ಕೋಣಂದೂರಿನಲ್ಲಿ ಮಳೆ ಹೊಡೆತಕ್ಕೆ ಗೋಡೆ ಕುಸಿದು ಬಾಲಕ ಸಾವು
ತೀರ್ಥಹಳ್ಳಿ, ಆಗಸ್ಟ್.16: ಭಾರೀ ಮಳೆಗೆ ತಾಲೂಕಿನ ಕೋಣಂದೂರಿನ ಕೆಇಬಿ ಹಿಂಭಾಗದಲ್ಲಿ ವಾಸವಾಗಿರುವ ಕೂಲಿ ಕಾರ್ಮಿಕ ಅಯುಬ್ ಎಂಬುವವರ ಮನೆ ಗೋಡೆ ಕುಸಿದು ಅವರ ಮಗ ಮಸೂದ್ (5 ವರ್ಷ) ಇಂದು ಗುರುವಾರ ಬೆಳಗಿನ ಜಾವ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಮತ್ತು ಕೋಣಂದೂರು ಪೋಲಿಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗ್ಗೆ ಕಾಫಿ ಕುಡಿಯುತ್ತ ಕುಳಿತಿದ್ದ ಸಮಯದಲ್ಲಿ ಮಳೆಯಿಂದ ತೇವಗೊಂಡಿದ್ದ ಗೋಡೆ ಕುಸಿದು ಬಾಲಕನ ಮೇಲೆ ಬಿದ್ದ ಪರಿಣಾಮ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಕೂಲಿ ಕಾರ್ಮಿಕ ಅಯುಬ್ ಅವರದ್ದು ಬಡ ಕುಟುಂಬ. ಇದೀಗ ಮನೆಯಲ್ಲಿ ಎಲ್ಲರ ನೆಚ್ಚಿನವನಾಗಿದ್ದ ಮುದ್ದಿನ ಮಗ ಮಸೂದ್ ಕಳೆದುಕೊಂಡು ಕುಟುಂಬ ಅತೀವ ದುಃಖದಲ್ಲಿದ್ದು, ಪೋಷಕರ
ಆಕ್ರಂದನ ಮುಗಿಲು ಮುಟ್ಟಿದೆ.
ಶಿವಮೊಗ್ಗ ಸೇರಿದಂತೆ, ದಕ್ಷಿಣ ಕನ್ನಡ, ಬಳ್ಳಾರಿ, ಉತ್ತರ ಕನ್ನಡ ಭಾಗಗಳಲ್ಲಿ ಕಳೆದೆರೆಡು ವಾರಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣ ಬಾಬಾಬುಡನ್ ಗಿರಿ, ಮುಳ್ಳಯ್ಯನ ಗಿರಿ ಸಂಚಾರ ಸ್ಥಗಿತಗೊಳಿಸಲಾಗಿದೆ.

ಮಲೆನಾಡು ಭಾಗದಲ್ಲಿ ಮುಂದುವರೆದ ಮಳೆಯ ಅಬ್ಬರಕ್ಕೆ ಮಳೆಯ ನೀರು ನೇರವಾಗಿ ಮನೆಗಳಿಗೆ ನುಗ್ಗುತ್ತಿದ್ದು, ರಸ್ತೆ ಬದಿಯ ಮಣ್ಣು ಕುಸಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಗುರುವಾರ ಮುಂಜಾನೆಯಿಂದಲೇ ಮಳೆ ಸುರಿಯುತ್ತಿದೆ. ಕೆಲವೆಡೆ ಗಾಳಿ, ಮಳೆಯಾಗುತ್ತಿದೆ.
ಈ ನಡುವೆ ನೇತ್ರಾವತಿ, ಕುಮಾರಧಾರಾ ನದಿಗಳು ಅಪಾಯ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಪಾಯದ ಮಟ್ಟ ಮೀರಿದ ಕುಮಾರಾಧಾರಾ ನದಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸಂಪೂರ್ಣ ದ್ವೀಪವಾಗಿ ಮಾರ್ಪಟ್ಟಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications