'ಅಲ್ಪಸಂಖ್ಯಾತರಾಗುತ್ತಿರುವ ಬ್ರಾಹ್ಮಣರು ಸಮಾಜದಲ್ಲಿ ಮೂಲೆಗುಂಪು'
ಹೊಸನಗರ, ಮೇ 31: ಬ್ರಾಹ್ಮಣ ಸಮುದಾಯದವರು ಅಲ್ಪಸಂಖ್ಯಾತರಾಗುತ್ತಿದ್ದು, ಸಮಾಜದಲ್ಲಿ ಮೂಲೆ ಗುಂಪಾಗುತ್ತಿದ್ದಾರೆ ಎಂದು ಭೀಮನಕಟ್ಟೆ ಮಠದ ರಘುವರೇಂದ್ರ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ಗಾಯತ್ರಿ ಮಂದಿರದಲ್ಲಿ ನಡೆದ ತಾಲೂಕು ಬ್ರಾಹ್ಮಣ ಮಹಾಸಭಾದ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಸ್ವಾಮೀಜಿ ಮಾತನಾಡಿದರು.[ಬ್ರಾಹ್ಮಣರನ್ನು ಕಂಡರೆ ನಗಬೇಕೋ ಅಳಬೇಕೋ!]
ಧರ್ಮವನ್ನು ಪಾಲಿಸುವವರನ್ನು ಸಮಾಜವು ಗುರುತಿಸುತ್ತದೆ, ಗೌರವಿಸುತ್ತದೆ. ಆದ್ದರಿಂದ ಬ್ರಾಹ್ಮಣರು ಗಾಯತ್ರಿ ಜಪ ಅನುಷ್ಠಾನ ಹಾಗೂ ಷಡ್ಕರ್ಮವನ್ನು ಕಡ್ಡಾಯವಾಗಿ ಮಾಡಲೇ ಬೇಕು. ಕಾನ್ವೆಂಟ್ ಗಳ ಪ್ರಭಾವದಿಂದ ನಮ್ಮ ರಾಮಾಯಣ, ಮಹಾಭಾರತ, ಭಗವದ್ಗೀತೆಗಳ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಕಡಿಮೆ ಆಗುತ್ತಿದೆ. ಜತೆಗೆ ಜ್ಞಾನವೂ ಕಣ್ಮರೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಪೋಷಕರು ಈ ಬಗ್ಗೆ ಗಮನ ಹರಿಸಬೇಕು ಎಂದು ಸಲಹೆ ಮಾಡಿದರು.[ಬ್ರಾಹ್ಮಣರನ್ನು ಹಿಗ್ಗಾಮಗ್ಗಾ ಬೈಯುವ ಮಂದಿಗೆ ಕೆಲ ಪ್ರಶ್ನೆ!]

ಈ ಕಾರ್ಯಕ್ರಮದಲ್ಲಿ ನಾಟಿ ವೈದ್ಯೆ ಭಾಗಿಮನೆ ಲಕ್ಷ್ಮೀದೇವಮ್ಮ ಮತ್ತು ಯಕ್ಷಗಾನ ಕಲಾವಿದ ಅಡಿಕೆಚಿನಿ ಶ್ರೀನಿವಾಸರಾವ್ ಅವರನ್ನು ಸನ್ಮಾನ ಮಾಡಲಾಯಿತು.
ಇನ್ನು ಬ್ರಾಹ್ಮಣ ಹಾಗೂ ಬ್ರಾಹ್ಮಣ್ಯ ಕುರಿತು ಪುತ್ತೂರಾಯ ಉಪನ್ಯಾಸವನ್ನು ನೀಡಿದರು. ವಿದ್ಯಾ ವಿನಯ ಭಟ್, ಲತಾ ಉಡುಪ ಅವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications