Breaking; ಆಯನೂರು ಮಂಜುನಾಥ್ ಫೇಸ್ಬುಕ್ ಹ್ಯಾಕ್, ಹಣಕ್ಕೆ ಬೇಡಿಕೆ
ಶಿವಮೊಗ್ಗ, ನವೆಂಬರ್ 22; ಬಿಜೆಪಿ ಶಾಸಕರೊಬ್ಬರ ಹೆಸರಿನಲ್ಲಿರುವ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಖಾತೆಯಲ್ಲಿ ಸ್ನೇಹಿತರಾಗಿರುವವರಿಗೆ ಮೆಸೇಜುಗಳನ್ನು ಕಳುಹಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ.
ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೆಸರಿನಲ್ಲಿರುವ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಫೇಸ್ ಬುಕ್ನಲ್ಲಿ ಸ್ನೇಹಿತರಾಗಿರುವವರಿಗೆ ಸಂದೇಶ ಕಳುಹಿಸಲಾಗುತ್ತಿದೆ.
ಫೇಸ್ ಬುಕ್ ಸ್ನೇಹಿತರಿಗೆ ಮೆಸೇಜ್ ಮಾಡಿರುವ ಹ್ಯಾಕರ್ಗಳು, ತಾವು ಸಮಸ್ಯೆಯಲ್ಲಿದ್ದು ತುರ್ತಾಗಿ ಹಣ ಕಳುಹಿಸುವಂತೆ ಮನವಿ ಮಾಡಿದ್ದಾರೆ. ಗೂಗಲ್ ಪೇ ಅಥವಾ ಫೋನ್ ಪೇ ಮೂಲಕ ಹಣ ವರ್ಗಾಯಿಸುವಂತೆ ಮನವಿ ಮಾಡಿದ್ದಾರೆ. 15 ಸಾವಿರ ರೂ. ತುರ್ತಾಗಿ ಬೇಕಿದೆ ಎಂದು ಸಂದೇಶದಲ್ಲಿ ಹೇಳುತ್ತಿದ್ದಾರೆ.

ಮೋಸ ಹೋಗಬೇಡಿ; ತಮ್ಮ ಖಾತೆ ಹ್ಯಾಕ್ ಆದ ಮಾಹಿತಿ ತಿಳಿಯುತ್ತಿದ್ದಂತೆ ಶಾಸಕ ಆಯನೂರು ಮಂಜುನಾಥ್ ಆಪ್ತ ಕಾರ್ಯದರ್ಶಿ ಮುನ್ನೆಚ್ಚರಿಕೆ ವಹಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ.
"ಶ್ರೀಯುತ ಆಯನೂರು ಮಂಜುನಾಥ್ ರವರ ಫೇಸ್ಬುಕ್ ಅಕೌಂಟ್ ಹ್ಯಾಕ್ ಮಾಡಿರುತ್ತಾರೆ. ಹಾಗಾಗಿ ಯಾವುದೇ ರೀತಿಯಲ್ಲಿ ಈ ಫೇಸ್ಬುಕ್ ಮೆಸೇಜ್ ಗೆ ಯಾರೂ ಸ್ಪಂದಿಸಬಾರದಾಗಿ ಕೋರಿದೆ" ಎಂದು ಸಂದೇಶ ರವಾನಿಸಿದ್ದಾರೆ.
ಹಲವರ ಖಾತೆ ಹ್ಯಾಕ್; ರಾಜಕೀಯ ನಾಯಕರ, ಐಪಿಎಸ್/ ಐಎಎಸ್ ಅಧಿಕಾರಿಗಳ ಫೇಸ್ಬುಕ್ ಖಾತೆ ಹ್ಯಾಕ್ ಮಾಡಿ ಹಣಕ್ಕಾಗಿ ಬೇಡಿಕೆ ಇಡುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ.
ನವೆಂಬರ್ 4ರಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್ ಖಾತೆ ಹ್ಯಾಕ್ ಆಗಿತ್ತು. ಸಚಿವರು ಆತ್ಮೀಯರೇ, ನನ್ನ ಅಧಿಕೃತ ಟ್ವಿಟರ್ ಖಾತೆಯು ಹ್ಯಾಕ್ ಆಗಿದ್ದು ಈಗಾಗಲೇ ಪರಿಶೀಲನೆಗೆ ಮನವಿ ಮಾಡಲಾಗಿದೆ. ನಾನು ಅಧಿಕೃತವಾಗಿ ಘೋಷಿಸುವವರೆಗೂ ಟ್ವಿಟರ್ ಮೂಲಕ ಬರುವ ಯಾವುದೇ ಸಂದೇಶಗಳನ್ನು ಪರಿಗಣಿಸಬಾರದೆಂದು ಮನವಿ ಮಾಡುತ್ತೇನೆ ಎಂದು ಸಂದೇಶ ಹಾಕಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications