ಜೋಗ ಅಭಿವೃದ್ಧಿಗೆ 700 ಕೋಟಿ ಹೂಡಿಕೆ ಮಾಡಲಿದ್ದಾರೆ ಬಿ.ಆರ್.ಶೆಟ್ಟಿ
ಶಿವಮೊಗ್ಗ, ಸೆಪ್ಟೆಂಬರ್, 08 : ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಸೆಳೆಯಲು ಮತ್ತಷ್ಟು ಯೋಜನೆಗಳು ಸಿದ್ಧವಾಗಲಿವೆ. ಕರ್ನಾಟಕ ಮೂಲದ ದುಬೈ ಉದ್ಯಮಿ ಬಿ.ಆರ್.ಶೆಟ್ಟಿ ಅವರು ಜೋಗ ಜಲಪಾತ ಮತ್ತು ಸುತ್ತ-ಮುತ್ತಲಿನ ಪ್ರದೇಶದ ಅಭಿವೃದ್ಧಿಗಾಗಿ 700 ಕೋಟಿ ರೂ. ಹೂಡಿಕೆ ಮಾಡುವ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಮೂರು ದಿನಗಳ 38ನೇ ಪೆಸಿಫಿಕ್ ಏಷ್ಯಾ ಟ್ರಾವೆಲ್ಸ್ ಮಾರ್ಟ್-2015 (ಪಾಟಾ)ದ ಎರಡನೇ ದಿನವಾದ ಸೋಮವಾರ ಕರ್ನಾಟಕದ ವಿವಿಧ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಉದ್ಯಮಿಗಳು ಸುಮಾರು 30 ಒಡಂಬಡಿಕೆಗಳಿಗೆ ಸಹಿ ಮಾಡಿದ್ದಾರೆ. [ಕನ್ನಡಿಗ ಬಿಆರ್ ಶೆಟ್ಟಿ ತೆಕ್ಕೆಗೆ ಟ್ರಾವೆಲ್ ಎಕ್ಸ್]

ಶಿವಮೊಗ್ಗದ ಜೋಗ, ಮೈಸೂರಿನ ಚಾಮುಂಡಿ ಬೆಟ್ಟ, ಕಬಿನಿ, ಕೊಡಗು, ಹಲಸೂರು ಕೆರೆಯಲ್ಲಿ ತೇಲುವ ಹೋಟೆಲ್ ನಿರ್ಮಾಣ ಸೇರಿದಂತೆ ವಿವಿಧ ಯೋಜನೆಗಳಿಗೆ ಹಣ ಹೂಡಿಕೆ ಮಾಡಲು ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ಸಮ್ಮುಖದಲ್ಲಿ ಅಧಿಕಾರಿಗಳು ಒಡಂಬಡಿಕೆ ಪತ್ರಗಳನ್ನು ವಿನಿಮಯ ಮಾಡಿಕೊಂಡರು. [ಫೋರ್ಬ್ ಪಟ್ಟಿ ಸೇರಿದ ಕನ್ನಡಿಗ ಬಿಆರ್ ಶೆಟ್ಟಿ]
ಜೋಗಕ್ಕೆ 700 ಕೋಟಿ ಹೂಡಿಕೆ : ಕರ್ನಾಟಕ ಮೂಲದ ದುಬೈ ಉದ್ಯಮಿ ಬಿ.ಆರ್.ಶೆಟ್ಟಿ ಅವರು ಜೋಗದ ಅಭಿವೃದ್ಧಿಗೆ 700 ಕೋಟಿ ಹೂಡಿಕೆ ಮಾಡುವ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಲಘು ವಿಮಾನ ನಿಲ್ದಾಣ, ಹೆಲಿಪ್ಯಾಡ್, ಸೆವೆನ್ ಸ್ಟಾರ್ ಕಾಟೇಜ್, ವಿಶ್ವದ ಅತಿದೊಡ್ಡ ಕಾರಂಜಿಯನ್ನು ಜೋಗದಲ್ಲಿ ನಿರ್ಮಿಸಲಾಗುತ್ತದೆ. [ಗಲ್ಫ್ ಶ್ರೀಮಂತರ ಪಟ್ಟಿಯಲ್ಲಿ ಕನ್ನಡಿಗ ಬಿ.ಆರ್ ಶೆಟ್ಟಿ]
ಜೋಗದಲ್ಲಿ ವರ್ಷಪೂರ್ತಿ ನೀರು ಹರಿಯುವಂತೆ ಮಾಡುವ ಯೋಜನೆಯೂ ಇದರಲ್ಲಿ ಸೇರಿದೆ. ಜೋಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿ, ಪಾದಚಾರಿ ಮಾರ್ಗಗಳ ಅಭಿವೃದ್ಧಿ, ಸೌರವಿದ್ಯುತ್ ಉತ್ಪಾದನಾ ಘಟಕ, ಅತ್ಯಾಧುನಿಕ ಸೌಲಭ್ಯವುಳ್ಳ ಆಸ್ಪತ್ರೆ ನಿರ್ಮಾಣ ಸೇರಿದಂತೆ ವಿವಿಧ ಯೋಜನೆಗಳು ಇದರಲ್ಲಿ ಸೇರಿವೆ.

ಕರ್ನಾಟಕ ಸರ್ಕಾರ ಈ ಎಲ್ಲಾ ಯೋಜನೆಗಳಿಗೆ ಅನುಮತಿ ನೀಡಿದ ಬಳಿಕ ಕಾಮಗಾರಿಯನ್ನು ಆರಂಭಿಸಲಾಗುತ್ತದೆ. ಕಾಮಗಾರಿ ಆರಂಭವಾದ ಐದು ವರ್ಷಗಳ ಬಳಿಕ ಜೋಗ ಜಲಪಾತ ಮತ್ತು ಸುತ್ತ-ಮುತ್ತಲಿನ 10 ಕಿ.ಮೀ. ಪ್ರದೇಶವನ್ನು ಅಭಿವೃದ್ಧಿಪಡಿಸಲಾಗುತ್ತದೆ. ಈ ಬಂಡವಾಳ ಹೂಡಿಕೆಯಿಂದಾಗಿ ಕನಿಷ್ಠ 4 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅಂದಾಜಿಸಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications