ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿರಾಶೆಯಾದಾಗ ಇಂಥ ಮಾತುಗಳು ಬರುತ್ತವೆ: ಬೇಳೂರಿಗೆ ಈಶ್ವರಪ್ಪ ಡಿಚ್ಚಿ!

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜೂನ್ 21: ಕಾಂಗ್ರೆಸ್ ನ ಮುಖಂಡ ಬೇಳೂರು ಗೋಪಾಲಕೃಷ್ಣ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ನಾಯಕರ ಬಗ್ಗೆ ಅವಹೇಳನಕಾರಿ ಆಗಿ ಮಾತನಾಡಿದ್ದಾರೆ. ಕೆಲವು ವ್ಯಕ್ತಿಗಳು ರಾಜಕೀಯದಲ್ಲಿ ನಿರಾಶೆ ಆದಾಗ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅದಕ್ಕೆ ಬೇಳೂರು ಗೋಪಾಲಕೃಷ್ಣ ಸಾಕ್ಷಿ ಎಂದು ಶಿವಮೊಗ್ಗ ನಗರ ಶಾಸಕ- ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಇಲ್ಲಿ ತಿರುಗೇಟು ನೀಡಿದರು.

ಶಿವಮೊಗ್ಗ ನಗರದಲ್ಲಿ ಗುರುವಾರ ವಿಶ್ವಯೋಗ ದಿನಾಚರಣೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಹೈಕಮಾಂಡ್ ಗೆ ಹವಾಲಾ ಹಣ ನೀಡಿರುವ ವಿಚಾರದ ಬಗ್ಗೆ ಇನ್ನು ನಾಲ್ಕು ದಿನಗಳ ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

BJP leader KS Eshwarappa hits back to Belur Gopalakrishna

ಸಮ್ಮಿಶ್ರ ಸರ್ಕಾರ ಕೆಡವಲು ಯತ್ನಿಸಿದರೆ ಆಪರೇಷನ್ ಹಸ್ತ ಗ್ಯಾರಂಟಿ: ಬೇಳೂರುಸಮ್ಮಿಶ್ರ ಸರ್ಕಾರ ಕೆಡವಲು ಯತ್ನಿಸಿದರೆ ಆಪರೇಷನ್ ಹಸ್ತ ಗ್ಯಾರಂಟಿ: ಬೇಳೂರು

ಇಂದು ವಿಶ್ವ ಯೋಗ ದಿನಾಚರಣೆ ಎಲ್ಲೆಡೆ ಅಚರಿಸಲಾಗುತ್ತಿದೆ. ಇದು ಸಂತಸದ ವಿಷಯ. ಯೋಗವು ಶಾರೀರಿಕವಾಗಿ ಆರೋಗ್ಯ ಕೊಡುವುದಲ್ಲದೆ, ಮಾನಸಿಕವಾಗಿ ಧೈರ್ಯವನ್ನು ತುಂಬುತ್ತದೆ. ಪ್ರತಿ ನಿತ್ಯ ವ್ಯಾಯಾಮ ಮಾಡಿದರೆ ಉತ್ತಮ ಆರೋಗ್ಯವನ್ನು ಪಡೆಯಬಹುದು ಎಂದರು.

'ಶೋಭಾ ಕರಂದ್ಲಾಜೆ ಅವರ ಮನೆ ಮೇಲೆ ಐಟಿ ದಾಳಿ ನಡೆಯಬೇಕು''ಶೋಭಾ ಕರಂದ್ಲಾಜೆ ಅವರ ಮನೆ ಮೇಲೆ ಐಟಿ ದಾಳಿ ನಡೆಯಬೇಕು'

ಇಡೀ ಪ್ರಪಂಚ ಯೋಗವನ್ನು ಮೆಚ್ಚಿದೆ. ಯಾವುದೇ ಜಾತಿ- ಧರ್ಮಕ್ಕೆ ಸೀಮಿತವಾಗಿರದೆ ಎಲ್ಲ ವರ್ಗದ ಜನರಿಗೆ ಆರೋಗ್ಯವನ್ನು ನೀಡಿದೆ. ಯೋಗವು ಜಗತ್ತಿಗೆ ಭಾರತವು ನೀಡಿರುವ ಅದ್ಭುತ ಕೊಡುಗೆ ಎಂದರು.

English summary
Shivamogga city MLA and BJP leader KS Eshwarappa hits back to Congress leader Belur Gopalakrishna for his statement against BJP state leaders. Eshwarappa spoke to media on International Yoga day, June 21st.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X