ತೀರ್ಥಹಳ್ಳಿ; ಕಾಡಿನಲ್ಲಿ ಸುಟ್ಟ ಕಾರು, ಮೃತದೇಹ ಪತ್ತೆ!
ಶಿವಮೊಗ್ಗ, ಸೆಪ್ಟೆಂಬರ್ 28: ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಣ್ಯದಲ್ಲಿ ಸುಟ್ಟ ಕಾರು ಮತ್ತು ಮೃತದೇಹ ಪತ್ತೆಯಾಗಿದೆ. ಕೆಲವು ದಿನಗಳ ಹಿಂದೆ ಕಾರು ಸುಟ್ಟು ಹೋಗಿರುವ ಶಂಕೆ ಇದ್ದು, ಇಂದು ಪ್ರಕರಣ ಬೆಳಕಿಗೆ ಬಂದಿದೆ.
ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಮಿಟ್ಲುಗೋಡು ಎಂಬ ಹಳ್ಳಿಯ ಸನಿಹದ ದಟ್ಟ ಅರಣ್ಯ ಪ್ರದೇಶದಲ್ಲಿ ಕಾರು ಸುಟ್ಟು ಕರಕಲಾಗಿ ಪತ್ತೆಯಾಗಿದೆ. ಕಾರಿನೊಳಗೆ ಮೃತದೇಹ ಸಹ ಸುಟ್ಟ ಸ್ಥಿತಿಯಲ್ಲಿ ಸಿಕ್ಕಿದೆ.
ತೀರ್ಥಹಳ್ಳಿ ವಿಶೇಷ; ಸಿಎಂ, ಸ್ಪೀಕರ್ ಎಲ್ಲಾ ಹುದ್ದೆ ಸಿಕ್ಕಿದೆ ಕ್ಷೇತ್ರದ ಶಾಸಕರಿಗೆ
ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮಾರುತಿ ಕಂಪನಿಯ ಶಿಫ್ಟ್ ಕಾರಿನ ನಂಬರ್ ಪ್ಲೇಟ್ ಸಹ ಸುಟ್ಟು ಹೋಗಿದ್ದು, ಗುರುತು ಪತ್ತೆ ಸದ್ಯಕ್ಕೆ ಸಾಧ್ಯವಾಗಿಲ್ಲ.
7 ಮಂದಿ ಸಾವಿಗೀಡಾದ ಆಡಿ ಕಾರು ಅಪಘಾತದಲ್ಲಿ ಆಂಜನೇಯಸ್ವಾಮಿ ಸೇಫ್
ಕಾರಿನಲ್ಲಿ ಒಬ್ಬ ವ್ಯಕ್ತಿಯ ಕಳೇಬರ ಪೂರ್ಣ ಪ್ರಮಾಣದಲ್ಲಿ ಸುಟ್ಟುಹೋದ ಸ್ಥಿತಿಯಲ್ಲಿ ಕಂಡು ಬಂದಿದೆ. ಮಂಗಳವಾರ ಬೆಳಗ್ಗೆ ಉರುವಲು ತರಲು ಕೆಲವು ಗ್ರಾಮಸ್ಥರು ಕಾಡಿಗೆ ಹೋದಾಗ ಕಾರು ಪತ್ತೆಯಾಗಿದೆ.
ಪ್ರಾಣಿಗಳ ಆಹಾರಕ್ಕೆಂದು ಬಂದ ದೇಣಿಗೆಯಲ್ಲಿ ಐಷಾರಾಮಿ ಕಾರು ಖರೀದಿಸಿದ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ
ಬೆಂಕಿಗಾಹುತಿಯಾದ ಕಾರು ಮತ್ತು ಸುಟ್ಟ ಶರೀರಿ ನೋಡಿದ ಜನರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಆಗುಂಬೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇದೊಂದು ಆತ್ಮಹತ್ಯೆ ಪ್ರಕರಣವಿರಬಹುದು ಎಂದು ಸಹ ಶಂಕೆ ವ್ಯಕ್ತಪಡಿಸಲಾಗಿದೆ.
ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರ ತಂಡ ಸುಟ್ಟ ಕಾರಿನ ಮತ್ತು ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ಕೈಗೊಂಡಿದ್ದಾರೆ. ಕಾರು ಎಲ್ಲಿಂದ, ಯಾವಾಗ ಈ ಕಾಡಿಗೆ ಬಂತು. ಕಾರು ಸ್ಥಳೀಯರದ್ದೋ ಅಥವ ಬೇರೆ ಎಲ್ಲಿಂದಲೂ ಆಗಮಿಸಿದೆಯೇ? ಎಂಬುದು ತನಿಖೆ ಬಳಿಕ ತಿಳಿಯಲಿದೆ.
ಕಾರಿನ ಬಿಡಿ ಭಾಗಗಳು, ಎಂಜಿನ್ ಮುಂತಾದವುಗಳಿಂದ ಕಾರಿನ ಮಾಲೀಕ, ನೋಂದಣಿ ಕುರಿತು ಮಾಹಿತಿ ಸಿಗಬಹುದು. ಕಾರಿನಲ್ಲಿ ಇದ್ದವರು ಯಾರು? ಎಂಬ ದಿಕ್ಕಿನಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸಾಗರಕ್ಕೇ ಸೇರಿದ ಕಾರು; ತೀರ್ಥಹಳ್ಳಿಯ ಕಾಡಿನಲ್ಲಿ ಪತ್ತೆಯಾದ ಕಾರು ಸಾಗರ ತಾಲೂಕಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಕಾರಿನಲ್ಲಿ ಸಿಕ್ಕ ಮೃತದೇಹ ಯಾರದ್ದು? ಎಂದು ಎಲ್ಲಾ ಆಯಾಮದಲ್ಲೂ ತನಿಖೆ ಮುಂದುವರೆದಿದೆ. ಶಿವಮೊಗ್ಗ ಎಸ್ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತೀರ್ಥಹಳ್ಳಿ ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರ. ಆದ್ದರಿಂದ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಇದು ಆತ್ಮಹತ್ಯೆಯೋ?, ಯಾರೋ ಕೊಲೆ ಮಾಡಿ ಶವ ಸುಟ್ಟು ಹಾಕಿದ್ದಾರೆಯೋ? ಎಂಬುದು ತನಿಖೆ ಬಳಿಕ ತಿಳಿಯಲಿದೆ.