ರಾಜೀನಾಮೆ ಬಗ್ಗೆ ಆಯನೂರು ಮಂಜುನಾಥ್ ಅಧಿಕೃತ ಘೋಷಣೆ: ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ?
ಬೆಂಗಳೂರು, ಏಪ್ರೀಲ್ 03: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದೆ. ಈ ಭಾರಿ ಬಿಜೆಪಿಗೆ ಮತ್ತೊಬ್ಬ ನಾಯಕ ಶಾಕ್ ನೀಡಿದ್ದಾರೆ.
ಇತ್ತೀಚೆಗಷ್ಟೇ ಇಬ್ಬರು ವಿಧಾನಪರಿಷತ್ ಶಾಸಕರು ಮತ್ತು ಒಬ್ಬರ ಶಾಸಕರು ಕೇಸರಿ ಪಡೆ ಬಿಟ್ಟು ಬೇರೆ ಪಕ್ಷ ಸೇರಿದ್ದರು. ಇದೀಗ ಮತ್ತೊಬ್ಬರಾದ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ತಾವು ಬಿಜೆಪಿಯಲ್ಲಿನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ಬಿಜೆಪಿಯ ಹಿರಿಯ ಮುಖಂಡರಾದ ಆಯನೂರು ಮಂಜುನಾಥ್ ಅವರಿಗೆ ಶಾಸಕರಾಗಿ, ಲೋಕಸಭೆ ಸದಸ್ಯರಾಗಿ (ಸಂಸದ) ಸೇವೆ ಮಾಡಿದ ಅನುಭವ ಹೊಂದಿದ್ದಾರೆ. ಇವರು ಶಿವಮೊಗ್ಗ ಕ್ಷೇತ್ರದಿಂದ ಕಣ್ಣಕ್ಕಿಯುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಪಕ್ಷದ ನಾಯಕರಿಂದ ಟಿಕೆಟ್ ನೀಡುವ ಬಗ್ಗೆ ಯಾವುದೇ ಸ್ಪಂದನೆ ದೊರತಿಲ್ಲ. ಹೀಗಾಗಿ ಅವರು ತಮ್ಮ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಆಯನೂರು ಮಂಜುನಾಥ್ ಅವರ ಈ ನಿರ್ಧಾರದಿಂದ ಬಿಜೆಪಿ ಭದ್ರಕೋಟೆ ಎನ್ನಲಾಗುವ ಶಿವಮೊಗ್ಗದಲ್ಲಿ ಬಿಜೆಪಿಗೆ ಹಿನ್ನಡೆ ಆಗುವ ಇಲ್ಲವೇ ಚುನಾವಣೆ ಸಂದರ್ಭದಲ್ಲಿ ಒಂದಷ್ಟು ಕೆಟ್ಟ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗುತ್ತಿದೆ. ಆದರೆ ಇದ್ಯಾವುದನ್ನು ತಲೆ ಕೆಡಿಸಿಕೊಳ್ಳದ ಬಿಜೆಪಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು 2023ರ ಚುನಾವಣೆಯಲ್ಲಿ ಕಣಕ್ಕಿಳಿಸುವ ಬಗ್ಗೆ ನಿರ್ಧರಿಸಿದೆ. ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಇನ್ನೇನು ಬಿಡುಗಡೆಯಾಗಬೇಕಿದೆ.

ಯಾವ ಪಕ್ಷಕ್ಕೆ ಸೇರುತ್ತಾರೆ ಮಂಜುನಾಥ್?
ಈ ಎಲ್ಲ ಕಾರಣಗಳಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿರುವ ಆಯನೂರು ಮಂಜುನಾಥ್ ಅವರು ಯಾವ ಪಕ್ಷದೊಂದಿಗೆ ಕೈ ಜೋಡಿಸುತ್ತಾರೆ. ಇಲ್ಲ ಚುನಾವಣೆಯಲ್ಲಿ ತಾವು ಬಯಸಿದ ಶಿವಮೊಗ್ಗ ಕ್ಷೇತ್ರದಿಂದಲೇ ಪಕ್ಷೇತರವಾಗಿ ನಿಲ್ಲುತ್ತಾರಾ? ಎಂದು ಕಾದು ನೋಡಬೇಕಿದೆ. ಆದರೆ ತಾವು ಇಂತಹ ಪಕ್ಷ ಸೇರುತ್ತೇನೆ ಎಂಬುದರ ಬಗ್ಗೆ ಅವರು ಗೌಪ್ಯತೆ ಕಾಯ್ದುಕೊಂಡಿದ್ದಾರೆ. ಈ ಬಗ್ಗೆ ಸ್ಪಷ್ಟತೆ ಹೊರ ಬರಬೇಕಿದೆ.
ಶಿವಮೊಗ್ಗದಲ್ಲಿ ಮಂಗಳವಾರ ಸುದ್ದಿಗಾರ ಪ್ರಶ್ನೆಗಳಿಗೆ ಉತ್ತರಿಸಿದ ಮಾಜಿ ಶಾಸಕ ಆಯನೂರು ಮಂಜುನಾಥ್ ಅವರು, ಬಿಜೆಪಿಯ ಹಿರಿಯ ಮುಖಂಡ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಒಡೆದು ಆಳುವ ರಾಜಕಾರಣ ಮಾಡುತ್ತಿದ್ದಾರೆ. ನನ್ನ ಬಗ್ಗೆ ತುಂಬಾ ಕೇವಲವಾಗಿ ಅವರು ಮಾತನಾಡಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಅವರನ್ನೇ ನೇರವಾಗಿ ಗುರಿಯಾಗಿಸಿಕೊಂಡಿದ್ದೇನೆ. ಶೀಘ್ರದಲ್ಲೇ ನನ್ನ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಈಶ್ವರಪ್ಪ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ಮಂಜುನಾಥ್ ತಿಳಿಸಿದರು.
ಶಿವಮೊಗ್ಗದಲ್ಲಿ ಪಕ್ಷೇತರವಾಗಿ ಅಖಾಡಕ್ಕೆ ಮಂಜುನಾಥ್
ಮಂಜುನಾಥ್ ಅವರು ಬಿಜೆಪಿಯಿಂದ ಟಿಕೆಟ್ ಕೇಳಿದ್ದರು ಆದರೆ ಪಕ್ಷದಿಂದ ಅವರು ಕನಿಷ್ಠ ಭರವಸೆಯು ಸಿಗಲಿಲ್ಲ. ಈಶ್ವರಪ್ಪ ಎಷ್ಟು ಜನಪ್ರಿಯ ನಾಯಕರೆಂದರೆ ಶಿವಮೊಗ್ಗ ಹೊರತುಪಡಿಸಿ ಬೇರೆಲ್ಲೂ ಚುನಾವಣೆಯಲ್ಲಿ ಸ್ಪರ್ಧಿಸಿದರೂ ಅವರು ಗೆಲ್ಲಲು ಸಾಧ್ಯವಿಲ್ಲ. ಸ್ವಲ್ಪ ದಿನಗಳ ಹಿಂದೆ ಈಶ್ವರಪ್ಪ ಬೆಂಬಲಿಗರು ಮತದಾರರಿಗೆ ಹಂಚಲು ಇಟ್ಟುಕೊಂಡಿದ್ದರು ಎನ್ನಲಾದ ಸುಮಾರು 1.5 ಕೋಟಿ ಮೌಲ್ಯದ ಸೀರೆಯೊಂದಿಗೆ ಸಿಕ್ಕಿ ಬಿದ್ದಿದ್ದರು. ಮುಸ್ಲಿಮರು, ಹಿಂದೂಗಳು ಮತ್ತು ಶಿವಮೊಗ್ಗ ಪೊಲೀಸರಿಗೆ ಎಚ್ಚರಿಕೆ ನೀಡುತ್ತಿದ್ದೇನೆ. ಚುನಾವಣೆಗೂ ಮುನ್ನ ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯಬಹುದು ಎಂದು ಮಂಜುನಾಥ್ ಮಾಹಿತಿ ನೀಡಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications