ಶಿವಮೊಗ್ಗ; ಸ್ಫೋಟ ನಡೆದ ಪ್ರದೇಶದಲ್ಲಿವೆ ಸುಮಾರು 50 ಕ್ರಷರ್
ಶಿವಮೊಗ್ಗ, ಜನವರಿ 22: "ಈ ಪ್ರದೇಶದಲ್ಲಿ ಸುಮಾರು 40-50 ಕ್ರಷರ್ಗಳು ಕಾರ್ಯ ನಿರ್ವಹಣೆ ಮಾಡುತ್ತಿವೆ. ಜಿಲ್ಲಾಡಳಿತದಿಂದ ಅವರು ಲೈಸೆನ್ಸ್ ಪಡೆದಿದ್ದಾರೆ. ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ" ಎಂದು ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಹೇಳಿದರು.
ಶುಕ್ರವಾರ ಬೆಳಗ್ಗೆ ಬಿ. ವೈ. ರಾಘವೇಂದ್ರ ಶಿವಮೊಗ್ಗ ಸಮೀಪದ ಕಲ್ಲು ಕ್ರಷರ್ನಲ್ಲಿ ಭಾರೀ ಸ್ಫೋಟ ಸಂಭವಿಸಿದ ಪ್ರದೇಶಕ್ಕೆ ಭೇಟಿ ನೀಡಿದರು. "ಬೆಂಗಳೂರು ಮತ್ತು ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯದಳ ಸ್ಥಳಕ್ಕೆ ಆಗಮಿಸುತ್ತಿದೆ" ಎಂದರು.
"ಭಾರೀ ಶಬ್ದದ ಜೊತೆ ಹುಣಸೋಡು ಗ್ರಾಮದಲ್ಲಿ ಕಂಪನ ದಾಖಲಾಗಿದೆ. ಡೈನಾಮೆಟ್ ಅಥವ ಸ್ಫೋಟಕಗಳಿಂದಾಗಿ ಈ ಘಟನೆ ಸಂಭವಿಸಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ" ಎಂದು ಸಂಸದ ರಾಘವೇಂದ್ರ ಹೇಳಿದರು.

"ಈ ಪ್ರದೇಶದಲ್ಲಿ 40-50 ಕ್ರಷರ್ಗಳಿವೆ. ಜಿಲ್ಲಾಡಳಿತದಿಂದ ಅವರು ಲೈಸೆನ್ಸ್ ಪಡೆದಿದ್ದಾರೆ. ಜಲ್ಲಿಗಳನ್ನು ರೈಲ್ವೆಗೆ ಮಾತ್ರ ಪೂರೈಕೆ ಮಾಡುವುದಿಲ್ಲ. ಮನೆ ನಿರ್ಮಾಣ, ಸಾರ್ವಜನಿಕ ಕೆಲಸಗಳಿಗೂ ಪೂರೈಕೆ ಮಾಡಲಾಗುತ್ತದೆ" ಎಂದು ಸಂಸದರು ಸ್ಪಷ್ಟಪಡಿಸಿದರು.
ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಬಳಿಯ ಕ್ರಷರ್ಗೆ ಜಿಲೆಟಿನ್ ಕಡ್ಡಿಗಳನ್ನು ವಾಹನದಲ್ಲಿ ಸಾಗಣೆ ಮಾಡುವಾಗ ಅದು ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಗುರುವಾರ ರಾತ್ರಿ 10.30ರ ಸುಮಾರಿಗೆ ನಡೆದ ಸ್ಫೋಟದ ತೀವ್ರತೆಗೆ ಭಾರೀ ಶಬ್ದವೂ ಕೇಳಿ ಬಂದಿದೆ.
ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಬಳಿಯ ಕ್ರಷರ್ನಲ್ಲಿ ನಡೆದ ಸ್ಫೋಟದ ಸ್ಥಳಕ್ಕೆ ಸಂಸದ ಬಿ. ವೈ. ರಾಘವೇಂದ್ರ ಭೇಟಿ ನೀಡಿದರು.#Shivamogga @BYRBJP pic.twitter.com/m5S2iS6Bh7
— oneindiakannada (@OneindiaKannada) January 22, 2021
ಸಿದ್ದರಾಮಯ್ಯ ಟ್ವೀಟ್; ಶಿವಮೊಗ್ಗದಲ್ಲಿ ನಡೆದ ಸ್ಫೋಟದ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. "ಶಿವಮೊಗ್ಗ ನಗರ ಸಮೀಪ ಜಿಲೆಟಿನ್ ಸ್ಪೋಟಗೊಂಡು ಹಲವು ಮಂದಿ ಕಾರ್ಮಿಕರು ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. @CMofKarnataka ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಮೃತರ ಶೋಕತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು" ಎಂದು ಹೇಳಿದ್ದಾರೆ.
"ನಿರ್ಲಕ್ಷ್ಯ ತೋರುವ ಮೂಲಕ ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು @CMofKarnataka ಅವರನ್ನು ಒತ್ತಾಯಿಸುತ್ತೇನೆ. ರಾಜ್ಯದ ಹಲವೆಡೆ ಅಕ್ರಮ ಗಣಿಗಾರಿಕೆ ನಿರಾತಂಕವಾಗಿ ನಡೆಯುತ್ತಿರುವ ಆರೋಪ ಕೇಳಿಬರುತ್ತಿದ್ದು, ಅವುಗಳ ಮೇಲೆ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಿದೆ" ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications