ಶಿವಮೊಗ್ಗ: ಇನ್ಸ್ಟಾಗ್ರಾಂನಲ್ಲಿ ಬೆತ್ತಲೆ ಫೋಟೋ ಕಳುಹಿಸುವಂತೆ ಬೆದರಿಕೆ; ಯುವತಿ ಆತ್ಮಹತ್ಯೆ
ಶಿವಮೊಗ್ಗ, ಏಪ್ರಿಲ್ 9: ಇನ್ಸ್ಟಾಗ್ರಾಂ ಖಾತೆ ಮೂಲಕ ಬ್ಲಾಕ್ಮೇಲ್ ಮಾಡಿದ್ದರ ಪರಿಣಾಮ ಮನನೊಂದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆತ್ತಲೆ ಫೋಟೋ ಕಳುಹಿಸುವಂತೆ ಪದೇ ಪದೇ ಕರೆ ಮಾಡಿ ಬೆದರಿಕೆಯೊಡ್ಡುತ್ತಿದ್ದರಿಂದ ಯುವತಿ ಮನನೊಂದಿದ್ದಳು ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಘಟನೆ ಸಂಭವಿಸಿದೆ. 23 ವರ್ಷದ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಖಾತೆಯ ಮೂಲಕ ಕರೆ ಮಾಡಿ ಬ್ಲಾಕ್ಮೇಲ್ ಮಾಡಲಾಗುತ್ತಿತ್ತು.
ಏನಿದು ಪ್ರಕರಣ?
ಪದವಿ ಓದುತ್ತಿದ್ದ ಯುವತಿ ಇನ್ಸ್ಟಾಗ್ರಾಂ ಖಾತೆ ಹೊಂದಿದ್ದಳು. ಆಕೆಯ ಇನ್ಸ್ಟಾಗ್ರಾಂ ಖಾತೆಗೆ dlatico_ph ಎಂಬ ಖಾತೆಯ ಮೂಲಕ ವ್ಯಕ್ತಿಯೊಬ್ಬ ಪದೇ ಪದೇ ಕರೆ ಮಾಡುತ್ತಿದ್ದ. 'ನಿನ್ನ ಬೆತ್ತಲೆ ಫೋಟೋ ಕಳುಹಿಸು' ಎಂದು ಒತ್ತಾಯಿಸುತ್ತಿದ್ದ. ಒಂದು ವೇಳೆ ಫೋಟೋ ಕಳುಹಿಸದಿದ್ದರೆ ತನ್ನ ಬಳಿ ಇರುವ ಫೋಟೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಬೇಕಾಗುತ್ತದೆ ಎಂದು ಬೆದರಿಕೆ ಒಡ್ಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ವಿಡಿಯೋ ವೈರಲ್ ಮಾಡುವ ಬೆದರಿಕೆ
ಅಪರಿಚಿತನ ಬೆದರಿಕೆಗೆ ಯುವತಿ ಹೆದರಿದ್ದಳು. dlatico_ph ಖಾತೆಗೆ ವಿಡಿಯೋ ಕರೆ ಮಾಡಿ ಸಂಪೂರ್ಣ ದೇಹವನ್ನು ತೋರಿಸಿದ್ದಾಳೆ. ಆ ಬಳಿಕ ಬೆದರಿಕೆ ಮತ್ತಷ್ಟು ಹೆಚ್ಚಾಯಿತು. ಬೆತ್ತಲೆ ಫೋಟೋ ಕಳುಹಿಸಬೇಕು ಎಂದು ಬೆದರಿಕೆ ಒಡ್ಡಿದ್ದಾನೆ. 'ದೇಹ ತೋರಿಸಿದ ವಿಡಿಯೋ ತನ್ನ ಬಳಿ ಇದ್ದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಹೆದರಿಸಲು ಆರಂಭಿಸಿದ್ದಾನೆ.
ಕುಟುಂಬದ ಮುಂದೆ ನೋವು ಹೇಳಿದಳು
ಅಪರಿಚಿತನ ಬೆದರಿಕೆ ಹೆಚ್ಚಾದ ಹಿನ್ನೆಲೆ ಯುವತಿ ಪೋಷಕರಿಗೆ ವಿಚಾರ ತಿಳಿಸಿದ್ದಾಳೆ. ಧೈರ್ಯ ಹೇಳಿದ ಪೋಷಕರು ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದಾರೆ. ಶಿರಾಳಕೊಪ್ಪ ಠಾಣೆಗೆ ಹೋಗಿ ದೂರು ನೀಡಲು ಸಿದ್ಧವಾಗಿ ಬರುವಂತೆ ತಂದೆ ಮಗಳಿಗೆ ತಿಳಿಸಿದ್ದಾರೆ. ಕೊಠಡಿಯೊಳಗೆ ಹೋದ ಯುವತಿ ಬಾಗಿಲು ಹಾಕಿಕೊಂಡಿದ್ದಾಳೆ. ಬಹಳ ಹೊತ್ತು ಹೊರಗೆ ಬಾರದ ಹಿನ್ನೆಲೆ ಪೋಷಕರು ಬಾಗಿಲು ತಟ್ಟಿದ್ದಾರೆ.

ನೇಣು ಬಿಗಿದುಕೊಂಡ ಯುವತಿ
ಕೊಠಡಿಯೊಳಗೆ ಹೋಗಿ ನೋಡಿದಾಗ ಯುವತಿಯು ಮರದ ಗಾಳಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡಿದ್ದಳು. ಕೂಡಲೇ ಕುಣಿಕೆಯಿಂದ ಬಿಡಿಸಿ, ಆಕೆಯನ್ನು ಶಿರಾಳಕೊಪ್ಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರಿಶೀಲನೆ ನಡೆಸಿದ ವೈದ್ಯರು ಮಗಳು ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ.

Recommended Video
ಅಪರಿಚಿತನ ವಿರುದ್ಧ ದೂರು
INSTAGRAMನಲ್ಲಿ ಬೆದರಿಕೆ ಒಡ್ಡಿದ ವ್ಯಕ್ತಿಯೇ ಮಗಳ ಸಾವಿಗೆ ಕಾರಣ ಎಂದು ಪೋಷಕರು ದೂರು ನೀಡಿದ್ದಾರೆ. dlatico_ph ಖಾತೆಯನ್ನು ನಿರ್ವಹಿಸುತ್ತಿದ್ದಾತನನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications