ಮಧು ಬಂಗಾರಪ್ಪಗೆ ಓಪನ್ ಆಫರ್ ನೀಡಿದ ಸಹೋದರ ಕುಮಾರ್ ಬಂಗಾರಪ್ಪ
ಶಿವಮೊಗ್ಗ, ಡಿ 14: ಕುಮಾರ್ ಮತ್ತು ಅವರ ಸಹೋದರ ಮಧು ಬಂಗಾರಪ್ಪ, ಇಬ್ಬರೂ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎನ್ನುವ ಸುದ್ದಿಗೆ, ಬಿಜೆಪಿ ಮುಖಂಡ, ಶಾಸಕ ಕುಮಾರ್ ಬಂಗಾರಪ್ಪ ಸ್ಪಷ್ಟನೆಯನ್ನು ನೀಡಿದ್ದಾರೆ.
ಮಧು ಬಂಗಾರಪ್ಪ, ಜೆಡಿಎಸ್ಸಿನಿಂದ ಒಂದು ಹೆಜ್ಜೆ ಹೊರಗಿಟ್ಟಿರುವ ಸುದ್ದಿ ರಹಸ್ಯವಾಗಿಯೇನೂ ಉಳಿದಿಲ್ಲ. ಈ ಸಂದರ್ಭವನ್ನು ಡಿ.ಕೆ.ಶಿವಕುಮಾರ್ ಬಳಸಿಕೊಂಡು, ಮಧು ಮತ್ತು ಕುಮಾರ್ ಸಹೋದರರಿಬ್ಬರನ್ನು ತಮ್ಮ ಪಕ್ಷದತ್ತ ಸೆಳೆಯುವ ಕಾರ್ಯತಂತ್ರ ರೂಪಿಸುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು.
ಇದಕ್ಕೆ ಸೊರಬದಲ್ಲಿ ಪ್ರತಿಕ್ರಿಯಿಸಿರುವ ಕುಮಾರ್ ಬಂಗಾರಪ್ಪ, "ನಾವಿಬ್ಬರೂ ಕಾಂಗ್ರೆಸ್ ಸೇರಲಿದ್ದೇವೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದೆಲ್ಲಾ ಸುಳ್ಳು ಮತ್ತು ಕಪೋಕಲ್ಪಿತ. ನನ್ನಲ್ಲಿ ಪಕ್ಷ ಬಿಡುವ ಯಾವ ಆಲೋಚನೆಯೂ ಇಲ್ಲ. ಬದಲಿಗೆ ನಾನೇ ಮಧುಗೆ ಆಫರ್ ಒಂದನ್ನು ನೀಡುತ್ತೇನೆ"ಎಂದು ಹೇಳಿದರು.
ತಮ್ಮ ಅಸೆಂಬ್ಲಿ ಕ್ಷೇತ್ರದ ಸೊರಬದಲ್ಲಿ ಮಾತನಾಡುತ್ತಿದ್ದ ಕುಮಾರ್, "ನಾವೆಲ್ಲಾ ಒಗ್ಗಟ್ಟಾಗಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪಾಲ್ಗೊಂಡು ಎಲ್ಲ ಕಡೆ ಬಿಜೆಪಿ ಅಭ್ಯರ್ಥಿಗಳೇ ಆಯ್ಕೆ ಆಗುವಲ್ಲಿ ಸಹಕರಿಸಬೇಕು"ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್
ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ ಮೂಲಕ ಸಹೋದರಿಬ್ಬರನ್ನು ಒಂದು ಗೂಡಿಸಲು ಡಿ.ಕೆ.ಶಿವಕುಮಾರ್ ಪ್ರಯತ್ನಿಸುತ್ತಿದ್ದಾರೆ. ಈಡಿಗ ಸಮುದಾಯದವರೇ ಆಗಿರುವ ಹರಿಪ್ರಸಾದ್, ಸಹೋದರರ ಬಳಿ ಒಗ್ಗಟ್ಟಿನ ಮಂತ್ರವನ್ನು ಬೋಧಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಬಿಎಸ್ವೈ ಸಕ್ರಿಯ ರಾಜಕಾರಣದಿಂದ ದೂರವಾಗುವ ಸಾಧ್ಯತೆಯಿದೆ. ಇದಾದ ನಂತರ ಕುಮಾರ್ ಬಂಗಾರಪ್ಪಗೆ ಗಾಡ್ ಫಾದರ್ ಇರುವುದಿಲ್ಲ ಎನ್ನುವ ವಿಚಾರವನ್ನು ಅವರಿಗೆ ಮನದಟ್ಟು ಮಾಡುವ ಕೆಲಸ ನಡೆಯುತ್ತಿದೆ ಎಂದು ಸುದ್ದಿಯಾಗಿತ್ತು.

ಮಾಜಿ ಶಾಸಕರು ಆಗೊಮ್ಮೆ, ಈಗೊಮ್ಮೆ ಕ್ಷೇತ್ರಕ್ಕೆ ಬರುತ್ತಿದ್ದಾರೆ
ಮಧು ಬಂಗಾರಪ್ಪ ಹೆಸರನ್ನು ಉಲ್ಲೇಖಿಸದೇ ಮಾತನಾಡುತ್ತಿದ್ದ ಕುಮಾರ್, "ಮಾಜಿ ಶಾಸಕರು ಆಗೊಮ್ಮೆ, ಈಗೊಮ್ಮೆ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಬರೀ ಪತ್ರಿಕಾಗೋಷ್ಠಿ ಮಾತ್ರ ನಡೆಸಿ, ವಾಪಸ್ ಹೋಗುತ್ತಿದ್ದಾರೆ. ನಾವಿಬ್ಬರೂ ಕಾಂಗ್ರೆಸ್ ಸೇರಲಿದ್ದೇವೆ ಎನ್ನುವ ಸುಳ್ಳು ಸುದ್ದಿಯನ್ನು ಹರಿಯಬಿಡಲಾಗುತ್ತಿದೆ"ಎಂದು ಅವರು ಹೇಳಿದರು.

ಸಂಸಾರದಲ್ಲಿ ಸಹೋದರರು ಜೊತೆಯಾಗಿ ಇರಬೇಕು ಎನ್ನುವುದು ಒಪ್ಪಿಕೊಳ್ಳುವ ವಿಚಾರ
"ಸಂಸಾರದಲ್ಲಿ ಸಹೋದರರು ಜೊತೆಯಾಗಿ ಇರಬೇಕು ಎನ್ನುವುದು ಒಪ್ಪಿಕೊಳ್ಳುವ ವಿಚಾರ. ಆದರೆ, ರಾಜಕೀಯದಲ್ಲಿ ಅದು ಸಾಧ್ಯವಿಲ್ಲ. ನಾನು ಬಿಜೆಪಿಯ ಕಾರ್ಯಕರ್ತ, ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ. ಬೇಕಿದ್ದಲ್ಲಿ, ರಾಜಕೀಯದಲ್ಲಿ ನೆಲೆ ಕಾಣಲು ತಡಕಾಡುತ್ತಿರುವ ಮಧು ಬಂಗಾರಪ್ಪ ಬಿಜೆಪಿಗೆ ಬರುವ ಹಾಗಿದ್ದಲ್ಲಿ ಬರಲಿ"ಎನ್ನುವ ಆಫರ್ ಅನ್ನು ಸಹೋದರನಿಗೆ ಕುಮಾರ್ ಬಂಗಾರಪ್ಪ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಕಾಂಗ್ರೆಸ್ಸಿಗೆ ಮಧು ಅವರನ್ನು ಸೇರ್ಪಡೆಗೊಳಿಸಿ, ಅವರನ್ನು ಲೋಕಸಭೆಯಿಂದ ಮತ್ತು ಕುಮಾರ್ ಬಂಗಾರಪ್ಪನವರಿಗೆ ಸೊರಬ ಕ್ಷೇತ್ರದ ಟಿಕೆಟ್ ನೀಡುವ ಆಫರ್ ಅನ್ನು ಮುಂದಿಡಲಾಗುತ್ತಿದೆ. ಸಹೋದರರಿಬ್ಬರು ವೈಷಮ್ಯವನ್ನು ಮರೆತು ಒಂದಾಗಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಯತ್ನಿಸುತ್ತಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಇವೆಲ್ಲವೂ ಕಪೋಕಲ್ಪಿತ ಎಂದು ಕುಮಾರ್ ಬಂಗಾರಪ್ಪ ಸ್ಪಷ್ಟನೆಯನ್ನು ನೀಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications