Breaking; ಆಯನೂರು ಮಂಜುನಾಥ್ ಫೇಸ್ಬುಕ್ ಹ್ಯಾಕ್, ಹಣಕ್ಕೆ ಬೇಡಿಕೆ
ಶಿವಮೊಗ್ಗ, ನವೆಂಬರ್ 22; ಬಿಜೆಪಿ ಶಾಸಕರೊಬ್ಬರ ಹೆಸರಿನಲ್ಲಿರುವ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಖಾತೆಯಲ್ಲಿ ಸ್ನೇಹಿತರಾಗಿರುವವರಿಗೆ ಮೆಸೇಜುಗಳನ್ನು ಕಳುಹಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ.
ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೆಸರಿನಲ್ಲಿರುವ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಫೇಸ್ ಬುಕ್ನಲ್ಲಿ ಸ್ನೇಹಿತರಾಗಿರುವವರಿಗೆ ಸಂದೇಶ ಕಳುಹಿಸಲಾಗುತ್ತಿದೆ.
ಫೇಸ್ ಬುಕ್ ಸ್ನೇಹಿತರಿಗೆ ಮೆಸೇಜ್ ಮಾಡಿರುವ ಹ್ಯಾಕರ್ಗಳು, ತಾವು ಸಮಸ್ಯೆಯಲ್ಲಿದ್ದು ತುರ್ತಾಗಿ ಹಣ ಕಳುಹಿಸುವಂತೆ ಮನವಿ ಮಾಡಿದ್ದಾರೆ. ಗೂಗಲ್ ಪೇ ಅಥವಾ ಫೋನ್ ಪೇ ಮೂಲಕ ಹಣ ವರ್ಗಾಯಿಸುವಂತೆ ಮನವಿ ಮಾಡಿದ್ದಾರೆ. 15 ಸಾವಿರ ರೂ. ತುರ್ತಾಗಿ ಬೇಕಿದೆ ಎಂದು ಸಂದೇಶದಲ್ಲಿ ಹೇಳುತ್ತಿದ್ದಾರೆ.

ಮೋಸ ಹೋಗಬೇಡಿ; ತಮ್ಮ ಖಾತೆ ಹ್ಯಾಕ್ ಆದ ಮಾಹಿತಿ ತಿಳಿಯುತ್ತಿದ್ದಂತೆ ಶಾಸಕ ಆಯನೂರು ಮಂಜುನಾಥ್ ಆಪ್ತ ಕಾರ್ಯದರ್ಶಿ ಮುನ್ನೆಚ್ಚರಿಕೆ ವಹಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ.
"ಶ್ರೀಯುತ ಆಯನೂರು ಮಂಜುನಾಥ್ ರವರ ಫೇಸ್ಬುಕ್ ಅಕೌಂಟ್ ಹ್ಯಾಕ್ ಮಾಡಿರುತ್ತಾರೆ. ಹಾಗಾಗಿ ಯಾವುದೇ ರೀತಿಯಲ್ಲಿ ಈ ಫೇಸ್ಬುಕ್ ಮೆಸೇಜ್ ಗೆ ಯಾರೂ ಸ್ಪಂದಿಸಬಾರದಾಗಿ ಕೋರಿದೆ" ಎಂದು ಸಂದೇಶ ರವಾನಿಸಿದ್ದಾರೆ.
ಹಲವರ ಖಾತೆ ಹ್ಯಾಕ್; ರಾಜಕೀಯ ನಾಯಕರ, ಐಪಿಎಸ್/ ಐಎಎಸ್ ಅಧಿಕಾರಿಗಳ ಫೇಸ್ಬುಕ್ ಖಾತೆ ಹ್ಯಾಕ್ ಮಾಡಿ ಹಣಕ್ಕಾಗಿ ಬೇಡಿಕೆ ಇಡುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ.
ನವೆಂಬರ್ 4ರಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್ ಖಾತೆ ಹ್ಯಾಕ್ ಆಗಿತ್ತು. ಸಚಿವರು ಆತ್ಮೀಯರೇ, ನನ್ನ ಅಧಿಕೃತ ಟ್ವಿಟರ್ ಖಾತೆಯು ಹ್ಯಾಕ್ ಆಗಿದ್ದು ಈಗಾಗಲೇ ಪರಿಶೀಲನೆಗೆ ಮನವಿ ಮಾಡಲಾಗಿದೆ. ನಾನು ಅಧಿಕೃತವಾಗಿ ಘೋಷಿಸುವವರೆಗೂ ಟ್ವಿಟರ್ ಮೂಲಕ ಬರುವ ಯಾವುದೇ ಸಂದೇಶಗಳನ್ನು ಪರಿಗಣಿಸಬಾರದೆಂದು ಮನವಿ ಮಾಡುತ್ತೇನೆ ಎಂದು ಸಂದೇಶ ಹಾಕಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications