಲಿ, ತಾಲೂಕು ಮಟ್ಟದಲ್ಲಿ ಇಬ್ಬಾಗವಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಅಷ್ಟೇ ಅಲ್ಲದೇ ಸಭೆ ಸೇರಿದ 12 ನಾಯಕರ ಪರ ಬ್ಯಾಟ್ ಬೀಸಿದ್ದಾರೆ.

ಈ ಕುರಿತು ಶಿವಮೊಗ್ಗದಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಅವರು, ಸಭೆ ಸೇರಿದ ನಾಯಕರಲ್ಲಿ ಹಲವರು ಆರ್‌ಎಸ್‌ಎಸ್‌ ಸಂಘಟನೆಯಲ್ಲಿದ್ದವರು. ಬಿಜೆಪಿಯನ್ನು ಕಟ್ಟಿದವರು. ಪಕ್ಷದಲ್ಲಿ ತಮಗೆ ಆದ ನೋವಿನ ಬಗ್ಗೆ ಮಾತನಾಡಿಲ್ಲ. ಪಕ್ಷದ ಸಿದ್ಧಾಂತದ ಅಡಿ ಕೆಲಸ ಮಾಡಿದರೂ ಸಹಿತ ಅವರು ನೋವು ಉಂಡಿದ್ದಾರೆ. ಗಣೇಶ ಚತುರ್ಥಿ ಬಳಿಕ ಪಾದಯಾತ್ರೆ ಮಾಡುವುದಾಗಿ ಅವರು ಹೇಳಿಕೊಂಡಿದ್ದಾರೆ.

BJP High Command If Ignored 12 Disgruntled Leaders BJP will Divided in Karnataka KS Eshwarappa

ಕೇಂದ್ರ ನಾಯಕರು ಈ ಸಭೆ ನಡೆಸಿದ ನಾಯಕರನ್ನು ಕಡೆಗಣಿಸಬಾರದು. 12 ಜನ ಮಾತ್ರ ಸಭೆ ನಡೆಸಿದ್ದಾರೆ ಎಂದು ಕೇಂದ್ರದ ನಾಯಕರು ತಾತ್ಸಾರ ಮಾಡಬಾರದು. ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಅಸಮಾಧಾನಿತ ನಾಯಕರು ತಿಳಿಸಿದ್ದಾರೆ. ಅವರು ಪಾದಯಾತ್ರೆ ನಡೆಸಿದ್ದೇ ಆಲ್ಲಿ ಗಲ್ಲಿ ಗಲ್ಲಿಗಳಲ್ಲಿ ಪಕ್ಷ ಎರಡು ಹೋಳಾಗುತ್ತದೆ.

ಬಿಎಸ್‌ವೈ ಕುಟುಂಬಕ್ಕೆ ಅಧಿಕಾರ, ಬಿಜೆಪಿ ಸ್ಥಾನಕ್ಕೆ ಕುತ್ತು

ಲೋಕಸಭೆ ಚುನಾವಣೆಯ ವೇಳೆಗೆ ಯಡಿಯೂರಪ್ಪ ಪುತ್ರನನ್ನು ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದು ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿತ್ತು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬದ ಕೈಯಲ್ಲಿ ಅಧಿಕಾರ ನೀಡಿದ ಕಾರಣದಿಂದಲೇ ಲೋಕಸಭೆಯಲ್ಲಿ ಬಿಜೆಪಿ ಸ್ಥಾನ 25 ರಿಂದ 17ಕ್ಕೆ ಇಳಿದಿದೆ ಎಂದು ಈಶ್ವರಪ್ಪ ತಿಳಿಸಿದರು.

BJP High Command If Ignored 12 Disgruntled Leaders BJP will Divided in Karnataka KS Eshwarappa

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಪಕ್ಷ ಬಲ ಇದ್ದಾಗ ಹೆಚ್ಚು ಸ್ಥಾನ ಗಳಿಸಿತ್ತು. ಆದರೆ ಅದು ಈಗ ಸಾಧ್ಯವಾಗಲಿಲ್ಲ ಎಂದು ಬಿಜೆಪಿ ಜೆಡಿಎಸ್ ಮೈತ್ರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.

ಬಿಎಸ್‌ವೈ ಕುಟುಂಬದ ಮೇಲೆ ಯಾಕಿಷ್ಟು ಮೋಹ?

ಬಿಎಸ್ ಯಡಿಯೂರಪ್ಪ ಕುಟುಂಬದವರ ಕೈಯಲ್ಲಿ ಪಾರ್ಟಿ ಕೊಡಲು ಕೇಂದ್ರದ ನಾಯಕರಿಗೆ ಯಾಕಿಷ್ಟು ಮೋಹ. ಸಾಮೂಹಿಕ ನಾಯಕತ್ವ ಎಂದು ಕೋರ್ ಕಮಿಟಿಯಲ್ಲಿ ಚರ್ಚೆ ನಡೆಯುತ್ತಿತ್ತು. ಆದರೆ ಯಡಿಯೂರಪ್ಪನವರು ಸ್ವಜನ ಪಕ್ಷಪಾತ ಮಾಡಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಜಿಎಂ ಸಿದ್ದೇಶ್ವರ್ ಹೀಗೆ ಅನೇಕರು ಸಭೆ ನಡೆಸಿದ ಅವರು ಅಸಮಾಧಾನ‌ ಹೊರ ಹಾಕಿದ್ದಾರೆ. ಆದ್ದರಿಂದ ಕೂಡಲೇ ಹೈಕಮಾಂಡ್ ನಾಯಕರು ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ಸಜ್ಜಾಗಿರುವ ಈ ನಾಯಕರನ್ನು ಕರೆಯಿಸಿ ಮಾತನಾಡಬೇಕು. ಅವರ ನೋವು ಕೇಳುವ ಕೆಲಸ ಮಾಡಬೇಕು.

12 ಜನರು ಗುಂಪಿಗೆ ಮತ್ತಷ್ಟು ಜನ ಸೇರುತ್ತಾರೆ

ಇಲ್ಲವಾದರೆ ಈಗ 12 ಜನರು ಸೇರಿದಂತೆ ಮುಂದಿನ ದಿನಗಳಲ್ಲಿ ಮತ್ತಷ್ಟು ನಾಯಕರು ಈ ನೋವುಂಡವರ ಗುಂಪು ಸೇರಬಹುದು. ಮುಂದೆ ಪಕ್ಷ ಇಬ್ಬಾಗವಾಗಬಹುದು. ಅಲ್ಲ ಪಕ್ಷ ಸಂಘಟನೆಗೆ ಕುತ್ತು ಬರಲಿದ್ದು, ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಸ್ಥಾನ 66ಕ್ಕೆ ಕುಸಿದಿದೆ. ಹೀಗಿದ್ದರೂ ಕೇಂದ್ರ ಸರ್ಕಾರ ಅಸಮಾಧಾನಿತರನ್ನು ಗಮನಸದೇ ಹೋದಲ್ಲಿ ಪಕ್ಷ ಕಟ್ಟಿದವರಿಗೆ ನೋವಾಗುತ್ತದೆ ಎಂದು ಅವರು ತಿಳಿಸಿದರು.

ನಾವೆಲ್ಲ ಸಮಾಜಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ನನಗೆ ಯಾರ ಮುಲಾಜು ಇಲ್ಲ, ನನಗೆ ಪಕ್ಷ ಮುಖ್ಯ. ಪಕ್ಷದಲ್ಲಿನ ಬೆಳವಣಿಗೆಯ ಕುರಿತು ಕೇಂದ್ರದ ನಾಯಕರು ಬೇಗ ಗಮನ ಹರಿಸಬೇಕು ಎಂದು ಈಶ್ವರಪ್ಪ ಒತ್ತಾಯಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+